ತೊಗರಿ ಖರೀದಿ ಗೊಂದಲ ಇತ್ಯರ್ಥಕ್ಕೆ ವಿಳಂಬ

ಕೇಂದ್ರದ ಒಪ್ಪಿಗೆಗೆ ಕಾಯುತ್ತಿದೆಯೇ ರಾಜ್ಯಸರ್ಕಾರ ಖರೀದಿಸಿದ ತೊಗರಿ ಒತ್ತೆಯಿಟ್ಟು ಹಣ ಪಾವತಿಸಲು ಸಲಹೆ

Team Udayavani, Feb 16, 2020, 10:47 AM IST

16-February-2

ಆಳಂದ: ಆರ್ಥಿಕ ಭಾರ ಬಿದ್ದರೂ ಪರವಾಗಿಲ್ಲ, ರೈತರಿಂದ 10 ಕ್ವಿಂಟಲ್‌ ಬದಲು 20 ಕ್ವಿಂಟಲ್‌ ತೊಗರಿ ಖರೀದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬೀದರ್‌ ಗೆ ಆಗಮಿಸಿದಾಗ ಭರವಸೆ ನೀಡಿದ್ದರು. ಆದರೆ ಈ ಭರವಸೆ ಇನ್ನೂ ಈಡೇರದೇ ಇರುವುದು ರೈತರಲ್ಲಿ ಆತಂಕ ಮೂಡಿಸಿದೆ.

20 ಕ್ವಿಂಟಲ್‌ ತೊಗರಿ ಖರೀದಿಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರ ಬೀಳದೇ ಇರುವುದರಿಂದ ರೈತ ಸಹಕಾರಿ ಸಂಘಗಳು ಗೊಂದಲದಲ್ಲಿವೆ. ಭರವಸೆ ಈಡೇರಿಕೆಗೆ ಅಡ್ಡಿ ಏನು: ಫೆ.7ರಂದು 20 ಕ್ವಿಂಟಲ್‌ ತೊಗರಿ ಖರೀದಿ ಮಾಡುವ ಕುರಿತು ಮುಖ್ಯಮಂತ್ರಿಗಳು ಘೋಷಿಸಿದ್ದರು. ಅಲ್ಲದೇ ಅದೇ ದಿನ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು. ಆದರೆ ಕೇಂದ್ರ ಸರ್ಕಾರ 17 ಡಿಸೆಂಬರ್‌ 2019ರಂದು 5800 ರೂ. ಎಂ.ಎಸ್‌.ಪಿ ದರದಲ್ಲಿ ಒಂದು ಲಕ್ಷ 85 ಸಾವಿರ ಮ್ಯಾಟ್ರಿಕ್‌ ಟನ್‌ ಬೇಳೆ ಕಾಳು ಖರೀದಿ ಮಾಡಬೇಕು ಎಂಬ ಆದೇಶಿಸಿದೆ. ಹೆಚ್ಚುವರಿ ಖರೀದಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವೊಲಿಸಿ ಮರು ಆದೇಶಕ್ಕೆ ಒತ್ತಾಯಿಸಬೇಕಾಗಿದೆ.

ಸದ್ಯ ಕೇಂದ್ರ ಸರ್ಕಾರ 20 ಲಕ್ಷ ಮ್ಯಾಟ್ರಿಕ್‌ ಟನ್‌ ಆಮದು ಮಾಡಿಕೊಂಡ ಬಫರ್‌ ಸ್ಟಾಕ್‌
ಹೊಂದಿರುವುದೇ ತೊಗರಿ ಖರೀದಿಗೆ ಅಡ್ಡಿಯಾಗಿದೆ ಎನ್ನಲಾಗಿದೆ. ಕಾರಣ ಕೇಂದ್ರ ಸರ್ಕಾರ ಬಫರ್‌ ಸ್ಟಾಕ್‌ನಿಂದ ಬೇಳೆಕಾಳುಗಳು ಖರೀದಿ ಮಾಡಬೇಕು ಎಂದು ರಾಜ್ಯಗಳಿಗೆ ಒತ್ತಾಯ ಮಾಡುತ್ತಿದೆ ಎಂಬುದು ರೈತ ಮುಖಂಡರ ವಾದವಾಗಿದೆ.

ಪ್ರಸಕ್ತ ವರ್ಷದಲ್ಲಿ ತೊಗರಿ ಕೇಂದ್ರಗಳಲ್ಲಿ ಸುಮಾರು ಮೂರು ಲಕ್ಷ ರೈತರು ಮಾರಾಟಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ಒಬ್ಬರಿಂದ 20 ಕ್ವಿಂಟಲ್‌ ಎಂದರೆ ಆರು ಲಕ್ಷ ಮೆಟ್ರಿಕ್‌ ಟನ್‌ ಖರೀದಿಸಬೇಕಾಗುತ್ತದೆ. ಈ ಅಂದಾಜಿನ ಪ್ರಕಾರ 3600 ಕೋಟಿ ರೂ. ಬೇಕಾಗುತ್ತದೆ. ಸದ್ಯ ರಾಜ್ಯದಲ್ಲಿ 1.85 ಲಕ್ಷ ಮೆಟ್ರಿಕ್‌ ಟನ್‌ಗೆ ಕೇಂದ್ರ ಸರ್ಕಾರ ಹಣ ನೀಡುತ್ತದೆ. 20 ಕ್ವಿಂಟಲ್‌ ಖರೀದಿಸಿದರೆ ದ್ವಿಗುಣವಾಗಿ ಸುಮಾರು ಎರಡುವರೆ ಸಾವಿರ ಕೋಟಿ ರೂ. ನೀಡಬೇಕಾಗುತ್ತದೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ರಾಜ್ಯ ಅಥವಾ ಕೇಂದ್ರ ಎರಡೂ ಸರ್ಕಾರಗಳು ಸೇರಿ ಭರಿಸಬೇಕೋ ಅಥವಾ ರಾಜ್ಯವೇ ಈ ಹಣ ಹೊಂದಿಸಿ ನೀಡಬೇಕೋ ಎನ್ನುವುದು ಇತ್ಯರ್ಥವಾಗಿದೆ ಉಳಿದಿದೆ. ಇದರಿಂದ ಖರೀದಿ ಮತ್ತು ಮಾರಾಟದಲ್ಲಿ ಅನುಮಾನ ಉಂಟಾಗಿದೆ.

ತೊಗರಿ ಬೆಳೆದ ಪ್ರದೇಶದಿಂದ ಏಕೈಕ ಸಚಿವ ಪ್ರಭು ಚವ್ಹಾಣ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಅಲ್ಲದೇ, ಕಲಬುರಗಿ, ಬೀದರ, ವಿಜಯಪುರ ಜಿಲ್ಲೆಯ ಸಂಸದರಿಂದ ತೊಗರಿ ಖರೀದಿಗೆ ಒತ್ತಡದ ಕುರಿತು ಕೂಗು ಕೇಳಿಬರುತ್ತಿಲ್ಲ.
ಕೇಂದ್ರಕ್ಕೆ ಮುಖ್ಯಮಂತ್ರಿಗಳು ಈ ಕುರಿತು ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ 20 ಕ್ವಿಂಟಲ್‌ ತೊಗರಿ ಖರೀದಿಗೆ ಒಪ್ಪಿಗೆ ನೀಡಿದರೆ ಮಾತ್ರ ಖರೀದಿಸಲಾಗುವುದು ಎನ್ನಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಜನವರಿ ಮೊದಲ ವಾರದಲ್ಲಿ ತೊಗರಿ ಖರೀದಿ ಆರಂಭಿಸಲಾಗಿತ್ತು. ಈ ವರ್ಷ ಫೆ.11ಕ್ಕೆ ಖರೀದಿ ಆರಂಭವಾಗಿದೆ.

ನೋಂದಣಿಗೆ ಪರದಾಡಿದ ರೈತ: ಬೆಳೆ ದರ್ಶಕ, ಭೂಮಿ ಫ್ರೂಟ್ಸ್‌ ಹಾಗೂ ಎನ್‌ಐ ಆ್ಯಪ್‌ಗ್ಳ ಮೂಲಕ ಸರ್ಕಾರ ರೈತರಿಂದ ತೊಗರಿ ಖರೀದಿ ಮಾಡುತ್ತಿದೆ. ಬೆಳೆ ದರ್ಶಕ ಆ್ಯಪ್‌ನಲ್ಲಿ ತೊಗರಿ ಬಿತ್ತಿದ ಹೊಲದಲ್ಲಿ ಜೋಳ, ಹತ್ತಿ ಇನ್ನಿತರ ಬೆಳೆ ತೋರಿಸುತ್ತಿದೆ. ಜಿಲ್ಲೆಯಲ್ಲಿ ಸುಮಾರು
25 ಸಾವಿರ ಎಕರೆಯಲ್ಲಿ ತೊಗರಿ ಬಿತ್ತಿದ ರೈತರನ್ನು ನೋಂದಣಿ ಮಾಡಿಕೊಳ್ಳಲು ನಿರಾಕರಿಸಲಾಗಿದೆ. ಈ ಬಗ್ಗೆ ರಾಜ್ಯದ ಕೃಷಿ ಮಾರುಕಟ್ಟೆ ಸಚಿವರಿಗೆ ಈ ಭಾಗದ ರೈತ ಮುಖಂಡರು ಸಂಬಂಧಿ ತ ಸಚಿವರು, ಅಧಿಕಾರಿಗಳ ಗಮನಕ್ಕೆ ತಂದರೂ ನೋಂದಣಿ ಸಮಸ್ಯೆ ಇತ್ಯರ್ಥಗೊಳ್ಳದೆ ಇರುವುದು ತೊಗರಿ ಬೆಳೆದವರಿಗೆ ನುಂಗದ ತುತ್ತಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.