25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮರೆಪ್ಪ

ಸುರಕ್ಷಾ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಬದ್ಧ

Team Udayavani, Jun 7, 2020, 4:27 PM IST

07-June-18

ಸಾಂದರ್ಭಿಕ ಚಿತ್ರ

ಆಳಂದ: ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ಸುಮಾರು ಮೂರು ತಿಂಗಳ ಬಳಿಕ ಜೂ.25ರಿಂದ ಜು.4ರವರೆಗೆ ನಡೆಸಲು ಉದ್ದೇಶಿಸಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಾಮಾಜಿಕ ಅಂತರ ಕಾಪಾಡಿ ಎಲ್ಲ ಸುರಕ್ಷಾ ಕ್ರಮಗಳೊಂದಿಗೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಆರಂಭಿಸಿದೆ.

ತಾಲೂಕಿನಲ್ಲಿ 18 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, 96 ಪ್ರೌಢಶಾಲೆಗಳ ಒಟ್ಟು 5011 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ಸರ್ಕಾರಿ 48, ಅನುದಾನಿತ 11 ಮತ್ತು ಅನುದಾನ ರಹಿತ 37 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಒಟ್ಟು 5011 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತುದಿಗಾಲಲ್ಲಿ ನಿಂತುಕೊಂಡಿದ್ದಾರೆ.

ಈ ಕುರಿತು ಶಿಕ್ಷಣ ಇಲಾಖೆ ಪಟ್ಟಣದಲ್ಲಿ ಸರ್ಕಾರಿ ಬಾಲಕರ, ಎಂಬಿಎಚ್‌ಸಿ, ಎಲ್‌ಎನ್‌ಜೆಪಿ ಈ ಮೂರು ಪರೀಕ್ಷಾ ಕೇಂದ್ರ ತೆರೆದಿದ್ದು, ಈಗಾಗಲೇ ಕೋವಿಡ್‌-19 ಸೋಂಕು ಪತ್ತೆಯಾಗಿ ಗ್ರಾಮ ಸೀಲ್‌ಡೌನ್‌ ಆದರೆ ಇಂಥ ಪರಿಸ್ಥಿತಿಯಲ್ಲಿ ತುರ್ತು ಪರಿಸ್ಥಿತಿಯಲ್ಲಿ ಕೇಂದ್ರಗಳ ಬದಲಾವಣೆ ಮಾಡಿದರೆ ಪಟ್ಟಣದಲ್ಲಿ ಎರಡು ಹೆಚ್ಚುವರಿ ಕೇಂದ್ರಗಳನ್ನು ತೆರೆದು ಪರೀಕ್ಷೆ ನಡೆಸಲು ಮುಂಜಾಗ್ರತಾವಾಗಿ ಸಿದ್ಧತೆ ಮಾಡಿಕೊಳ್ಳತೊಡಗಿದೆ.

ಗ್ರಾಮೀಣ ಭಾಗದಲ್ಲಿನ 15 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಕೆಲವು ಗ್ರಾಮಗಳಲ್ಲಿ ಕೋವಿಡ್‌-19 ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಒಂದೊಮ್ಮೆ ಗ್ರಾಮವೇ ಸೀಲ್‌ಡೌನ್‌ ಆದರೆ ಇಂಥ ಹೊತ್ತಿನಲ್ಲಿ ಪರೀಕ್ಷಾ ಕೇಂದ್ರ ಬದಲಾಯಿಸಿ ಪರೀಕ್ಷೆ ನಡೆಸುವುದಕ್ಕಾಗಿ ಯಳಸಂಗಿ, ಭೂಸನೂರ, ಮಾದನಹಿಪ್ಪರಗಾ, ಖಜೂರಿ ಮತ್ತು ವಿ.ಕೆ.ಸಲಗರ ಗ್ರಾಮದ ಶಾಲೆಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ಪರೀಕ್ಷಾ ನೋಡಲ್‌ ಅಧಿಕಾರಿ ಮರೆಪ್ಪ ಎನ್‌. ಬಡಿಗೇರ್‌ ತಿಳಿಸಿದ್ದಾರೆ.

ಪರೀಕ್ಷಾ ನಡೆಸುವ ಜೂ.25ರಂದು ಬೆಳಗಿನ 10.30ಕ್ಕೆ ಸಮಯ ನಿಗದಿಪಡಿಸಲಾಗಿದೆ. ಆದರೆ ವಿದ್ಯಾರ್ಥಿಗಳು ಬೆಳಗಿನ 8.30ಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಿರತಕ್ಕದ್ದು, ದೂರದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಬಸ್‌ ಮೂಲಕ ಕರೆ ತಂದು ಮರಳಿ ಕಳುಹಿಸಿಕೊಡಲು 9 ಮಾರ್ಗಗಳ ಮೂಲಕ ಕಾರ್ಯಗತ ಕೈಗೊಳ್ಳುವ ಕುರಿತು ಇಲಾಖೆಯ ಚಿಂತನೆ ನಡೆಸಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಈಗಾಗಲೇ 18 ಪರೀಕ್ಷಾ ಕೇಂದ್ರಗಳ ಪರಿಸ್ಥಿತಿ ಅವಲೋಕಿಸಿ ಮುಂಜಾಗ್ರತ ಕ್ರಮವಾಗಿ ಔಷಧ ದ್ರವ ಸಿಂಪಡಣೆ ಕಿಟಕಿ, ಬಾಗಿಲು, ನೀರಿನ ವ್ಯವಸ್ಥೆಯ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸೇರಿ ಸ್ಥಳ ಪರಿಶೀಲನೆ ಕಾರ್ಯ ಕೈಗೊಂಡು ಅಂತಿಮ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಕುರಿತು ಪಟ್ಟಣದ ಗುರುಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನಿರಡಗಿ ಅವರ ಅಧ್ಯಕ್ಷತೆಯಲ್ಲಿ ಸಂಬಂಧಿತ ಅಧಿಕಾರಿಗಳು ಸಭೆ ಕೈಗೊಂಡು ಅಂತಿಮ ಸಿದ್ಧತೆ ಕೈಗೊಳ್ಳುವ ಕುರಿತು ಚರ್ಚಿಸಿದರು. ಅಲ್ಲದೆ ಪರೀಕ್ಷೆ ಯಶಸ್ವಿಯಾಗಿ ನಡೆಸಲು ಶಿಕ್ಷಕರು ಸಹಕರಿಸಬೇಕು ಎಂದು ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ.

ಈ ಸಭೆಯಲ್ಲಿ ತಾಲೂಕು 10ನೇ ಪರೀಕ್ಷಾ ನೋಡಲ್‌ ಅಧಿಕಾರಿ ಮರೆಪ್ಪ ಎನ್‌. ಬಡಿಗೇರ್‌ ಮಾತನಾಡಿದರು. ಎಂ.ಎನ್‌. ಪೋದ್ದಾರ, ಶ್ರೀಮಂತ ಜಿಡ್ಡೆ, ವಿನೋದಸ ಮಠ, ರವಿ ಕುಲಕರ್ಣಿ, ಮಡಿವಾಳಪ್ಪ ಮೂಲಿಮನಿ, ಲಕ್ಷ್ಮೀಕಾಂತ ಸಾಸನೇಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.