23ರಂದು ಕಲಬುರಗಿಯಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವ


Team Udayavani, Dec 17, 2018, 11:42 AM IST

gul-3.jpg

ಕಲಬುರಗಿ: ನಾಡಿನ ಕಲೆ, ಸಾಂಸ್ಕೃತಿಕ ಕಲೆಗಳಿಗೆ ಪ್ರೋತ್ಸಾಹಿಸುವ ಹಾಗೂ ಗುರುತಿಸುವ ನಿಟ್ಟಿನಲ್ಲಿ ರಾಜ್ಯ-ದೇಶವಲ್ಲದೇ ವಿದೇಶ ಗಮನ ಸೆಳೆಯುವ ಕಾರ್ಯ ಮೈಗೂಡಿಸುತ್ತಾ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಆಳ್ವಾಸ್‌ ನುಡಿಸಿರಿ-ವಿರಾಸತ್‌ ಸಮ್ಮೇಳನ ಈಗ ಬಿಸಿಲು ನಾಡಿನಲ್ಲೂ ಮೊಳಗಲು ಶುರು ಮಾಡಿಕೊಂಡಿದೆ.

ದೇಶದ ವಿವಿಧ ಭಾಗಗಳ ಕಲೆಗಾರಿಕೆ ನೃತ್ಯಗಳನ್ನು 350 ಕಲಾವಿದರು ಒಂದೇ ವೇದಿಕೆಯಡಿ ನಿರೂಪಿಸುವ ಅತ್ಯಾಕರ್ಷಕ ಹಾಗೂ ಮನೋರಂಜನೆ ನೃತ್ಯ ರೂಪಕಗಳನ್ನು ಪ್ರಸ್ತುತಪಡಿಸುವ ಆಳ್ವಾಸ್‌ ಸಾಂಸ್ಕೃತಿಕ ವೈಭವವನ್ನು ಡಿ. 23ರಂದು ಸಂಜೆ 6ಕ್ಕೆ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಳ್ವಾಸ್‌ ನುಡಿಸಿರಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಾ| ಪಿ.ಎಸ್‌. ಶಂಕರ ಹಾಗೂ ಅಧ್ಯಕ್ಷರಾಗಿರುವ ಎಚ್‌ ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆಳ್ವಾಸ್‌ ಸಾಂಸ್ಕೃತಿಕ ವೈಭವ ಅರ್ಥಪೂರ್ಣ ಹಾಗೂ ಉಪಯುಕ್ತವಾಗಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳು ನಡೆದಿದ್ದು, ಸುಮಾರು 10 ಸಾವಿರ ಪ್ರೇಕ್ಷಕರು ಮನಃಪೂರ್ವಕ ಕಲೆಗಾರಿಕೆ ನೋಡಿ ಆನಂದಿಸಬೇಕೆಂಬ ಮಹತ್ವಕಾಂಕ್ಷಿ ಹೊಂದಲಾಗಿದೆ. ಕೇರಳದ ಮೋಹಿನಿಯಾಮ್‌, ಬುಡುಗುತಿಟ್ಟು ಯಕ್ಷಗಾನ, ಆಂಧ್ರದ ಜನಪದ ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ ಡ್ಯಾನ್ಸ್‌, ಶಾಸ್ತ್ರೀಯ ನೃತ್ಯ, ಶ್ರೀಲಂಕಾದ ಕ್ಯಾಂಡಿಯನ್‌ ನೃತ್ಯ, ಮಲ್ಲಕಂಬ ಮತ್ತು ರೋಪ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ದೋಲ್‌ ಚಲಮ್‌, ಕಥಕ್‌ ನೃತ್ಯ, ತೆಂಕೆಯುಕ್ಷ ಪ್ರಯೋಗ ಸೇರಿದಂತೆ ಇತರ ಪ್ರಕಾರದ ಕಲಾ ಪ್ರಕಾರಗಳು ಪ್ರದರ್ಶಿತಗೊಳ್ಳಲಿವೆ. ಒಟ್ಟಾರೆ ಮೂರುವರೆ ಗಂಟೆಗಳ ಕಾಲ ನಿರಂತರವಾಗಿ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ವಿವರಣೆ ನೀಡಿದರು. ಡಿ. 24ರಂದು ಆಳಂದ ಪಟ್ಟಣದಲ್ಲಿ ಶಾಸಕ ಸುಭಾಷ ಗುತ್ತೇದಾರ ಅಧ್ಯಕ್ಷತೆಯಲ್ಲಿ ಶಾಲಾ ಆವರಣದಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವ ನಡೆಯಲಿದೆ. ಡಿ. 25ರಂದು ಸುರಪುರ ಪಟ್ಟಣದಲ್ಲಿ ಹಾಗೂ 26ರಂದು ವಿಜಯಪುರ ನಗರದಲ್ಲೂ ನಡೆಯಲಿದೆ.

ಇದಕ್ಕೂ ಮುಂಚೆ ಡಿ. 22ರಂದು ಬೀದರ್‌ ದಲ್ಲಿ ನಡೆಯಲಿದೆ ಎಂದರು. ಸಾಂಸ್ಕೃತಿಕ ವಾತಾವರಣದ ಮೂಲಕ ಆಧುನಿಕ ಶಿಕ್ಷಣದ ಹೊಸ ಆಯಾಮಗಳಿಗೆ ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಕಲಾ ಪ್ರಕಾರಗಳ ಮೂಲಕ ಶಿಕ್ಷಣದ ಜಾಡಿಗೆ ಹೊಸದೊಂದು ಶಕ್ತಿಯನ್ನು ನೀಡುವುದು ಪ್ರಮುಖ ಧ್ಯೇಯವಾಗಿದೆ. ದೇಶದಾದ್ಯಂತ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಮನಸ್ಸುಗಳನ್ನು ಬೆಳೆಸುವ ಹಾಗೂ ಕಟ್ಟುವ ಮಹತ್ವದ ಕೆಲಸ ಈ ಕಾರ್ಯಕ್ರಮದ್ದಾಗಿದೆ. ಅಲ್ಲದೇ ಆಳ್ವಾಸ್‌ ನುಡಿಸಿರಿ ಖ್ಯಾತಿಯ ಡಾ| ಮೋಹನ್‌ ಆಳ್ವಾರದ್ದಾಗಿದೆ ಎಂದರು.

ರವಿ ಮುಕ್ಕಾ, ರಮೇಶ ತಿಪ್ಪನೂರ, ಉಮೇಶ ಶೆಟ್ಟಿ, ವಿದ್ಯಾಸಾಗರ ಕುಲಕರ್ಣಿ, ಜಂಟಿ ಕಾರ್ಯದರ್ಶಿ ಪ್ರವೀಣ ಜತ್ತನ್‌, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರು ಹಾಗೂ ಕೋಶಾಧಿಕಾರಿ ನರಸಿಂಹ್‌ ಮೆಂಡನ್‌ ಮುಂತಾದವರಿದ್ದರು. 

ಆಳ್ವಾಸ್‌ ನುಡಿ ವಿರಾಸತ್‌ ಸಮ್ಮೇಳನ ಮೂಲಕ ನಾಡಿನ ಕಲೆಗಾರಿಕೆ ಬೆಳೆಸುವ ಹಾಗೂ ಪ್ರೋತ್ಸಾಹಿಸುತ್ತಾ ಬರುತ್ತಿರುವ ಡಾ| ಮೋಹನ್‌ ಆಳ್ವಾರಂತೆ ಹೈಕ ಭಾಗದ ಕಲೆಗಳನ್ನು ನಾಡಿನುದ್ದಕ್ಕೂ ಬೆಳೆಸುವ ಹಾಗೂ ಕಲೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಈ ಭಾಗದ ಶಿಕ್ಷಣ ಸಂಸ್ಥೆಗಳು ಹಾಗೂ ಉದ್ಯಮಿದಾರರು ಮುಂದೆ ಬರುವುದು ಅಗತ್ಯವೆನಿಸುತ್ತಿದೆ.
 ಡಾ| ಪಿ.ಎಸ್‌. ಶಂಕರ, ಖ್ಯಾತ ವೈದ್ಯ ಸಾಹಿತಿಗಳು

ಅಪರೂಪದ ಆಳ್ವಾಸ್‌ ಸಾಂಸ್ಕೃತಿಕ ವೈಭವ ನೋಡಲು ಕಲಾಸಕ್ತರು ಕುಟುಂಬ ಸಮೇತ ಆಗಮಿಸಬೇಕು. ಕಾರ್ಯಕ್ರಮ ಸಂಜೆ 6 ಗಂಟೆಗೆ ಆರಂಭವಾಗುವುದು. ಮಾದರಿಯಾದ ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಸಂಘದವರು, ಹೋಟೆಲ್‌ ಮಾಲೀಕರ ಸಂಘದವರು ಹಾಗೂ ಇತರರು ಪ್ರೋತ್ಸಾಹಿಸುತ್ತಿದ್ದಾರೆ.
 ಅಮರನಾಥ ಪಾಟೀಲ, ಅಧ್ಯಕ್ಷರು, ಎಚ್‌ಕೆಸಿಸಿಐ, ಕಲಬುರಗಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.