9 ಟನ್ ಜಾನುವಾರು ಚರ್ಮ ಜಪ್ತಿ
Team Udayavani, Oct 19, 2021, 11:01 AM IST
ಕಲಬುರಗಿ: ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 9 ಟನ್ ಜಾನುವಾರು ಚರ್ಮಗಳನ್ನು ಸೋಮವಾರ ಆಳಂದ ತಾಲೂಕಿನ ನರೋಣ ಪೊಲೀಸರು ಜಪ್ತಿ ಮಾಡಿದ್ದಾರೆ.
ಕಡಗಂಚಿ ಕ್ರಾಸ್ ಸಮೀಪ ನಿಂತಿದ್ದ ಲಾರಿಯಿಂದ ದುರ್ವಾಸನೆ ಬರುತ್ತಿತ್ತು. ಈ ವಿಷಯ ತಿಳಿದ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ (ಕೇಶವ) ಮೋಟಗಿ ಸ್ಥಳಕ್ಕೆ ಭೇಟಿ ನೀಡಿ ಲಾರಿ ಚಾಲಕನನ್ನು ವಿಚಾರಿಸಿದಾಗ ಗೋವು, ಎಮ್ಮೆ, ಚರ್ಬಿ, ಕುರಿಗಳ ಚರ್ಮ ಇರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ನರೋಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಾಗ ಪಿಎಸ್ಐ ವಾತ್ಸಲ್ಯ ನೇತೃತ್ವದಲ್ಲಿ ಪೊಲೀಸರು ತೆರಳಿ ಲಾರಿ ಸಮೇತ ಚರ್ಮವನ್ನು ವಶಕ್ಕೆ ಪಡೆದಿದ್ದಾರೆ. ಅಂದಾಜು 1,800 ಚರ್ಮಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ಲಾರಿ ಮಾಲೀಕ, ಚಾಲಕ ಸೇರಿ ಮೂವರ ವಿರುದ್ಧ ಗೋಹತ್ಯೆ ತಡೆ ಕಾಯ್ದೆ ಸೇರಿ ವಿವಿಧ ಕಲಂಗಳಡಿ ಪ್ರಕರಣ ದಾಖಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಚಿತ್ತಾಪುರ ಪಟ್ಟಣದ ಸಮೀಪ ಅಂದಾಜು ಮೂರು ಸಾವಿರ ಜಾನುವಾರುಗಳ ಚರ್ಮಗಳನ್ನು ಜಪ್ತಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ