ತರಕಾರಿ ವ್ಯಾಪಾರಿಗಳಿಗೆ ಕಿರಿಕಿರಿ


Team Udayavani, Mar 8, 2019, 5:50 AM IST

gul-4.jpg

ವಾಡಿ: ಪಟ್ಟಣದಲ್ಲಿ ಪ್ರತಿ ಗುರುವಾರ ವಾರದ ಸಂತೆ ನಡೆಯುತ್ತಿದ್ದು, ತರಕಾರಿ ವ್ಯಾಪಾರಿಗಳು ಪುರಸಭೆ ಕಾಂಗ್ರೆಸ್‌ ಆಡಳಿತದ ಕಿರಿಕಿರಿಗೆ ಬೇಸತ್ತು ಹೋಗಿದ್ದಾರೆ. ತರಕಾರಿ ಮಾರಲು ಬಂದವರನ್ನು ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಪದೇಪದೆ ಒಕ್ಕಲೆಬ್ಬಿಸುತ್ತಿರುವುದು ವ್ಯಾಪಾರಿಗಳ ಪರದಾಟಕ್ಕೆ ಕಾರಣವಾಗಿದೆ.

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ವಾರದ ಸಂತೆಗೆ ಸೂಕ್ತ ಮಾರುಕಟ್ಟೆ ನಿರ್ಮಿಸಿಲ್ಲ. ವ್ಯಾಪಾರಿಗಳಿಗೆ ಮಳಿಗೆಗಳ ಸೌಲಭ್ಯವನ್ನು ಒದಗಿಸಿಲ್ಲ. ದೂರದ ಗ್ರಾಮಗಳಿಂದ ತರಕಾರಿಗಳ ಗಂಟು ಹೊತ್ತು ಬರುವ ಬೀದಿ ವ್ಯಾಪಾರಿಗಳಿಗೆ ಕುಡಿಯುವ ನೀರು, ನೆರಳು ಹಾಗೂ ಶೌಚಾಲಯ ಸೌಲಭ್ಯ ಒದಗಿಸದೆ ಕಷ್ಟದ ಕೂಪಕ್ಕೆ ತಳ್ಳಿರುವ ಪುರಸಭೆ ಆಡಳಿತ, ಪುರಸಭೆ ಸದಸ್ಯರ ಒತ್ತಡಕ್ಕೆ ಮಣಿದು ವ್ಯಾಪಾರಿಗಳ ಗಂಟು-ಮೂಟೆಗಳನ್ನು ಬೀದಿಗೆಸೆದು ರಂಪಾಟ ನಡೆಸುವ ಮೂಲಕ ಅಮಾನವೀಯವಾಗಿ ವರ್ತಿಸಿದ ಘಟನೆ ಗುರುವಾರ ಸಂತೆಯಲ್ಲಿ ನಡೆದಿದೆ. 

ಗುರುವಾರ ಎಂದಿನಂತೆ ಆಜಾದ್‌ ವೃತ್ತ-ರೈಲು ನಿಲ್ದಾಣ ರಸ್ತೆಯಲ್ಲಿ ತರಕಾರಿ ಮಾರಾಟಕ್ಕೆ ಅಣಿಯಾಗಿದ್ದ ನೂರಾರು ಜನ ಬೀದಿ ವ್ಯಾಪಾರಿಗಳನ್ನು ಪುರಸಭೆ ಸಿಬ್ಬಂದಿ ತೆರವುಗೊಳಿಸಲು ಮುಂದಾಗಿದ್ದಾರೆ. ಈ ರಸ್ತೆಯಲ್ಲಿ ಕುಳಿತು ವ್ಯಾಪಾರ ಮಾಡದೆ, ಮಾಂಸ ಮಾರುಕಟ್ಟೆ ರಸ್ತೆಯಲ್ಲಿ ವ್ಯಾಪಾರ ಮಾಡಬೇಕು. 

ಇಲ್ಲಿಂದ ಜಾಗ ಖಾಲಿ ಮಾಡಿ ಎಂದು ಪುರಸಭೆ ಸಿಬ್ಬಂದಿ ಅಮಾನುಷವಾಗಿ ವರ್ತಿಸಿದ್ದಾರೆ. ವ್ಯಾಪಾರಿಗಳ ಗಂಟು ಮೂಟೆ ರಸ್ತೆಗೆ ಎಸೆದು ದರ್ಪ ಮೆರೆದಿದ್ದಾರೆ. ಮುಖ್ಯಾಧಿಕಾರಿಗಳು ಮತ್ತು ಪುರಸಭೆ ಸದಸ್ಯ ಗೌಸ್‌ ನಮಗೆ ಈ ಆದೇಶ ನೀಡಿದ್ದಾರೆ. ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ನಮ್ಮೂರ ಸಂತೆಗೆ ಬರಬೇಡಿ ಎಂದು ಗದರಿದ್ದಾರೆ ಎಂದು ತರಕಾರಿ ವ್ಯಾಪಾರಿಗಳಾದ ಸುವರ್ಣ ಯರಗೋಳ, ನಿಂಗಮ್ಮ, ದಾನಮ್ಮ ಶಹಾಬಾದ, ಅಂಜಮ್ಮ ರಾವೂರ, ಮಲ್ಲಮ್ಮ ಗಾಣಗಾಪುರ, ದೇವಿಂದ್ರಪ್ಪ ಅಲ್ಲಿಪುರ, ಖಾಜಾ ಮೈನೋದ್ದೀನ್‌ ಶಹಾಬಾದ, ಜ್ಞಾನಮಿತ್ರ ಅಲ್ಲಿಪುರ ಹಾಗೂ ಮತ್ತಿರರು ಸ್ಥಳಕ್ಕೆ ಭೇಟಿ ನೀಡಿದ ಸುದ್ದಿಗಾರರ ಎದುರು ಅಳಲು ತೋಡಿಕೊಂಡರು.

ಪುರಸಭೆ ಆಡಳಿತದಿಂದ ತರಕಾರಿ ವ್ಯಾಪಾರಿಗಳಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಿ ಕಣ್ಣೀರು ಒರೆಸುವವರು ಯಾರೂ ಇಲ್ಲದಿರುವುದು ವಿಪರ್ಯಾಸದ ಸಂಗತಿ. 

ನಾವು ಐದಾರು ವರ್ಷಗಳಿಂದ ವಾಡಿ ಸಂತೆಗೆ ಬರುತ್ತಿದ್ದೇವೆ. ಎಲ್ಲೆಂದರಲ್ಲಿ ಚರಂಡಿ ನೀರು, ಗಬ್ಬು ವಾಸನೆ ಇರುತ್ತದೆ. ಅಂತಹ ಜಾಗದಲ್ಲಿ ಕುಳಿತು ತರಕಾರಿ ಮಾರಿದರೆ ವ್ಯಾಪಾರ ಆಗುವುದಿಲ್ಲ. ಮಾಂಸ ಮಾರುಕಟ್ಟೆ ರಸ್ತೆಯಲ್ಲಿ ಕೂಡಲು ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲಿ ಪರಿಸರ ಸರಿಯಾಗಿಲ್ಲ. ಮಾಂಸದ ಮೇಲೆ ಕುಳಿತ ಹಾಗೂ ಗಟಾರದೊಳಗಿನ ನೊಣಗಳು ಬಂದು ತರಕಾರಿ ಮೇಲೆ ಕೂಡುತ್ತವೆ. ಇಡೀ ದಿನ ನಾವು ಗಬ್ಬು ವಾಸನೆ ಸೇವಿಸಬೇಕು. ವ್ಯಾಪಾರವೂ ನಷ್ಟವಾಗುತ್ತದೆ. ವ್ಯಾಪಾರ ಆಗುವ ಜಾಗದಲ್ಲಿ ಕೂಡಲು ಪುರಸಭೆಯವರು ಬಿಡುತ್ತಿಲ್ಲ. ನಮ್ಮ ನೆರವಿಗೆ ಯಾರೂ ಬರುತ್ತಿಲ್ಲ. ನಮಗೆ ಸೂಕ್ತ ಮಾರುಕಟ್ಟೆ ಬೇಕು. ಕಿರಿಕಿರಿ ಮುಂದುವರಿಸಿದರೆ ಜಿಲ್ಲಾಧಿಕಾರಿಗೆ ದೂರು ಕೊಡುತ್ತೇವೆ.
 ಮಲ್ಲಿಕಾರ್ಜುನ ದೊಡ್ಡಮನಿ, ತರಕಾರಿ ವ್ಯಾಪಾರಿ

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.