ಕುಡಿವ ನೀರಿಗಾಗಿ 2000 ವಿದ್ಯಾರ್ಥಿಗಳ ಹಾಹಾಕಾರ


Team Udayavani, Jun 8, 2022, 11:45 AM IST

5CUK

ಕಲಬುರಗಿ: ಇದು ನಿಜಕ್ಕೂ ರಾಜ್ಯ ಸರ್ಕಾರದ ಪಾಲಿಗೆ ನಾಚಿಕೆಗೇಡಿನ ವಿಷಯ. ಆಳಂದ ತಾಲೂಕಿನ ಕಡಗಂಚಿ ಬಳಿ ಸ್ಥಾಪಿಸಿರುವ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ದಶಕವಾದರೂ ಒಪ್ಪಂದದಂತೆ ಸರ್ಕಾರ ನೀರು ಪೂರೈಕೆ ಮಾಡಲು ಸಾಧ್ಯವಾಗದೇ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 300ಕ್ಕೂ ಹೆಚ್ಚು ಸಿಬ್ಬಂದಿ ಪಡಬಾರದ ಕಷ್ಟ ಪಡುತ್ತಿದ್ದಾರೆ.

2009ರಲ್ಲಿ ವಿವಿ ಸ್ಥಾಪನೆ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ನಡೆದ ಒಪ್ಪಂದದಂತೆ ಸ್ಥಳೀಯವಾಗಿ ಭೂಮಿ, ನೀರು, ವಿದ್ಯುತ್‌ ಮತ್ತು ರಸ್ತೆ ಸಂಪರ್ಕ ಕಲ್ಪಿಸಿಕೊಡಬೇಕಾದದ್ದು ರಾಜ್ಯ ಸರ್ಕಾರದ ಕೆಲಸ. ಆದರೆ, ನಾನಾ ಕಾರಣಗಳಿಗಾಗಿ ಕುಡಿಯುವ ನೀರು ಪೂರೈಕೆ ಮಾಡುವ ಹೊಣೆಗಾರಿಯಿಂದ ಪ್ರತಿ ಬಾರಿ ಸರ್ಕಾರ ಮುಖ ತಿರುವುತ್ತದೆ. ಸಮಸ್ಯೆ ಬಗೆಹರಿಸಬೇಕಾದ ಕಲಬುರಗಿ ಜಿಲ್ಲಾಡಳಿತ, ಅಧಿಕಾರಿಗಳು ಪ್ರತಿ ಬಾರಿ ಕೈಗೊಂಡ ಯಡವಟ್ಟು ತೀರ್ಮಾನದಿಂದ ಸಮಸ್ಯೆ ಇನ್ನೂ ಬಿಕ್ಕಟ್ಟಾಗಿದೆ.

ನನೆಗುದಿಗೆ ಬಿದ್ದ ನೀರು ಪೂರೈಕೆ: ಕೇಂದ್ರೀಯ ವಿವಿ(ಸಿಯುಕೆ) ಆರಂಭವಾದಾಗಿನಿಂದ ಅಳಂದ ತಾಲೂಕಿನ ಅಮರ್ಜಾ ನದಿಯಿಂದ ನೀರು ಪೂರೈಕೆ ಮಾಡುವ ಕಾಮಗಾರಿ ನನೆಗುದಿಗೆ ಬಿದ್ದಿದೆ. ಮೂರು ವಿಸಿಗಳು, 5 ಜನ ಜಿಲ್ಲಾಧಿಕಾರಿಗಳು, ಮೂರು ಜನ ಪ್ರಾದೇಶಿಕ ಅಯುಕ್ತರು, ಮೂರು ಸರ್ಕಾರಗಳು ಬದಲಾದರೂ ಈವರೆಗೆ ಏನೂ ಆಗಿಲ್ಲ. ಈಗಲೇ ಯೋಜನೆ ಇನ್ನೂ ಟೆಂಡರ್‌ ಹಂತದಲ್ಲಿಯೇ ಇದೆ. ಇದು ರಾಜ್ಯ ಸರ್ಕಾರ ಕಾರ್ಯ ವೈಖರಿಯ ನಮೂನೆ. ಈ ಮಧ್ಯೆ ಹಲವು ಸಂಘಟನೆಗಳು ಹೋರಾಟ ಮಾಡಿದರೂ ಸರ್ಕಾರ, ಜಿಲ್ಲಾಡಳಿತ ಅಲುಗಾಡಿಲ್ಲ. ಈ ಮಧ್ಯೆ ಪ್ರತಿ ವರ್ಷ 1500ರಿಂದ 2000 ವಿದ್ಯಾರ್ಥಿಗಳು ದೇಶದ ನಾನಾ ಭಾಗದಿಂದ ಬಂದು ನೀರಿಗಾಗಿ ಪರಿತಪಿಸಿ ಹಾಗೋ ಹೀಗೋ ಕೋರ್ಸ್‌ ಮುಗಿಸಿ ಹೋಗಿದ್ದಾರೆ.

ಬೆಣ್ಣೆತೋರಾ ಯೋಜನೆ ಠುಸ್

ಅಮರ್ಜಾ ನದಿಯಲ್ಲಿ ನೀರಿನ ಕೊರತೆ, ಭೀಮಾ ನದಿಯಿಂದ ಅಮರ್ಜಾಕ್ಕೆ ನೀರು ತುಂಬಿಸಿ ಪ್ರತಿ ದಿನ 40 ಲಕ್ಷ ಲೀಟರ್‌ ನೀರು ಪೂರೈಕೆ ಮಾಡಲು ಸಾಧ್ಯವಾಗದೇ ಇದ್ದಾಗ 25 ಕೋಟಿ ರೂ. ವೆಚ್ಚದಲ್ಲಿ ಪೈಪ್‌ಲೈನ್‌ ಮೂಲಕ ಬೆಣ್ಣೆತೋರಾ ನದಿಯಿಂದಲೂ ನೀರು ಪೂರೈಕೆ ಮಾಡುವ ಯೋಜನೆ ರೂಪಿಸಲಾಗಿತ್ತು. ಅದು ದುಬಾರಿ ಅಗುವ ಲಕ್ಷಣ ಕಂಡು ಬಂದಾಗ ಪುನಃ ಅಮರ್ಜಾ ನದಿಗೆ ಜೋತು ಬೀಳಲಾಯಿತು.

55 ಕೋಟಿ ರೂ. ಹೊಸ ಯೋಜನೆ

ಈಗ ಮತ್ತೆ ಕುಡಿವ ನೀರಿನ ಸಮಸ್ಯೆ ನೀಗಿಸಲು ಬಿಜೆಪಿ ಸರ್ಕಾರವೂ ಪ್ರಯತ್ನ ಮಾಡುತ್ತಿದೆ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರವಷ್ಟೆ ಕೇಂದ್ರ ಸಚಿವ ಧಮೇಂದ್ರ ಪಧಾನ ಅವರೊಂದಿಗೆ ಮಾತುಕತೆ ಮಾಡಿದ್ದು, ಕೂಡಲೇ ಕುಡಿವ ನೀರಿನ ಸಂಬಂಧ ಇರುವ ಸಮಸ್ಯೆಗೆ ಇತಿಶ್ರೀ ಹಾಡುವ ಭರವಸೆ ನೀಡಿದ್ದಾರೆ. ಕೆಎನ್‌ಎನ್‌ಎಲ್‌ ಮುಖ್ಯ ಎಂಜಿನಿಯರ್‌ ಅವರು 55 ಕೋಟಿ ರೂ.ಗಳಲ್ಲಿ ಪೈಪ್‌ಲೈನ್‌ ಮುಖೇನ ಸಿಯುಕೆ ಕ್ಯಾಂಪಸ್‌ನಲ್ಲಿರುವ ಗ್ಯಾಲನ್‌ ಗಟ್ಟಲೇ ನೀರು ಸಂಗ್ರಹಿಸುವ ಟ್ಯಾಂಕ್‌ಗೆ ನೀರು ಬಂದು ಬೀಳುವಂತೆ ಮಾಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಈಗ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂದಿನದು ಬೊಮ್ಮಾಯಿ ಮತ್ತು ಸರ್ಕಾರದ ಇಚ್ಛೆ. ಸಿಯುಕೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ದೈವ.

ವಿವಿಗೆ ಕುಡಿಯುವ ನೀರು ಪೂರೈಕೆ ಹಿನ್ನೆಲೆಯಲ್ಲಿ ಸಾಕಷ್ಟು ಪತ್ರ ವ್ಯವಹಾರಗಳು ಈಗಲೂ ನಡೆಯುತ್ತಲೇ ಇವೆ. 13 ವರ್ಷಗಳಾದರೂ ನಮ್ಮ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ಸ್ವತಃ ಕರೆ ನಿರ್ಮಾಣ ಮಾಡಿ ಮಳೆ ನೀರು ಸಂಗ್ರಹಿಸಿ ತುಸು ನೀರಿನ ಬವಣೆ ತಪ್ಪಿಸಲು ಹೆಣಗಾಡಿದ್ದೇವೆ. ಈಗ ಹೊಸ ಯೋಜನೆ ರೂಪಿಸಲಾಗಿದೆ. ಕಾರ್ಯಗತವಾಗಬೇಕು. 2ಸಾವಿರ ವಿದ್ಯಾರ್ಥಿಗಳು, 300ಕ್ಕೂ ಹೆಚ್ಚು ಸಿಬ್ಬಂದಿ ಪ್ರಶ್ನೆ ಇದೆ. ಪ್ರೊ| ಬಟ್ಟು ಸತ್ಯನಾರಾಯಣ, ಸಿಯುಕೆ ಕುಲಪತಿ

ಸೂರ್ಯಕಾಂತ ಎಂ. ಜಮಾದಾರ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.