ಸ್ಪಿಂಕ್ಲರ್ ಪೈಪ್ ನೀಡದೆ ಅನ್ಯಾಯ: ಹೂಗಾರ
Team Udayavani, Jun 15, 2022, 4:49 PM IST
ಅಫಜಲಪುರ: ತಾಲೂಕಿನಾದ್ಯಂತ ಸರ್ಕಾರಿ ಯೋಜನೆ ಅಡಿಯಲ್ಲಿ ಸ್ಪಿಂಕ್ಲರ್ ಪೈಪ್ಗ್ಳಿಗಾಗಿ ರೈತರಿಂದ ಹಣ ಕಟ್ಟಿಸಿಕೊಂಡು ಪೈಪ್ಗ್ಳನ್ನು ನೀಡದೆ ಸತಾಯಿಸಿದ್ದಲ್ಲದೇ ಈಗ ಹಣ ಮರಳಿ ನೀಡುವುದಾಗಿ ಹೇಳಲಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾದಂತಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ ಆರೋಪಿಸಿದರು.
ಕಲಬುರಗಿ ಜಂಟಿ ಕೃಷಿ ನಿದೇರ್ಶಕರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸ್ಪಿಂಕ್ಲರ್ಗಾಗಿ ರೈತರಿಂದ ಹಣ ಕಟ್ಟಿಸಿಕೊಂಡು ವರ್ಕ ಆರ್ಡರ್ ತೆಗೆಯದೆ, ಪೈಪ್ಗ್ಳನ್ನು ನೀಡದೇ ಸತಾಯಿಸಿ ರೈತರಿಗೆ ಹಣ ಮರಳಿ ನೀಡುತ್ತೇವೆ ಎನ್ನುತ್ತಿರುವುದು ಎಷ್ಟು ಸರಿ? ಸ್ಪಿಂಕ್ಲರ್ ಅವಶ್ಯಕತೆ ಇರುವ ರೈತರಿಗೆ ಸಮಸ್ಯೆಯಾಗಿದೆ. ಇದನ್ನು ಮೇಲಧಿಕಾರಿಗಳು ಗಮನಿಸಿ ಸಮಸ್ಯೆ ಸರಿಪಡಿಸುವ ಕೆಲಸ ಮಾಡಬೇಕು. ಅಲ್ಲದೇ ತಾಲೂಕಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕಡಿಮೆ ಬೀಳದಂತೆ ನೋಡಿಕೊಳ್ಳಬೇಕು. ರಸಗೊಬ್ಬರ, ಬೀಜ ನೀಡುವಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿದರು.
ಈ ವೇಳೆ ಕಬ್ಬು ಬೆಳೆಗಾರರ ಸಂಘದ ಸಂಘಟನಾ ಕಾರ್ಯದರ್ಶಿ ಭೀಮರಾಯಗೌಡ ಪಾಟೀಲ, ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ