ರೈಲ್ವೆ ಇಲಾಖೆ ಖಾಲಿ ಹುದ್ದೆ ನೇಮಕಕ್ಕೆ ಮನವಿ
Team Udayavani, Jul 24, 2022, 2:05 PM IST
ಶಹಾಬಾದ: ರೈಲ್ವೆ ಇಲಾಖೆಯಲ್ಲಿ 90,000 ಹುದ್ದೆಗಳನ್ನು ರದ್ದುಪಡಿಸುವ ನಿರ್ಧಾರವನ್ನು ತಕ್ಷಣವೇ ಹಿಂಪಡೆದು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿ ನಗರದ ಎಐಡಿವೈಒ ಸಂಘಟನೆ ವತಿಯಿಂದ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಎಐಡಿವೈಒ ಜಿಲ್ಲಾ ಸಂಚಾಲಕ ಜಗನ್ನಾಥ ಎಸ್. ಎಚ್ ಮಾತನಾಡಿ,ದೇಶದೆಲ್ಲೆಡೆ ನಿರುದ್ಯೋಗ ಭೀಕರವಾಗಿ ಹೆಚ್ಚುತ್ತಿದೆ. ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿದೆ. ತಾಂತ್ರಿಕ ಶಿಕ್ಷಣ ಪಡೆದು ರೈಲ್ವೆ ಪರೀಕ್ಷೆ ತಯಾರಿ ನಡೆಸುತ್ತಿರುವ ವಿದ್ಯಾವಂತ ನಿರುದ್ಯೋಗಿ ಯುವಕರ ಪಾಲಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ಅತ್ಯಂತ ನೋವಿನ ಸಂಗತಿಯಾಗಿದೆ ಎಂದರು.
ಹಿಂದಿನ ವರ್ಷಗಳಲ್ಲಿಯೂ ಸರ್ಕಾರವು ರೈಲ್ವೆಯಲ್ಲಿ ನೌಕರರ ಸಂಖ್ಯೆ ಕಡಿತಗೊಳಿಸಿದೆ. ರೈಲ್ವೆ ಇಲಾಖೆ ಪ್ರತಿ ವರ್ಷ ಸರ್ಕಾರಕ್ಕೆ ಆದಾಯ ನೀಡುತ್ತಿದೆ. ಆದರೆ ಸರ್ಕಾರ ದೇಶಿ ಮತ್ತು ವಿದೇಶಿ ಕಂಪನಿಗಳಿಗೆ ಲಾಭ ಮಾಡಿಕೊಡಲು ರೈಲ್ವೆಯನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದಾಗಿ ಬಡವರಿಗೆ ರೈಲಿನಲ್ಲಿ ಪ್ರಯಾಣ ಮಾಡುವುದು ತುಂಬಾ ದುಬಾರಿಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಕ್ಷಣ ನೇಮಕಾತಿ ಮಾಡಿ. ಖಾಸಗೀಕರಣ ಮಾಡುವುದನ್ನು ಸ್ಥಗಿತಗೊಳಿಸಿ ಎಂದು ಆಗ್ರಹಿಸಿ ರೈಲ್ವೆ ವ್ಯವಸ್ಥಾಪಕರ ಮುಖಾಂತರ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ನಿಯೋಗದಲ್ಲಿ ಸಿದ್ಧು ಚೌಧರಿ, ರಘು ಮಾನೆ, ಶ್ರೀನಿವಾಸ. ಡಿ, ಸಾಗರ, ಶಿವುಕುಮಾರ ಇ.ಕೆ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್