ತನಿಖಾಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಣೆ
Team Udayavani, Dec 13, 2020, 3:56 PM IST
ಕಲಬುರಗಿ: ಮಹಾನಗರ ತಲ್ಲಣಗೊಳಿಸಿದ್ದ ಮತ್ತು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದ ಅಶೋಕ ನಗರ ಠಾಣೆ ವ್ಯಾಪ್ತಿಯ ಗೋದುತಾಯಿ ಕಾಲೋನಿಯಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿದ್ದ ಉದ್ಯಮಿ ಸುನೀಲ ರಂಕಾ ಪ್ರಕರಣ ಭೇದಿಸಿ, ಆರೋಪಿಗಳನ್ನು ಸೆರೆ ಹಿಡಿದಿರುವ ತನಿಖಾ ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತಾಲಯದ ಡಿಸಿಪಿ ಡಿ.ಕಿಶೋರಬಾಬುಶ್ಲಾಘಿಸಿದರು.
ಶನಿವಾರ ನಗರದ ಪೊಲೀಸ್ ಆಯುಕ್ತಾಲಯ ಕಚೇರಿಯಲ್ಲಿ ತನಿಖಾ ತಂಡದದವರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಅಶೋಕ ನಗರ ಇನ್ ಸ್ಪೆಕ್ಟರ್ ಪಂಡಿತ ಸಗರ ಮತ್ತವರ ವಿಶೇಷ ತಂಡದ ಸಿಬ್ಬಂದಿ ಮಾಹಿತಿ ಕಲೆ ಹಾಕಿ, ಮಾದರಿಯಾಗಿ ಶ್ರಮವಹಿಸಿ ಕೆಲಸ ಮಾಡುವ ಮೂಲಕ ಸವಾಲಿನಪ್ರಕರಣ ಪತ್ತೆ ಮಾಡುವ ಮೂಲಕ ಇಲಾಖೆ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
ಮನೆ ಎದುರೆ ಗುಂಡಿಟ್ಟು ಕೊಲೆ ನಡೆದ ಬಳಿಕ, ತನಿಖೆ ಶುರು ಮಾಡಿದರೂ ಯಾವುದೇ ಮಾಹಿತಿ ಲಭ್ಯವಾಗಲಿಲ್ಲ. ಹಗಲು-ರಾತ್ರಿ ಎನ್ನದೆ ಶ್ರಮ ವಹಿಸಿದ ತನಿಖಾ ತಂಡದವರು ಚಾಣಾಕ್ಷತನದಿಂದ ಕೆಲಸ ಮಾಡುವ ಮೂಲಕ ಪ್ರಕರಣ ಬೇಧಿಸಿದ್ದಾರೆ ಎಂದು ಹೇಳಿದರು.
ಎ ಉಪ ವಿಭಾಗದ ಎಸಿಪಿ ಗಂಗಾಧರ ಬಿ.ಎಂ. ಇನ್ಸ್ಪೆಕ್ಟರ್ಗಳಾದ ಪಂಡಿತ ಸಗರ, ಸಿದ್ದರಾಮೇಶ್ವರ ಗಡದ, ಕಪಿಲ್ದೇವ, ಅರುಣಕುಮಾರ ಮುರಗುಂಡಿ ಮತ್ತು ಸಿಬ್ಬಂದಿ ಗುರುಮೂರ್ತಿ, ಸಂಜುಕುಮಾರ, ಮಲ್ಲಿಕಾರ್ಜುನ, ಶರಣಗೌಡ ಪಾಟೀಲ, ಶಿವಲಿಂಗ, ಚನ್ನು, ಮಲ್ಲಿಕಾರ್ಜುನ, ಶಿವಶರಣಪ್ಪ, ಪ್ರಲ್ಹಾದ ಇತರ ಸಿಬ್ಬಂದಿಗೆ ಪ್ರಶಂಸನಾ ಪತ್ರಗಳನ್ನು ಕಿಶೋರಬಾಬು ವಿತರಿಸಿ, ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ