ಲಂಬಾಣಿ ಭಾಷೆಗೆ ಮಾನ್ಯತೆ ನೀಡಿ


Team Udayavani, Aug 28, 2017, 10:13 AM IST

gul 1.jpg

ಕಲಬುರಗಿ: ಲಂಬಾಣಿ ಭಾಷೆಗೆ ಸಾಂವಿಧಾನಿಕ ಮಾನ್ಯತೆ ನೀಡುವುದು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು
ಗುಲಬರ್ಗಾ ವಿವಿ ಅಂಬೇಡ್ಕರ್‌ ಭವನದಲ್ಲಿ ರವಿವಾರ ನಡೆದ ರಾಜ್ಯ ಮಟ್ಟದ ಬಂಜಾರಾ ಯುವ ಚಿಂತನ ಶಿಬಿರದ
ಸಮಾರೋಪ ಸಮಾರಂಭದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯದಲ್ಲಿರುವ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕುವಂತೆ ಒತ್ತಾಯಿಸಿ ಸಹಿ ಸಂಗ್ರಹ ಮತ್ತು ಪತ್ರ ಚಳವಳಿ ನಡೆಸುವುದು. ಬಂಜಾರಾ ಸಮಾಜಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ ಸೇರಿದಂತೆ ವಿವಿಧ ನಿರ್ಣಯ ಕೈಗೊಳ್ಳಲಾಯಿತು. ಗುಲಬರ್ಗಾ ವಿವಿಯ ಸಂತ ಸೇವಾಲಾಲ ಅಧ್ಯಯನ ಪೀಠ, ಪರ್ಯಾಯ ಸಮಾಜ ಕಾರ್ಯ ಮಹಾವಿದ್ಯಾಲಯ, ಬೆಂಗಳೂರಿನ ಹಮ್‌ ಗೋರ್‌ ಕಟಮಾಳ್ಳೋ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌, ಡಾ| ಅಂಬೇಡ್ಕರ ಸ್ಮರಣಾರ್ಥ ಶಿಬಿರದಲ್ಲಿ ದೇಶವ್ಯಾಪಿ ನೆಲೆಸಿರುವ ಬಂಜಾರಾ ಸಮುದಾಯದವರ ರಾಷ್ಟ್ರವ್ಯಾಪಿ ಸಮೀಕ್ಷೆ ಅಗತ್ಯ ಎಂದು ಶಿಬಿರ ಪ್ರತಿಪಾದಿಸಿತು. ಸಂಘಟಕ ಅನಂತನಾಯಕ ಮಾತನಾಡಿ, ಅಲೆಮಾರಿಗಳಾಗಿರುವ ಬಂಜಾರಾ ಸಮುದಾಯದ ಜನರನ್ನು ಸಾಂವಿಧಾನಿಕ ಚೌಕಟ್ಟಿನಲ್ಲಿ ತರುವ ಉದ್ದೇಶ ಮತ್ತು ವಿಶಿಷ್ಟ ಸಂಸ್ಕೃತಿಯಿರುವ ಸಮುದಾಯದಲ್ಲಿ ಸಂಘಟನೆ ಮತ್ತು ಒಗ್ಗಟ್ಟು ತರುವುದು ಶಿಬಿರದ ಉದ್ದೇಶವಾಗಿದೆ ಎಂದರು. ಭಾಷಾ ಸಮಸ್ಯೆ, ಸಂಘಟನೆ, ನಿರುದ್ಯೋಗ, ಸಾಮಾಜಿಕ ಜಾಲತಾಣ, ನೌಕರರ ಸಮಸ್ಯೆ, ಮಾಧ್ಯಮ, ಉದ್ಯೋಗಾವಕಾಶ, ಮಹಿಳಾ ಸಬಲೀಕರಣ ಇತ್ಯಾದಿ ಜ್ವಲಂತ ವಿಷಯಗಳ ಬಗ್ಗೆ ರಮೇಶ ಜಾಧವ್‌, ಡಾ| ಶಾರದಾ ಜಾಧವ್‌, ಖಂಡ್ಯಾ ನಾಯಕ, ಗುರು ಚವ್ಹಾಣ, ಡಾ|ಹರಿಶ್ಚಂದ್ರ, ಪ್ರತಿಮಾ ಕೆ.ಆರ್‌., ಮಂಜುನಾಥ, ಮಕ್ತುಂಬಿ, ನಾಗರಾಜ ಗೋಷ್ಠಿಗಳಲ್ಲಿ ವಿಷಯ ಮಂಡಿಸಿದರು. ಶಿಬಿರಾರ್ಥಿ ಬಾಬಿ ಎಂ. ಜಾಧವ್‌ ಮಾತನಾಡಿ, ಬಂಜಾರಾ ಜನಾಂಗದ ಮೂಲ, ಲಮಾಣಿ ಮಾರ್ಗಗಳು, ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಂಜಾರಾ ಜನಾಂಗದ ಕೊಡುಗೆ, ಬಂಜಾರರ ಮೌಖೀಕ ಸಾಹಿತ್ಯ, ಸಂಸ್ಕೃತಿ, ಕಲೆ, ಆಧುನಿಕ ಆಯಾಮಗಳನ್ನು ತಿಳಿದುಕೊಳ್ಳಲು ಶಿಬಿರ ಅವಕಾಶ ಕಲ್ಪಿಸಿತು. ಆಲ್‌ ಇಂಡಿಯಾ ಬಂಜಾರಾ ಸೇವಾ ಸಂಘದ ರಾಜ್ಯಾಧ್ಯಕ್ಷ ಸುಭಾಷ ರಾಠೊಡ, ಸಮಾಜದ ಪ್ರಮುಖರಾದ ಇಂದ್ರನಾಯಕ, ಪಿ.ಜಿ.ರಾಠೊಡ, ಡಾ| ಆನಂದ ನಾಯಕ,, ಮಹೇಶ ರಾಠೊಡ, ಸಂತೋಷ ರಾಠೊಡ, ಶಿವರಂಜನ ಸತ್ಯಂಪೇಟ್‌ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.