ಈಡಿಗರ ಬೇಡಿಕೆಗಾಗಿ ಶಾಸಕರ ಮನೆ ಮುಂದೆ ಧರಣಿ


Team Udayavani, Feb 22, 2022, 9:48 AM IST

4idigas

ಚಿತ್ತಾಪುರ: ಹಿಂದುಳಿದ ಈಡಿಗ ಸಮಾಜದ ಅಭಿವೃದ್ಧಿಗಾಗಿ ನಿಗಮ ಮಂಡಳಿ ರಚನೆ, ಈಡಿಗರ ಕುಲ ಕಸುಬಾದ ಸೇಂದಿ ಇಳಿಸಿ ಮಾರಾಟ ಮಾಡುವುದು, ಈಚಲು ಮರ, ತಾಳೆ ಮರಗಳ ಇರುವ ಪ್ರದೇಶಗಳಲ್ಲಿ ಕೂಡಲೇ ಸೇಂದಿ ಇಳಿಸಲು ಅನುಮತಿ ನೀಡಬೇಕು ಮತ್ತು ಸರ್ಕಾರಿ ಜಾಗದಲ್ಲಿ ಈಚಲು ಮತ್ತು ತಾಳೆ ಮರಗಳು ಬೆಳೆಸಬೇಕೆಂಬ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಈಡಿಗ ಶಾಸಕರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾ ಮಂಡಳಿ ಅಧ್ಯಕ್ಷ ಡಾ| ಪ್ರಣಾವನಂದ ಸ್ವಾಮಿಗಳು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಬಂದಾಗ ಈಡಿಗ ಸಮುದಾಯ ಕೋಟಾ ಬೇಕು ಮತ್ತು ವೋಟು ಬೇಕು. ಆದರೆ ಸಮುದಾಯ ಬೇಡವಾ ಎಂದು ಪ್ರಶ್ನಿಸಿದರು.

ಈಡಿಗರ ಕುಲ ಕಸುಬು ಸರಕಾರ ಕಸಿದುಕೊಂಡು ಬಡವರನ್ನಾಗಿಸಿದೆ ಪರ್ಯಾಯ ವ್ಯವಸ್ಥೆ ಮಾಡದೇ ದ್ರೋಹ ಮಾಡಿದೆ. ಸೇಂದಿ ಇಳಿಸಿ ಮಾರಾಟ ಮಾಡುವುದು ಈಡಿಗರ ಕುಲ ಕಸುಬು. ಆದರೆ, ರಾಜಕೀಯ ಷಡ್ಯಂತ್ರದಿಂದ ಇಂದು ನಿಷೇಧಕ್ಕೆ ಒಳಪಟ್ಟಿದೆ. ಸೇಂದಿ ಇಳಿಸಿ ಮಾರಾಟ ಮಾಡುವುದು ಈಡಿಗರಿಗೆ ದೇವರು ಕೊಟ್ಟಿರುವ ವರವಾಗಿದೆ. ಇದಕ್ಕೆ ತನ್ನದೇ ಇತಿಹಾಸವಿದೆ ಎಂದರು. ರಾಜ್ಯದಲ್ಲಿ 26 ಒಳ ಪಂಗಡಗಳನ್ನು ಒಳಗೊಂಡಿದ್ದ ಈಡಿಗ ಸಮಾಜವು 70 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ, ಒಂದು ನಿಗಮ ಮಂಡಳಿ ರಚನೆ ಮಾಡದೇ ಇರುವುದು ನೋವಿನ ಸಂಗತಿ. ಪ್ರಸ್ತುತ ಸಣ್ಣ-ಸಣ್ಣ ಜನಾಂಗಗಳಿಗೆ ನಿಗಮ ಮಂಡಳಿ ರಚನೆ ಮಾಡಿದ ಸರಕಾರ ಈಡಿಗ ಸಮಾಜಕ್ಕೆ ಮಾತ್ರ ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದರು.

ಮಹಾ ಮಂಡಳಿಯ ರಾಜ್ಯ ಕಾರ್ಯದರ್ಶಿ ವೆಂಕಟೇಶ ಗುಂಡಾನೋರ್‌, ಈಡಿಗ ಸಮಾಜದ ತಾಲೂಕು ಅಧ್ಯಕ್ಷ ವಿನೋದ ಗುತ್ತೇದಾರ, ಉಪಾಧ್ಯಕ್ಷ ಶಂಕರಗೌಡ ರಾವೂರಕರ್‌, ಪ್ರಧಾನ ಕಾರ್ಯದರ್ಶಿ ಕಾಶಿನಾಥ ಗುತ್ತೇದಾರ, ಯುವ ಅಧ್ಯಕ್ಷ ಸುರೇಶ ಗುತ್ತೇದಾರ, ಶಿವಯ್ಯ ಗುತ್ತೇದಾರ, ಶ್ರೀಶೈಲ್‌ ಗುತ್ತೇದಾರ, ಶಿವರಾಜ ಗುತ್ತೇದಾರ, ಅಮೃತ್‌ ಗುತ್ತೇದಾರ, ಲಕ್ಷ್ಮೀಕಾಂತ ಗುತ್ತೇದಾರ, ಹುಸನಯ್ಯ ಗುತ್ತೇದಾರ, ಮಲ್ಲಯ್ಯ ಹದನೂರ ಇದ್ದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.