ಕಲೆ-ಸಾಹಿತ್ಯಕ್ಕೆ ಪ್ರೋತ್ಸಾಹ ಅಗತ್ಯ: ನರಿಬೋಳ


Team Udayavani, Mar 2, 2022, 11:00 AM IST

7naribola

ಜೇವರ್ಗಿ: ಪ್ರತಿಯೊಬ್ಬರಲ್ಲಿಯೂ ಒಂದೊಂದು ಪ್ರತಿಭೆ ಹಾಗೂ ಕಲೆ ಅಡಗಿರುತ್ತದೆ. ಅದನ್ನು ಹೊರತರುವ ಪ್ರಯತ್ನ ಆಗಬೇಕಿದೆ. ಕಲೆ ಇಲ್ಲದಿದ್ದರೇ ಮನುಷ್ಯ ಮೃಗವಾಗುತ್ತಾನೆ. ಇನ್ನೊಬ್ಬರ ಸಾಧನೆ ಕಂಡು ಅಸೂಹೆ ಪಡದೇ ಪ್ರೋತ್ಸಾಹ ನೀಡುವ ಕೆಲಸವಾಗಬೇಕು ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

ತಾಲೂಕಿನ ಹರವಾಳ ಗ್ರಾಮದ ಶ್ರೀ ಗುರು ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಶಿವಗುರು ಸಿದ್ಧೇಶ್ವರ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಸಾಹಿತಿ ಮಲ್ಲಣ್ಣಗೌಡ ಶಿವರಾಯಗೌಡ ನಾಗರವತ್‌ ಹರವಾಳ ರಚಿಸಿದ ಚಪಲ ಕಾದಂಬರಿ, ಸಂತಿ ಸರದಾರ ನಾಟಕ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ವಿನಮೃತೆಗೆ ಬಹಳ ಬೆಲೆ ಇದ್ದು, ಪ್ರತಿ ಸಾಹಿತಿಯಲ್ಲೂ ವಿನಮೃತೆ ಅತ್ಯವಶ್ಯಕ. ಸಾಹಿತ್ಯ ಓದಿನಿಂದ ಮಾತ್ರ ಮನಸ್ಸನ್ನು ಸಂಸ್ಕಾರಗೊಳಿಸಲು ಸಾಧ್ಯ. ಕಂಪ್ಯೂಟರ್‌ ಯುಗದಲ್ಲೂ ಮಲ್ಲನಗೌಡ ನಾಗರವತ್‌ ಅವರ ಕಾದಂಬರಿ, ನಾಟಕ ಪುಸ್ತಕ ಬಿಡುಗಡೆ ಮಾಡಿರುವುದು ಶ್ಲಾಘನೀಯ. ಹೊಸ ಕಾಲದಲ್ಲಿ ಪುಸ್ತಕದ ಸ್ವರೂಪ ಮತ್ತು ಅಸ್ತಿತ್ವ ತುಂಬಾ ಬೇರೆಯಾಗಿದೆ. ಕ್ಷಣಾರ್ಧದಲ್ಲಿ ನೂರಾರು ಪುಟಗಳ ಪುಸ್ತಕಗಳನ್ನು ಅಂತರ್‌ ಜಾಲದಲ್ಲಿ ಮುಳಿಗಿಸಿ ಬಿಡುವ ಈ ದಿನಗಳಲ್ಲಿ ಪುಸ್ತಕಗಳು ಉಳಿಯಬೇಕು ಎಂದರು.

ಜೀವನದಲ್ಲಿ ಅನುಭವಿಸಿ ಗ್ರಂಥ ರಚಿಸಿರುವ ಮಲ್ಲನಗೌಡ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಸಂಗೀತ, ಸಾಹಿತ್ಯ ಕಲಾ ಸಂಘಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಅನುದಾನ ನೀಡಲಾಗುತ್ತಿದೆ. ಶ್ರೀ ಶಿವಗುರು ಸಿದ್ಧೇಶ್ವರ ಸಾಂಸ್ಕೃತಿಕ ಕಲಾ ಸಂಘಕ್ಕೆ ಸಹಾಯ, ಸಹಕಾರ ನೀಡುವ ಭರವಸೆ ನೀಡಿದರು.

ಸಾಹಿತಿ ಪ್ರೊ| ಶಿವರಾಜ ಪಾಟೀಲ ಮಾತನಾಡಿ, ಕ್ರಿಯಾಶೀಲತೆ ಮತ್ತು ಅಧ್ಯಯನ ಶೀಲತೆಯಿಂದ ಯಾವುದೇ ಕ್ಷೇತ್ರದಲ್ಲಿ ಪ್ರಾವಿಣ್ಯತೆ ಸಾಧಿ ಸಬಹುದು ಎಂದರು. ಲೇಖಕ ಮಲ್ಲಣ್ಣಗೌಡ ನಾಗರವತ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಲಕ್ಷ್ಮೀಕಾಂತ ನಾಗರಾವತ್‌ ನೇತೃತ್ವ, ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ರಾಜಶೇಖರ ಸೀರಿ, ಷಣ್ಮುಖಪ್ಪಗೌಡ ಹಿರೇಗೌಡ, ಶಿವಣಗೌಡ ಹಂಗರಗಿ, ಬಸವಕೇಂದ್ರ ಅಧ್ಯಕ್ಷ ಶರಣಬಸವ ಕಲ್ಲಾ, ಕಸಾಪ ಅಧ್ಯಕ್ಷ ಎಸ್‌. ಕೆ.ಬಿರಾದಾರ, ಹಣಮಂತ್ರಾಯ ಹೂಗಾರ, ಸಾಹಿತಿ ರವೀಂದ್ರ ಪಾಟೀಲ, ಪ್ರಭಾಕರ ರಬಶೆಟ್ಟಿ, ಗ್ರಾಪಂ ಅದ್ಯಕ್ಷ ಆಕಾಶ ಗಣಜಲಖೇಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸತ್ಕರಿಸಲಾಯಿತು. ಸಂಜೆ ಮಲ್ಲಣ್ಣ ಶಿವರಾಯಗೌಡ ಹರವಾಳ ರಾಯಚೂರು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು. ಲಕ್ಷ್ಮೀಕಾಂತ ನಾಗರವತ್‌ ಸ್ವಾಗತಿಸಿದರು, ಸಿದ್ಧಣ್ಣ ಕೊತಲಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.