ಕಲಬುರಗಿ ಬಹಮನಿ ಕೋಟೆಯಲ್ಲಿ ಮಹತ್ವದ ತೋಪು


Team Udayavani, Jan 9, 2019, 11:40 AM IST

gul-10.jpg

ಕಲಬುರಗಿ: ಇಲ್ಲಿನ ಬಹಮನಿ ಕೋಟೆಯಲ್ಲಿ ಮಹತ್ವದ ತೋಪು ಪತ್ತೆಯಾಗಿದ್ದನ್ನು ಸುಮಾರು 30 ವರ್ಷಗಳ ಹಿಂದೆ ಸಂಶೋಧನೆ ಮೂಲಕ ಪತ್ತೆ ಹಚ್ಚಲಾಗಿದ್ದರೂ ಅದು ಮುಳ್ಳಿನ ಗಿಡಗಳಲ್ಲಿ ಮುಚ್ಚಿ ಹೋಗಿತ್ತು. ಈಗ ಮತ್ತೆ ವಿದ್ಯಾರ್ಥಿಗಳ ಸಹಾಯದಿಂದ ಪತ್ತೆ ಹಚ್ಚಿದ್ದೇನೆ ಎಂದು ಡಾ| ಶಂಭುಲಿಂಗ ಎಸ್‌. ವಾಣಿ ಹೇಳಿದರು.

ಸರಕಾರಿ ಕಾಲೇಜಿನ ಇತಿಹಾಸ ವಿಭಾಗದ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗಾಗಿ ಇನಟೆಕ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ ಬಹಮನಿ ಕೋಟೆ ವೀಕ್ಷಣೆ ಸಮಯದಲ್ಲಿ ಅವರು ಇತಿಹಾಸದ ಕುರಿತು ಮಾಹಿತಿ ನೀಡಿದರು.

ಭಾರತದಲ್ಲಿಯೇ ಮೊಟ್ಟ ಮೊದಲ ಭಾರಿಗೆ ಯುದ್ಧ ಭೂಮಿಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮದ್ದು ಗುಂಡುಗಳು ಹಾಗೂ ತೋಪುಗಳ ಬಳಕೆ ಜಾರಿಗೆ ತಂದವರು ಬಹಮನಿ ಸುಲ್ತಾನರು. ಪರ್ಶಿಯನ್‌ ಮೂಲದ ಈ ತಂತ್ರಜ್ಞಾನ ದಕ್ಷಿಣ ಭಾರತದ ಕಲಬುರಗಿಯಲ್ಲಿ ಯಶಸ್ವಿಯಾಗಿ 1365ರಲ್ಲಿ ಬಳಸಲಾಯಿತು. ಅಲ್ಲದೇ ಕೋಟೆ ರಕ್ಷಣೆಗಾಗಿ ಸುಮಾರು 26 ವಿವಿಧ ಆಕಾರದ ತೋಪುಗಳನ್ನು ಅಳವಡಿಸಲಾಗಿತ್ತು.

ಅವುಗಳಲ್ಲಿ ಪ್ರಸ್ತುತ 14 ತೋಪುಗಳನ್ನು ಕೋಟೆಯ ಒಳಗೋಡೆ ಮೇಲೆ ನೋಡಬಹುದು. ಇವುಗಳಲ್ಲಿ ಎರಡು ತೋಪುಗಳು ನಂತರದ ಬಹಮನಿ ಸುಲ್ತಾನರ ಕಾಲದಲ್ಲಿ ನಿರ್ಮಿಸಲಾಗಿವೆ. ಇವು ಏಳು ಅಡಿ ಉದ್ದ, ಒಂದು ಅಡಿ ಎತ್ತರದಿಂದ ಕೂಡಿದ್ದು, ಕೆಂಪುವರ್ಣದಲ್ಲಿ ಕಾಣುತ್ತವೆ. ಇದರ ಮೇಲೆ ಐದು ಹಂತದಲ್ಲಿ ರಚನೆ ಮಾಡಿದ ವೃತ್ತಾಕಾರದ ಹೂಬ್ಬಳಿ ರಚನೆ, ಮುಂಭಾಗದಲ್ಲಿ ಸಮಾನ ಆಕಾರದ ಚಿತ್ರಗಳು, ಅದರ ಹಿಂದಿನ ಭಾಗದಲ್ಲಿ ಎರಡು ಮೀನುಗಳು ವೃತ್ತಾಕಾರದಲ್ಲಿ ತಿರುಗುತ್ತಿರುವ ಚಿತ್ರವಿದೆ. ಇದು ತೋಪಿನ ಬಳಕೆ ಸಂಕೇತವಾಗಿರಬಹುದು ಎಂದು ತಿಳಿಸಿದರು.

ತೋಪಿನ ಹಿಂಭಾಗದಲ್ಲಿ ಎರಡು ಸಾಲುಗಳ ಪರ್ಶಿಯನ್‌ ಶಾಸನವಿದೆ. ಕಲಬುರಗಿ ಬಹಮನಿಯರ ಕಾಲದಲ್ಲಿ ನಿರ್ಮಿಸಲಾದ ಯಾವುದೇ ತೋಪುಗಳ ಮೇಲೆ ಶಾಸನಗಳು ಕಂಡುಬರುವುದಿಲ್ಲ. ಈ ಶಾಸನ ಕುರಿತು ಪ್ರೊ| ಅಬ್ದುಲ್‌ ರಬ್‌ ಮುಖ್ಯಸ್ಥರು ಉರ್ದು ವಿಭಾಗ, ಗು.ವಿ.ಕ. ಹಾಗೂ ಇತರ ಪರ್ಶಿಯನ್‌ ಭಾಷೆ ಪರಿಣಿತರೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು. ಮೊದಲಿನ ಸಾಲುಗಳ ಕೆಲವು ಅಕ್ಷರಗಳು ಅಸ್ಪಷ್ಟವಾಗಿದ್ದು, ಉಳಿದ ಅಕ್ಷರಗಳಲ್ಲಿ ನವಾಬ್‌ ರುಕ್ನು ದೌಲಾ ಎಂದು ಹಾಗೂ 1184 ಅ.ಹಿ. (ಕ್ರಿ.ಶ.1770-71) ಎರಡನೇ ಸಾಲಿನಲ್ಲಿ ಮುಜಾಹೀದ್‌ ಬಹಾದ್ದೂರ ಝಾಫರ್‌-ಉದ್‌-ದೌಲಾ ಎಂದು ಬರೆಯಲಾಗಿದೆ ಎನ್ನುವ ಕುರಿತು ಡಾ| ರಬ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.