ಶುಭ ಕಾರ್ಯಕ್ಕೆ ಪರವಾನಗಿ ಕೇಳಲು ಅಲೆದಾಟ


Team Udayavani, Apr 27, 2021, 4:52 PM IST

ದಸ,ಮನಗ್

ಆಳಂದ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ಜಾರಿಗೆ ತಂದಿರುವ ನೈಟ್‌ ಕರ್ಫ್ಯೂ ಹಾಗೂ ವೀಕೆಂಡ್‌ ಕರ್ಫ್ಯೂಗೆ ಜನರು ಗೊಂದಲಕ್ಕೆ ಒಳಗಾಗಿ ಮದುವೆ ಸೇರಿದಂತೆ ಇನ್ನಿತರ ಕುಟುಂಬಗಳ ಶುಭ ಕಾರ್ಯಕ್ಕೆ ಅನುಮತಿ ಪಡೆಯಲು ಕಚೇರಿಗಳತ್ತ ಅಲೆದಾಡುತ್ತಿದ್ದಾರೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಏ. 21ರಿಂದ ರಾತ್ರಿ 9 ಗಂಟೆಯಿಂದ ಮೇ 4ರ ಬೆಳಗ್ಗೆ 6 ಗಂಟೆ ವರೆಗೆ ನೈಟ್‌ ಕರ್ಫ್ಯೂ, ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ವಿಕೆಂಡ್‌ ಕರ್ಫ್ಯೂ ಜಾರಿ ಮಾಡಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಮುಂದಾದ ಪ್ರಯುಕ್ತ ಜನ ಸಾಮಾನ್ಯರು ಗೊಂದಲಕ್ಕಿಡಾಗಿ ತಮ್ಮ ಎಲ್ಲ ಚಟುವಟಿಕೆಗಳನ್ನು ಮೊಟುಕುಗೊಳಿಸ ತೊಡಗಿದ್ದಾರೆ. ವರ್ಷದ ಏಪ್ರಿಲ್‌ ಮತ್ತು ಮೇ ತಿಂಗಳಲ್ಲೇ ಅತಿ ಹೆಚ್ಚಾಗಿ ನಡೆಯುವ ಮದುವೆ, ಕುಪ್ಪಸ, ನಿಶ್ಚಿತಾರ್ಥ ಕಾರ್ಯಕ್ರಮಗಳಿಗೆ ಮುಂದಾದವರಿಗೆ ನುಂಗದ ತುತ್ತಾಗಿ ಪರಿಣಮಿಸಿದೆ.

ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಡಳಿತ ಆದೇಶಿಸಿರುವುದಿಂದ ವಧು-ವರನ ಕುಟುಂಬಸ್ಥರು ತಹಶೀಲ್ದಾರ್‌ ಕಚೇರಿಗೆ ವಿವಾಹ ಆಮಂತ್ರಣ ಪತ್ರಿಕೆಯೊಂದಿಗೆ ಅಲೆದಾಡುತ್ತಿದ್ದಾರೆ. ಹೀಗಾಗಿ ಜನದಟ್ಟಣೆಯೂ ಹೆಚ್ಚಾಗುತ್ತಿದೆ. ಮದುವೆ ಮಾಡಿಕೊಳ್ಳಲೇ ಬೇಕಾದಲ್ಲಿ ಸರ್ಕಾರದ ನಿಯಮಾವಳಿಯಂತೆ ತಾಲೂಕು ತಹಶೀಲ್ದಾರ್‌ ಅವರಿಂದ ಅನುಮತಿ ಪಡೆದು 50 ಜನರು ಪಾಲ್ಗೊಳ್ಳಲು ಮಾತ್ರ ಅನುಮತಿ ನೀಡಲಾಗುತ್ತಿದೆ. ಇದುವರೆಗೂ ತಾಲೂಕಿನಲ್ಲಿ ಮದುವೆ ಮಾಡಿಕೊಳ್ಳಲು 120 ಅರ್ಜಿ ಸಲ್ಲಿಕೆಯಾಗಿವೆ.

ಎಲ್ಲ ಅರ್ಜಿಗಳಿಗೆ ತಹಶೀಲ್ದಾರರು ನಿಯಮಾವಳಿಯಂತೆ ವಿವಾಹ ಕೈಗೊಳ್ಳಬೇಕು ಎಂದು ಷರತ್ತು ವಿಧಿ ಸಿ, ಅನುಮತಿ ನೀಡಿದ್ದಾರೆ. ಇನ್ನು ಸಾರ್ವಜನಿಕರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದುವರಿದಿದೆ. ದಾಂಪತ್ಯ ಜೀವನಕ್ಕೆ ಕಾಲಿಡಬೇಕಾದ ಜೋಡಿಗಳ ಕನಸು ಕಮರಿ ಹೋಗಲು ನೈಟ್‌ ಕರ್ಫ್ಯೂ, ವಿಕೆಂಡ್‌ ಕರ್ಫ್ಯೂ ಅಡ್ಡಿಯಾಗಿದ್ದರಿಂದ ವಧು-ವರರ ಎರಡು ಕುಟುಂಬಸ್ಥರಿಗೆ ದಿಕ್ಕು ತೋಚದಾಗಿದೆ.

ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪಟ್ಟಣದ ಎ.ವಿ.ಪಾಟೀಲ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವೊಂದರ ಕುಟುಂಬಸ್ಥರಿಗೆ ದಂಡ ವಿಧಿಸಲಾಗಿದೆ. ಇದರಿಂದಾಗಿ ಅನೇಕರು ಮದುವೆಗಳನ್ನು ಮುಂದೂಡುವ ಯೋಚನೆಯಲ್ಲಿದ್ದಾರೆ. ಶುಭ ಸಮಾರಂಭಗಳಿಗೆ ಅನುಮತಿ ಪಡೆಯಲು ಮುಂದಾಗುವ ಜನರಿಗೆ ದಾಖಲೆ ಸಂಗ್ರಹ, ಸಾರಿಗೆ ವೆಚ್ಚ ಮತ್ತು ಮಧ್ಯವರ್ತಿಗಳಿಗೆ ಹಣ ಹೀಗೆ ಜೇಬಿಗೆ ಕತ್ತರಿಯೂ ಬೀಳತೊಡಗಿದೆ ಎಂದು ಜನರು ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.