ಅಟಲ್ ಆದರ್ಶ-ಸಿದ್ದಾಂತ ಪಾಲಿಸಿ: ಶಾಸಕ ನರಿಬೋಳ
Team Udayavani, Dec 26, 2021, 11:11 AM IST
ಜೇವರ್ಗಿ: ದೂರದರ್ಶಿತ್ವ ಹೊಂದಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ಆದರ್ಶ, ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಇತರರಿಗೋಸ್ಕರ ಶ್ರಮಿಸಿದ ಮಹಾತ್ಮರ ಸಾಲಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಗ್ರಗಣ್ಯ ನಾಯಕರು. ಭಾರತದ ಸರ್ವಾಂಗೀಣ ಅಭಿವೃದ್ಧಿಗಾಗಿ ಅಟಲ್ ಸಾಕಷ್ಟು ಶ್ರಮಿಸಿದ್ದಾರೆ. ಅಟಲ್ ಕೇವಲ ಒಬ್ಬ ಉತ್ತಮ ರಾಜಕಾರಣಿ ಮಾತ್ರ ಆಗಿರಲಿಲ್ಲ, ಉತ್ತಮ ವಾಗ್ಮಿ ಹಾಗೂ ಕವಿಯಾಗಿದ್ದರು. ಕೊನೆ ಉಸಿರು ಇರುವ ವರೆಗೆ ದೇಶದ ಏಳಿಗೆ ಕಾಣುತ್ತಿದ್ದ ವಾಜಪೇಯಿ ನಾಯಕತ್ವದಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಬಸವರಾಜ ಪಾಟೀಲ ನರಿಬೋಳ, ಗ್ರಾಪಂ ಸದಸ್ಯ ಅಶೋಕ ಬಿರಾದಾರ ಗುಡೂರ, ಅಪ್ಪಾಜಿ ಗೌನಳ್ಳಿ, ಶರಣು ಕೋಳಕೂರ, ವೀರೇಶ ಪಾಟೀಲ ಹರನೂರ, ರಾಜು ತಳವಾರ, ಜಯಪ್ರಕಾಶ ಪಾಟೀಲ, ಚಂದ್ರು ಸೀರಿ, ವಿಶಾಲ ಭಂಕೂರ, ಕೇದಾರಲಿಂಗಯ್ಯ ಹಿರೇಮಠ, ಶರಣು ಪೂಜಾರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ