ಕೋವಿಡ್ ವಾರಿಯರ್ಸ್ ಮೇಲೆ ಸೋಂಕಿತರ ಕುಟುಂಬದಿಂದ ಹಲ್ಲೆ
Team Udayavani, Jun 13, 2020, 5:09 PM IST
ಕಲಬುರಗಿ: ಕೋವಿಡ್ ಕರ್ತವ್ಯದಲ್ಲಿರುವ ಆಶಾ ಕಾರ್ಯಕರ್ತೆ ಮತ್ತು ಆಕೆಯ ಪತಿಯ ಮೇಲೆ ಸೋಂಕಿತ ವ್ಯಕ್ತಿಗಳ ಕುಟುಂಬದವರು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಾಂಪೂರಹಳ್ಳಿಯಲ್ಲಿ ನಡೆದಿದೆ.
ವಾಡಿ ಪೊಲೀಸ್ ಠಾಣೆಯ ಶಾಂಪೂರಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ಒಂದೇ ಕುಟುಂಬದ ಮೂವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಮುಂಬೈನಿಂದ ಆಗಮಿಸಿದ ಇವರಿಗೆ ಸರ್ಕಾರಿ ಕ್ವಾರಂಟೈನ್ ನಿಂದ ಮನೆಗೆ ತೆರಳಿ ಮೇಲೆ ಪಾಸಿಟಿವ್ ಎಂದು ವರದಿ ಬಂದಿದೆ. ಅಂದೇ ಮೂವರು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆದರೆ, ಕ್ವಾರಂಟೈನ್ ಅವಧಿ ಮುಗಿಸಿ ಬಂದಿರುವ ಮೂವರೂ ಆರೋಗ್ಯವಾಗಿಯೇ ಇದ್ದಾರೆ. ಅವರಲ್ಲಿ ಕೋವಿಡ್ ಲಕ್ಷಣಗಳು ಇಲ್ಲ. ಸುಖಾಸುಮ್ಮನೆ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದಕ್ಕೆಲ್ಲ ನೀನೆ ಕಾರಣ ಎಂದು ಅದೇ ಗ್ರಾಮದ ಆಶಾ ಕಾರ್ಯಕರ್ತೆ ಜ್ಯೋತಿ ಮೇಲೆ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಪತ್ನಿಗೆ ಹಲ್ಲೆ ಮಾಡುವುದನ್ನು ಸಹಿಸದ ಸ್ಥಳದಲ್ಲೇ ಇದ್ದ ಪತಿ ತಾರಾಸಿಂಗ್ ಪವಾರ್ ಜ್ಯೋತಿ ರಕ್ಷಣೆಗೆ ಹೋಗಿದ್ದಾರೆ. ಆಗ ಆತನ ಮೇಲೂ ಸೋಂಕಿತರ ಕುಟುಂಬದವರು ಹಲ್ಲೆ ಮಾಡಿದ್ದಾರೆ.
ಈ ಘಟನೆ ಬಗ್ಗೆ ಆಶಾ ಕಾರ್ಯಕರ್ತೆಯರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ