ವಿಚ್ಛೇದನಕ್ಕೆ ಒತ್ತಾಯಿಸಿ ಪತ್ನಿ ಮೇಲೆ ಹಲ್ಲೆ: ದೂರು ದಾಖಲು
Team Udayavani, May 21, 2022, 12:02 PM IST
ಕಲಬುರಗಿ: ಮಹಿಯೊಬ್ಬಳಿಗೆ ವಿವಾಹ ವಿಚ್ಛೇದನ ನೀಡುವಂತೆ ಒತ್ತಾಯಿಸಿ ದೈಹಿಕ ಹಲ್ಲೆ ಮಾಡಿರುವ ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ.
ಸರೋಜಾ ಶಿವಾನಂದ ಮಡಿವಾಳ (26) ಹಲ್ಲೆಗೊಳಗಾದವರು.
ಸರೋಜಾಗೆ ಈ ಹಿಂದೆಯೇ ಮದುವೆಯಾಗಿತ್ತು. ಅಕೆಯ ಪತಿ ತೀರಿಕೊಂಡಿದ್ದ. ಒಬ್ಬಳು ಮಗಳು ಇದ್ದಳು. ಆದರೂ ಆಕೆಗೆ ಜೀವನ ಕೊಡುವುದಾಗಿ ನಂಬಿಸಿದ್ದ ಶಿವಾನಂದ ರುದ್ರಪ್ಪ ಮಡಿವಾಳ ಎನ್ನುವವನೊಂದಿಗೆ ಡಿಸೆಂಬರ್ 2000ರಲ್ಲಿ ಮದುವೆಯಾಗಿದ್ದಳು. ಆರಂಭದಲ್ಲಿ ಸ್ವಲ್ಪ ದಿನ ಚೆನ್ನಾಗಿತ್ತು. ಬಳಿಕ ಸಾಂಸಾರಿಕ ವಿಷಯಗಳಿಗಾಗಿ ದಿನಾಲು ಹಲ್ಲೆ ಮಾಡುತ್ತಿದ್ದ.
ಇತ್ತೀಚೆಗೆ ತನ್ನ ವರಸೆ ಬದಲಿಸಿದ್ದ ನಾಗನಹಳ್ಳಿ ಪೊಲೀಸ್ ತರಬೇತಿ ಶಾಲೆಯಲ್ಲಿ ಕೆಲಸ ಮಾಡುವ ಶಿವಾನಂದ ರುದ್ರಪ್ಪ ಮಡಿವಾಳ ತನಗೆ ವಿಚ್ಛೇದನ ನೀಡುವಂತೆ ಒತ್ತಾಯಿಸಿ ಜಗಳವಾಡುತ್ತಿದ್ದ. ಜಗಳ ವಿಕೋಪಕ್ಕೆ ಹೋಗಿ ಫೆ. 22ರಂದು ಹಲ್ಲೆ ಮಾಡಿ ಗಾಯಗೊಳಿಸಿದ್ದಾನೆ ಎಂದು ಪತ್ನಿ ಸರೋಜಾ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
MUST WATCH
ಹೊಸ ಸೇರ್ಪಡೆ
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ
Tollywood: ʼಫ್ಯಾಮಿಲಿ ಸ್ಟಾರ್ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿದ ದೇವರಕೊಂಡ
ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?