ಕೋಲಿ ಸಮಾಜಕ್ಕೆ ಪರಿಷತ್‌ ಸದಸ್ಯತ್ವಕ್ಕಾಗಿ ಯತ್ನ


Team Udayavani, Sep 15, 2018, 11:58 AM IST

gul-6.jpg

ಕಲಬುರಗಿ: ಕಾಡಿ ಬೇಡಿಯಾದರೂ ಈ ಬಾರಿ ಒಂದು ಎಂಎಲ್‌ಸಿ, ಎರಡು ನಿಗಮ ಮಂಡಳಿಗೆ ಸ್ಥಾನವನ್ನು ಸಮಾಜಕ್ಕೆ ತಂದು ಕೊಡುವುದಾಗಿ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‌ ವಾಗ್ಧಾನ ಮಾಡಿದರು. ನಗರದ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಕೋಲಿ ಸಮಾಜ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿತರಾಗಿ ಅವರು ಮಾತನಾಡಿದರು.

ಕೋಲಿ ಸಮಾಜಕ್ಕೆ ನಿರಂತರವಾಗಿ ರಾಜಕೀಯ ಅನ್ಯಾಯವಾಗಿದೆ. ಅದನ್ನು ನಮ್ಮವರೇ ಮಾಡಿರುವುದು ದುರಂತ. ನನಗೆ ಮಕ್ಕಳಿಲ್ಲ. ನೀವೇ ಮಕ್ಕಳು ಎನ್ನುತ್ತ ಜೀವ ಕೊಡುತ್ತೇನೆ. ಆಸ್ತಿ ಕೊತ್ತೇನೆ ಎನ್ನುತ್ತಲೇ ಸಮಾಜಕ್ಕೆ ಸಿಗುವ ಎಲ್ಲ ಸೌಕರ್ಯಗಳನ್ನು ಒಬ್ಬರೇ ಅನುಭವಿಸಿರುವುದು ನಮ್ಮ ಸಮಾಜದ ರಾಜಕೀಯ ಅಂಗವೈಕಲ್ಯಕ್ಕೆ ಕಾರಣವಾಗಿದೆ
ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಹಲವಾರು ವರ್ಷಗಳಿಂದ ಬೀದರ ಜಿಲ್ಲೆಯಲ್ಲಿ ಟೋಕರೆ ಕೋಳಿ, ಕೋಳಿ, ಗೊಂಡ ಜಾತಿಗಳಿಗೆ ಎಸ್‌ಟಿ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪಡೆಯಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಅಲ್ಲದೆ, ದೆಹಲಿಗೆ ನಿಯೋಗ
ಕೊಂಡೋಯ್ದು ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸಲು ಮನವಿ ಮಾಡಲಾಗುವುದು ಎಂದು ಹೇಳಿದರು.

ಲೋಕಸಭೆ ಚುನಾವಣೆಗೂ ಮುನ್ನ ಎಸ್‌ಟಿಗೆ ಸೇರಿಸಲು ಒತ್ತಡ ಹೇರೋಣ. ನಮ್ಮ ನಾಯಕರಾದ ಡಾ| ಮಲ್ಲಿಕಾರ್ಜುನ ಖರ್ಗೆ ಅವರಿಗೂ ಈ ಕುರಿತು ಆಸಕ್ತಿ ಇದ್ದು, ಅದನ್ನು ಮಾಡಿಸಿಕೊಳ್ಳೋಣ ಎಂದು ಹೇಳಿದರು. ಕಾರ್ಯಕ್ರಮ ಸಂಯೋಜಕ ಹಾಗೂ ಕೋಲಿ ಸಮಾಜ ರಾಜ್ಯ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಬಿ. ನಾರಾಯಣರಾವ್‌ ನಮ್ಮ ಸಮಾಜದಲ್ಲಿ ಒಬ್ಬ ಅಪರೂಪದ ರಾಜಕಾರಣಿ. ತನ್ನ ರಕ್ತದ ಒಂದೊಂದು ಹನಿ ಧಾರೆ ಎರೆದು ಶಾಸಕರಾಗಿ ಚುನಾಯಿತರಾಗುವಂತೆ ಎಲ್ಲ ಸಮುದಾಯದ ಜನರಲ್ಲಿ ಪ್ರೇರಣೆ, ಪ್ರಜ್ಞೆ ಜಾಗೃತಿ ಮಾಡಿರುವ ನಾಯಕ. ಬಿ. ನಾರಾಯಣರಾವ್‌ ಅವರು, ಬೀದರನಲ್ಲಿ ದಿ| ಧರ್ಮಸಿಂಗ್‌ ಅವರನ್ನು ಗೆಲ್ಲಿಸಿದಂತೆ ಕಲಬುರಗಿಯಲ್ಲೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಖಂಡಿತ ಗೆಲ್ಲಿಸಲು ಟೊಂಕ ಕಟ್ಟಿ ನಮ್ಮೊಂದಿಗೆ ನಿಲ್ಲುತ್ತಾರೆ. ಕೋಲಿ ಸಮಾಜದ ಹಿರಿಯರಾದ ಶಿವಶರಣಪ್ಪ ಕೋಬಾಳ ಹಾಗೂ ಹಿರಿಯ ದಲಿತ ಮುಖಂಡ ವಿಠuಲ ದೊಡ್ಡಮನಿ, ಸಾನ್ನಿಧ್ಯ ವಹಿಸಿದ್ದ ತೊನಸನಳ್ಳಿಯ ಅಲ್ಲಮಪ್ರಭು ಸಂಸ್ಥಾನ ಮಠದ ಪೀಠಾಧಿಪತಿ ಮಲ್ಲಣ್ಣಪ್ಪ ಮುತ್ಯಾ, ಅತಿಥಿಯಾಗಿ ಆಗಮಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಅಲ್ಲಂಪ್ರಭು ಪಾಟೀಲ, ಮೇಯರ್‌ ಶರಣಕುಮಾರ ಮೋದಿ, ಕೋಲಿ ಸಮಾಜದ ವಿಜಯಪುರ ಜಿಲ್ಲಾಧ್ಯಕ್ಷ ಶರಣಪ್ಪ ಕಣಮೇಶ್ವರ ಮಾತನಾಡಿದರು.

ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಹಳ್ಳಿಖೇಡದ ದತ್ತಾತ್ರೇಯ ಗುರೂಜಿ, ಶ್ರೀಮತಿ ನಾರಾಯಣರಾವ್‌, ಶಿವಲಿಂಗಪ್ಪ ಕಿನ್ನೂರ, ಭೀಮಣ್ಣ ಸಾಲಿ, ತಿಪ್ಪಣ್ಣ ರೆಡ್ಡಿ ಆರ್‌.ಎಂ. ನಾಟೀಕಾರ, ಮಲ್ಲಿಕಾರ್ಜುನ ಸಾಹು, ಮಹಾಂತೇಶ ಪಾಟೀಲ, ಶರಣಪ್ಪ ತಳವಾರ, ರವಿರಾಜ ಕೊರವಿ, ಜಗನ್ನಾಥ ಜಮಾದಾರ, ವಸಂತ ನರಿಬೋಳ, ಲಕ್ಷ್ಮೀಪುತ್ರ ಜಮಾದಾರ, ದೇವೇಂದ್ರಪ್ಪ ಜಮಾದಾರ, ಮಹಾರಾಯ ಅಗಸಿ, ಅಣ್ಣಪ್ಪ ಜಮಾದಾರ, ರೇವಣಸಿದ್ದಪ್ಪ ಕಮಾನಮನಿ, ಅರ್ಜುನ ಜಮಾದಾರ, ದೇವೀಂದ್ರಪ್ಪ ತೆಗನೂರು, ಸೈಬಣ್ಣ ಜಮಾದಾರ, ರಾಜೇಂದ್ರ ರಾಜವಾಳ, ಭೀಮಾಶಂಕರ ಫಿರೋಜಾಬಾದ್‌ ಇದ್ದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.