ಕೋಲಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಯತ್ನ
Team Udayavani, Nov 22, 2018, 10:43 AM IST
ಕಲಬುರಗಿ: ಶಿಕ್ಷಣವೇ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದರಿಂದ ಕೋಲಿ ಸಮುದಾಯದವರೂ ಉತ್ತಮ ಶಿಕ್ಷಣ ಪಡೆದು ಸಂಸ್ಕಾರಯುತ ಬದುಕು ನಿರ್ಮಿಸಿಕೊಳ್ಳಬೇಕೆಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.
ತಾಲೂಕಿನ ಫಿರೋಜಾಬಾದ ಗ್ರಾಮದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಹಾಗೂ ನೂತನ ಮಂಟಪ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೋಲಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿಕೊಡಲು ಸದಾ ಬದ್ಧನಾಗಿರುವುದಾಗಿ ಹೇಳಿದರು.
ಫಿರೋಜಾಬಾದ್ ಗ್ರಾಮದಲ್ಲಿ ಸಿಸಿ ರಸ್ತೆ, ಮೇಲ್ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯಲ್ಲಿದೆ. ಬಹುಮುಖ್ಯವಾಗಿ
ಸಮುದಾಯ ಭವನದ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 20 ಲಕ್ಷ ರೂ. ಅನುದಾನ ದೊರೆಕಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದರು.
ಅಖೀಲ ಭಾರತೀಯ ಕೋಲಿ ಸಮಾಜದ ರಾಜ್ಯಾಧ್ಯಕ್ಷ ತಿಪ್ಪಣ್ಣ ರೆಡ್ಡಿ ಮಾತನಾಡಿ, ಈ ಜನಾಂಗವು ಶೈಕ್ಷಣಿಕ, ಸಾಮಾಜಿಕವಾಗಿ ಮುಖ್ಯವಾಹಿನಿಗೆ ಬರಬೇಕಿದೆ. ಈ ಸಮುದಾಯದ ಜನರು ಒಗ್ಗೂಡಿದಾಗ ಮಾತ್ರ ಸಂವಿಧಾನ ಬದ್ಧ ಸೌಲಭ್ಯ ಸಿಗಲು ಸಾಧ್ಯ ಎಂದರು. ಹಾವೇರಿಯ ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧಿಪತಿ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತೋನಸನಹಳ್ಳಿಯ ಪೂಜ್ಯ ಮಲ್ಲಣ್ಣಪ್ಪ ಸ್ವಾಮೀಜಿ, ಸಿಂದಗಿಯ ಪೂಜ್ಯ ಶಾಂತಗಂಗಾಧರ ಶ್ರೀ, ಅನ್ನದಾನೇಶ್ವರ
ವಿರಕ್ತ ಮಠದ ಪೂಜ್ಯ ಗುರುಬಸವ ಸ್ವಾಮೀಜಿ, ಹಳ್ಳಿಖೇಡ(ಕೆ)ನ ದತ್ತಾತ್ರೇಯ ಗುರೂಜಿ ಆಶೀರ್ವಚನ ನೀಡಿದರು.
ರಾಜ್ಯ ಕೋಲಿ ಸಮಾಜದ ಮಾಜಿ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ, ಸಮಾಜದ ಮುಖಂಡರಾದ ಭೀಮಣ್ಣ ಸಾಲಿ, ಸಾಯಬಣ್ಣ ನೀಲಪ್ಪಗೋಳ, ಅವ್ವಣ್ಣ ಮ್ಯಾಕೇರಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಪಾಟೀಲ್, ದಿಲೀಪ ಆರ್.ಪಾಟೀಲ್, ರಾಜಗೋಪಾಲರೆಡ್ಡಿ, ಶಿವಶರಣಪ್ಪ ಕೋಬಾಳ, ಶಿವಲಿಂಗಪ್ಪ ಕಿನ್ನೂರ್, ಶಂಕರ ಕಟ್ಟಿಸಂಗಾವಿ, ವಿಜಯಕುಮಾರ ಹದಗಲ್, ನಿಂಗಣ್ಣ ಹುಳಗೋಳಕರ್, ಮಶಾಖ ಪಟೇಲ್, ವಿದ್ಯಾಸಾಗರ ಮಂಗಳೂರೆ, ಲಚ್ಚಪ್ಪ ಜಮಾದಾರ್, ದೇವೀಂದ್ರ, ಶರಣಗೌಡ ಪಾಟೀಲ್, ಸ್ಥಳೀಯರಾದ ಮಲ್ಲಿಕಾರ್ಜುನ ಕಲ್ಯಾಣಕರ್, ಕಲ್ಲಪ್ಪ ಪ್ಯಾಟಿ, ಮಲ್ಲಿಕಾರ್ಜುನ ಧೂಳಬಾ, ಅರ್ಜುನ ಸಿಬಾ,
ಶಿವಶಂಕರ ಮಸಳ್ಳಿ, ಭೀಮಾಶಂಕರ ಇದ್ದರು. ವಿಠ್ಠಲ ಕಲ್ಯಾಣಕರ ಸ್ವಾಗತಿಸಿದರು. ನಾಗಣ್ಣ ಮಾಸ್ತರ, ನಾಗಣ್ಣ ದೂಳಬಾ ನಿರೂಪಿಸಿದರು. ರಮೇಶ ನಾಟೀಕಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ