ಅಂಗನವಾಡಿಗೆ ಕಳಪೆ ಆಹಾರ: ಕೋಲಾಹಲ


Team Udayavani, Feb 16, 2017, 3:17 PM IST

gul5.jpg

ಕಲಬುರಗಿ: ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆಯಾಗುತ್ತಿರುವುದನ್ನು ಬುಧವಾರ ನಡೆದ ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸದಸ್ಯರೆಲ್ಲರೂ ಪಕ್ಷ ಭೇದ ಮರೆತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದರು. 

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನರೋಣಾ ಕ್ಷೇತ್ರದ ಸದಸ್ಯೆ ವಿಜಯಲಕ್ಷ್ಮೀ ರಾಗಿ ಅವರು ಆಳಂದ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅತ್ಯಂತ ಕಳಪೆ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತಿದೆ. ಬೇಕಿದ್ದರೆ ಎಲ್ಲ ಮಾದರಿಗಳನ್ನು ತರಲಾಗಿದೆ.

ಮುಂದಿನ ಕ್ರಮ ತಮಗೆ ಬಿಟ್ಟದ್ದು ಎಂದು ಅಧ್ಯಕ್ಷರ ಮುಂದೆ ಹೋಗಿ ದವಸ ಧಾನ್ಯಗಳ ಪೊಟ್ಟಣಗಳನ್ನು ಪ್ರದರ್ಶಿಸಿದರು. ಇದನ್ನು ಹಿಂದಿನ ಸಭೆಯಲ್ಲೂ ಗಮನ ಸೆಳೆದಿದ್ದರೂ ಯಾವುದೇ ಬದಲಾವಣೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಡದಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆ ರತ್ನವ್ವ ಪೂಜಾರಿ ಸಹ ಅಫಜಲಪುರ ತಾಲೂಕಿನ ಮಲ್ಲಾಬಾದ್‌ನಲ್ಲಿ ಕೂಡಾ ಕಳಪೆ ಆಹಾರ ನೀಡಲಾಗುತ್ತಿದೆ. ತಮ್ಮ ಅಳಲಿಗೆ ಕಿಮ್ಮತ್ತು ಇಲ್ಲದಂತಾಗಿದೆ ಎಂದರು. ಇದಕ್ಕೆ ಇತರ ಸದಸ್ಯರು ಧ್ವನಿಗೂಡಿಸಿದರು.

ಅರಳಗುಂಡಗಿ ಕ್ಷೇತ್ರದ ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂಬುದರಾಗಿ ಸದಸ್ಯರು ಈಗ ಮೂರನೇ ಸಲ ದಾಖಲೆ ಸಮೇತ ದೂರು ನೀಡಿದ್ದರೂ ಯಾವುದೇ ಕ್ರಮವಾಗಲಿಲ್ಲ ಎಂದಾದ ಮೇಲೆ ಸಾಮಾನ್ಯ ಸಭೆ ಯಾಕೆ ನಡೆಸಬೇಕು,

ತಾವು ಸಮಸ್ಯೆಗಳನ್ನು ಬಗೆಹರಿಯಲೆಂದು ಬಡಿದಾಡುತ್ತೇವೆ. ಆದರೆ ತಮ್ಮ ಧ್ವನಿ ಕೋಣನ ಮುಂದೆ ಕಿನ್ನೂರಿ ಬಾರಿಸಿದಂತಾದರೆ ಹೇಗೆ? ಜಿ.ಪಂ ಸದಸ್ಯರಾಗಿ ಇಂದಿಗೆ ವರ್ಷವಾಗುತ್ತಾ ಬಂದರೂ ಸದಸ್ಯರು ಆರೋಪ ಮಾಡಿರುವ ಯಾವುದೇ ಒಬ್ಬ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಿಲ್ಲ ಎನ್ನುವುದಾರೆ ಸಭೆ ನಡೆಸುವುದೇ ವ್ಯರ್ಥ ಎನಿಸುತ್ತದೆ ಎಂದರು. 

ಸದಸ್ಯ ಹರ್ಷಾನಂದ ಗುತ್ತೇದಾರ ಮಾತನಾಡಿ, ಸದಸ್ಯರೆಲ್ಲರೂ ಸಮರ್ಪಕವಾಗಿ ವಾದ ಮಂಡಿಸದೇ ಇರುವುದು ಹಾಗೂ ಈ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳದೇ ಇರುವುದು ತಮ್ಮೆಲ್ಲರ ಲೋಪ ಎಂದು ವಾಸ್ತವ ಅಂಶ ಬಿಚ್ಚಿಟ್ಟರು. 

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಆಗುತ್ತಿರುವುದನ್ನು ಪ್ರಯೋಗಾಲಯಕ್ಕೆ ಕಳುಹಿಸಿ. ವರದಿ ಬಂದ ನಂತರ ಅಧಿಕಾರಿಗಳ ಹಾಗೂ ಪೂರೈಕೆದಾರರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಇಒ ಅನಿರುದ್ಧ ಶ್ರವಣ ಸಭೆ ಗಮನಕ್ಕೆ ತಂದರು.  

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.