ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಜಾಗೃತಿ ಜಪ


Team Udayavani, Jan 24, 2019, 6:54 AM IST

gul-7.jpg

ಕೊಪ್ಪಳ: ಶ್ರೀಗವಿಸಿದ್ಧೇಶ್ವರ ಜಾತ್ರೆ ಸಾಮಾಜಿಕ, ವೈಚಾರಿಕ ಜಾಗೃತಿಗೆ ಮುನ್ನುಡಿ ಬರೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಾತ್ರೆಯಲ್ಲಿ ತಲೆ ಎತ್ತಿರುವ ಮಿಠಾಯಿ, ಆಟಿಕೆ ಸಾಮಗ್ರಿ ಅಂಗಡಿಗಳ ಮಾಲಿಕರು ಸಾಮಾಜಿಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಜಾತ್ರೆಯಲ್ಲಿ ಮಿಠಾಯಿ ಅಂಗಡಿಗಳ ಮಾಲಕರು ಜಾಗೃತಿ ಸಂದೇಶ ಸಾರುವ ಚಿತ್ರಗಳನ್ನು ಬಿಡಿಸಿದ್ದಲ್ಲದೇ, ಅಂಗಡಿಯಲ್ಲಿ ತಿಳಿವಳಿಕೆ ಮೂಡಿಸುವ ಫಲಕಗಳನ್ನು ಹಾಕಿಕೊಂಡಿದ್ದಾರೆ.

“ಓ ಬನ್ನಿ ನನ್ನ ದೇಶಬಾಂಧವರೇ ರೈತ ಸಾಮ್ರಾಜ್ಯ ಕಟ್ಟೋಣ ಬನ್ನಿ’, ಅಂಧರಿಗೆ ನೀಡಿದರೇ ನಿಮ್ಮ ದೃಷ್ಟಿ ಆಗುವುದು ಸುಂದರ ಲೋಕ ಸೃಷ್ಟಿ, ಡಾ| ಸ್ವಾಮಿನಾಥನ್‌ ಆಯೋಗ ಶಿಪಾರಸು ಜಾರಿಗೊಳಿಸಿ’, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿ, ವಿಜ್ಞಾನವನ್ನು ಬೆಂಬಲಿಸಿ ಭಾರತವನ್ನು ಬೆಳಗಿಸಿ, ಅಜ್ಞಾನದಿಂದ ಸುಜ್ಞಾನದಡೆಗೆ ನಡೆಸುವ ಕೊಪ್ಪಳ ಗವಿಮಠಕ್ಕೆ ಕೋಟಿ ಕೋಟಿ ನಮಸ್ಕಾರಗಳು, ಹೀಗೆ ಹತ್ತು ಹಲವು ಸಂದೇಶಗಳನ್ನು ಮಿಠಾಯಿ, ಸಿಹಿ ಪದಾರ್ಥಗಳ ಮೂಲಕ ಬರೆದು ಜನರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಮಹತ್ವದ ಸಂದೇಶವನ್ನು ಸಾರುವ ಮೂಲಕ ತಮಗಿರುವ ಜವಾಬ್ದಾರಿಯನ್ನು ಮೆರೆದಿರುವುದು ಜಾತ್ರೆಯಲ್ಲಿ ಆಕರ್ಷಕವೆನಿಸಿದೆ.

ಗವಿಮಠದಿಂದ ಪ್ರತಿ ವರ್ಷ ನಾನಾ ಸಾಮಾಜಿಕ ಜಾಗೃತಿ, ಪರಿವರ್ತನೆಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ವ್ಯಾಪಾರಿಗಳ ಮೇಲೂ ಪ್ರಭಾವ ಬೀರಿದಂತಿದೆ. ಜನರು ಮಾನವೀಯ ಮೌಲ್ಯ ಎತ್ತಿ ಹಿಡಿಯುವ ಸಂದೇಶ ಕಂಡು ತಾವೂ ಬದಲಾಗುತ್ತೇವೆ ಎನ್ನುವ ಶಪಥ ಮಾಡುತ್ತಿದ್ದಾರೆ.

ಜ್ಞಾನ ಪೀಠ ಪ್ರಶಸ್ತಿ ಪಡೆದ 8 ಜನ ಸಾಹಿತಿಗಳ ಭಾವಚಿತ್ರಗಳನ್ನು ಬಿಡಿಸುವ ಮೂಲಕ ಕನ್ನಡ ಸಾಹಿತ್ಯದ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳ ಈ ಹೊಸ ಪ್ರಯತ್ನ ಜಾತ್ರೆಯಲ್ಲಿ ಎಲ್ಲರನ್ನೂ ಮೆಚ್ಚುವಂತಿದೆ.

ಬಳೆ ಅಂಗಡಿಗಳು: ಜಾಗೃತಿ ಸಂದೇಶಗಳ ಜತೆ ಜಾತ್ರೆಯಲ್ಲಿ ಮಹಿಳೆಯರ ಬಳೆ ಅಂಗಡಿಗಳು ರಾರಾಜಿಸುತ್ತಿವೆ. ಬಳೆ ಅಂಗಡಿಗಳಿಗೆ ಪ್ರತ್ಯೇಕ ಮಳಿಗೆ ನಿರ್ಮಾಣ ಮಾಡಲಾಗಿದೆ. ಈ ಅಂಗಡಿಗಳಲ್ಲೂ ನಾನಾ ಬರಹಗಳ ಫಲಕ ನೇತು ಹಾಕಲಾಗಿದೆ. ಮಕ್ಕಳ ಆಟವಾಡಲು ಪ್ರತ್ಯೇಕವಾದ ಸ್ಥಳವಿದ್ದು, ಜೋಕಾಲಿ, ಮಕ್ಕಳ ಸಣ್ಣ ಬೋಟಿಂಗ್‌ ಕೂಡ ಬಂದಿದೆ.

ಪ್ರತಿ ವರ್ಷ ಸಿಹಿ ಪದಾರ್ಥದೊಂದಿಗೆ ಸಂದೇಶ ಬರೆಸಿ ಹಾಕುತ್ತೇವೆ. ಕಾರಣ ನಾವು ಗ್ರಾಹಕರನ್ನು ಸೆಳೆಯುವುದಕ್ಕಾಗಿ ಅಲ್ಲ. ಈ ಮೂಲಕ ಜನರಲ್ಲಿ ಜನ ಜಾಗೃತಿ ಮೂಡಿಸುವ ಉದ್ದೇಶವಾಗಿದೆ. ಸುಮಾರು 20 ವರ್ಷಗಳಿಂದ ಅಂಗಡಿ ಹಾಕುತ್ತಿದ್ದೇವೆ. ಪ್ರತಿವರ್ಷ ಹೊಸ ಜಾಗೃತಿ ಸಂದೇಶ ಬರೆಯಿಸಿರುತ್ತೇವೆ.
ವಜೀರ ಹಂಚಿನಾಳ, ಮಿಠಾಯಿ ಅಂಗಡಿ ಮಾಲಿಕ

ಶ್ರೀಗವಿಸಿದ್ಧೇಶ್ವರ ಜಾತ್ರೆ ಒಂದಿಲ್ಲೊಂದು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಈ ಮೂಲಕ ಜಾತ್ರೆ ಜನರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ಕೇವಲ ಧಾರ್ಮಿಕ ಆಚರಣೆಯಾಗದೆ ಸಾಮಾಜಿಕ ಪ್ರಜ್ಞೆ ಸಾಂಸ್ಕೃತಿಕ ಮೆರಗನ್ನು ಮೈಗೂಡಿಸಿಕೊಂಡಿದೆ. ಹೀಗಾಗಿ ಜಾತ್ರೆಯ ಖ್ಯಾತಿ ಎಲ್ಲಡೆ ಪಸರಿಸಿ, ಎಲ್ಲರಿಗೂ ಅಚ್ಚುಮೆಚ್ಚು ಎನಿಸಿದೆ.
ಶರಣು ಅಳ್ಳೊಳ್ಳಿ, ಕಟಗಿಹಳ್ಳಿ ಯುವಕ

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.