ಭ್ರಷ್ಟಾಚಾರ ತಡೆಗೆ ಜಾಗೃತಿ ಸಪ್ತಾಹ


Team Udayavani, Oct 28, 2020, 3:34 PM IST

gb-tdy-2

ಕಲಬುರಗಿ: ಸಾರ್ವಜನಿಕರು ಭೃಷ್ಟ ಅಧಿಕಾರಿಗಳ ವಿರುದ್ಧ ನೀಡುವ ಮಾಹಿತಿ ಸೋರಿಕೆ ತಡೆಗಟ್ಟುವ ಹಾಗೂ ಭ್ರಷ್ಟಾಚಾರ ನಿಗ್ರಹ ದಳ ಬಲಪಡಿಸಲು ದಳದಲ್ಲಿನಬಹುತೇಕ ಪೊಲೀಸ್‌ ಸಿಬ್ಬಂದಿ ಬದಲಾವಣೆಗೆ ತುರ್ತಾಗಿ ಕ್ರಮ ಕೈಗೊಳ್ಳುವುದಾಗಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಯ ಪೊಲೀಸ್‌ ವರಿಷ್ಠಾಧಿ ಕಾರಿಮಹೇಶ್‌ ಮೇಘಣ್ಣನವರ್‌ ತಿಳಿಸಿದರು.

ನಗರದ ಐವಾನ್‌-ಇ-ಶಾಹಿ ಅತಿಥಿ ಗೃಹದಲ್ಲಿ ಮಂಗಳವಾರ ಪ್ರತಿಜ್ಞಾ ವಿ ಧಿ ಸ್ವೀಕರಿಸಿ ನಂತರ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅ.27ರಿಂದ ನವೆಂಬರ್‌ 5ವರೆಗೆ ಹಮ್ಮಿಕೊಳ್ಳಲಾದ ಅರಿವು ಸಪ್ತಾಹ-2020 ಕಾರ್ಯಕ್ರಮ ಕುರಿತು ವಿವರಿಸಲು ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಸಾರ್ವಜನಿಕರು ಭೃಷ್ಟಾಚಾರ ಅಧಿಕಾರಿಗಳಿಂದ ಬೇಸತ್ತು ಕೊನೆಗೆ ತಮ್ಮ (ಎಸಿಬಿ) ಬಳಿ ಬರುತ್ತಾರೆ. ಆದರೆ ಕೆಲ ಸಿಬ್ಬಂದಿಯಿಂದ ದಳಕ್ಕೆ ಬಂದಿರುವ ದೂರುಗಳ ಹಾಗೂ ಇತರೆ ಮಾಹಿತಿ ಸೋರಿಕೆ ಎಂಬುದು ಮಾಧ್ಯಮಗಳಿಂದ ಗೊತ್ತಾಗುತ್ತಿದೆ. ಹೀಗಾಗಿ ಶೀಘ್ರವೇ ಸಿಬ್ಬಂದಿ ಬದಲಾವಣೆಗೆ ಮುಂದಾಗಲಾಗುವುದು. ಪ್ರಮುಖವಾಗಿ ನಿಗ್ರಹ ದಳ ಬಲಪಡಿಸಲಾಗುವುದು ಎಂದು ಎಸ್‌ಪಿ ಪ್ರಕಟಿಸಿದರು.

2020ರಲ್ಲಿ 09 ಭ್ರಷ್ಟಾಚಾರ ಕೇಸ್‌ಗಳನ್ನು ಟ್ರ್ಯಾಪ್‌ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಪ್ರವೃತ್ತವಾಗುವುದಾಗಿ ತಿಳಿಸಿದ ಅವರು, ಅಧಿಕಾರಿಗಳು ಲಂಚ ಪಡೆಯುತ್ತಿರುವುದಕ್ಕೆ ಪೂರಕ ದಾಖಲಾತಿ ಸಂಗ್ರಹಿಸಿ ಮಾಹಿತಿ ನೀಡಿದರೆ, ದಾಳಿಯಂತಹ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಇಂದಿನಿಂದ ಸಪ್ತಾಹ: ನ.28ರಂದು ಕಲಬುರಗಿ ತಾಲೂಕು ತಹಶೀಲ್ದಾರ್‌ ಕಚೇರಿ ಮತ್ತು ಜಿಲ್ಲಾ ಧಿಕಾರಿಗಳ ಕಚೇರಿ, ನ.29ರಂದು ಕಮಲಾಪುರ ತಾಪಂ ಕಚೇರಿ ಮತ್ತು ಜೇವರ್ಗಿ ತಾಪಂ ಕಚೇರಿ, ನ.2ರಂದು ಚಿತ್ತಾಪುರ ತಾಪಂ ಕಚೇರಿ ಮತ್ತು ಆಳಂದ ತಾಪಂ ಕಚೇರಿಯಲ್ಲಿ  ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ನ.3ರಂದು ಕಲಬುರಗಿ ಎಸಿಬಿ ಪೊಲೀಸ್‌ ಠಾಣೆ ಸಿಬ್ಬಂದಿಗಾಗಿ ತಿಳಿವಳಿಕೆ ರಸಪ್ರಶ್ನೆ ಸ್ಪರ್ಧೆ, ನ.4ರಂದು ಕಮಲಾಪುರ ಪಂಚಾಯತ್‌ ಕಚೇರಿಯಲ್ಲಿ ಸಾರ್ವಜನಿಕರಿಗೆ ತಿಳಿವಳಿಕೆ ಕಾರ್ಯಕ್ರಮ ಹಾಗೂ ನ.5ರಂದು ಕಲಬುರಗಿ ರೈಲ್ವೆ ಸ್ಟೇಷನ್‌ ಕೇಂದ್ರ ಬಸ್‌ ನಿಲ್ದಾಣ, ಶರಣಬಸವೇಶ್ವರ ಗುಡಿ, ಖಾಜಾ ಬಂದೇನವಾಜ್‌ ದರ್ಗಾ, ಮಹಾನಗರ ಪಾಲಿಕೆ ಕಚೇರಿಗಳಲ್ಲಿ ಕರಪತ್ರ ಹಂಚಿಕೆ ಮತ್ತು ಅಂಟಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಡಿಎಸ್‌ಪಿ ವಿರೇಶ್‌ ಕರಡಿಗುಡ್ಡ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜಾಥಾ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಈ ವರ್ಷ ಕೋವಿಡ್‌-19ಹಿನ್ನೆಲೆಯಲ್ಲಿ ಯಾವುದೇ ಜಾಥಾ ಮತ್ತು ಪ್ರಬಂಧ  ಸ್ಪರ್ಧೆ ಆಯೋಜಿಸಿರುವುದಿಲ್ಲ. ಬದಲಾಗಿ ಆಯಾ ತಾಲೂಕಿನಲ್ಲಿನ ಜನನಿಬಿಡ ಪ್ರದೇಶದಲ್ಲಿ ಅ ಧಿಕಾರಿಗಳು ಭೇಟಿ ನೀಡಿ ಭ್ರಷ್ಟಾಚಾರದ ನಿರ್ಮೂಲನೆ ಕುರಿತು ಅರಿವು ಮೂಡಿಸುವ ಕೆಲಸ ಮಾಡಲಿದ್ದಾರೆ ಎಂದರು.

ಭ್ರಷ್ಟಾಚಾರ ನಿರ್ಮೂಲನೆ ನಿಟ್ಟಿನಲ್ಲಿ ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲಾ ಪಾಲುದಾರರು ಸೇರಿ ಕೆಲಸ ಮಾಡಿದಾಗ ಮಾತ್ರ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದು. ಭ್ರಷ್ಟಾಚಾರಕ್ಕೆ ಸಹಕಾರ ನೀಡುವುದು ಸಹ ಅಪರಾಧ. ಇದನ್ನೆಲ್ಲ ಸಾರ್ವಜನಿಕರು ಅರಿತುಕೊಳ್ಳುವುದು ಮುಖ್ಯವಾಗಿದೆ. ಮಹೇಶ್‌ ಮೇಘಣ್ಣನವರ್‌, ಎಸ್ಪಿ , ಭ್ರಷ್ಟಾಚಾರ ನಿಗ್ರಹ ದಳ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.