ಕಲ್ಲಂಗಡಿ ಹಣ್ಣು ಮಾರಲಾಗದೆ ರೈತನ ಆತ್ಮಹತ್ಯೆ: ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವರು
Team Udayavani, Apr 7, 2020, 6:02 PM IST
ಕಲಬುರಗಿ: ಕೋವಿಡ್-19 ಸೋಂಕಿನ ಹಿನ್ನಲೆ ಲಾಕ್ ಡೌನ್ ಆದ ಪರಿಣಾಮ ಬೆಳೆದ ಕಲ್ಲಂಗಡಿಯನ್ನು ಮಾರಾಟಕ್ಕೆ ಸಾಗಾಣಿಕೆ ಮಾಡಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಾಣದ ರೈತ ಚಂದ್ರಕಾಂತ ನಾಗೀಂದ್ರಪ್ಪ ಬಿರಾದರ ಅವರ ಕುಟುಂಬಕ್ಕೆ ಮಂಗಳವಾರ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ವಿತರಿಸಿದರು.
ಸಚಿವರು ಜಿಲ್ಲೆಯ ಆಳಂದ ತಾಲೂಕಿನ ಲಾಡ್ ಚಿಂಚೋಳಿ ಗ್ರಾಮದ ಮೃತ ರೈತ ಚಂದ್ರಕಾಂತ ನಾಗೀಂದ್ರಪ್ಪ ಬಿರಾದರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದಲ್ಲದೆ ಚೆಕ್ ವಿತರಿಸಿದರು.
ಸರ್ಕಾರದ ವತಿಯಿಂದ 5 ಲಕ್ಷ ರೂ, ಸಾಮಾಜಿಕ ಭದ್ರ ತೆ ಯೋಜನೆ ಅಡಿ 20 ಸಾವಿರ, ಶವ ಸಂಸ್ಕಾರ ದ ಖರ್ಚು 5 ಸಾವಿರ ಮತ್ತು ವಿಧವಾ ವೇತನದ 2 ಸಾವಿರ ಸೇರಿ 5. 27 ಲಕ್ಷ ರೂ ಮೊತ್ತದ ಚೆಕ್ ಮೃತ ರೈತನ ಪತ್ನಿಗೆ ವಿತರಿಸಿದರು.
ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ತರಕಾರಿ ಹಾಗೂ ಹಣ್ಣು ಹಂಪಲುಗಳ ಸರಬರಾಜು ಮತ್ತು ಮಾರಾಟಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು. ಮೃತ ರೈತನಿಗೆ ಸೇರಿದ 8.13 ಎಕರೆ ಪ್ರದೇಶದ ಪೈಕಿ 1.31 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದ. ಪತ್ನಿ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ರೈತ ಅಗಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್