ಹಿಂದುಳಿದ ಜಾತಿ ಒಗ್ಗಟ್ಟು ಅಗತ್ಯ: ರಾಮಚಂದ್ರಪ್ಪ
Team Udayavani, Jul 14, 2022, 2:50 PM IST
ಕಲಬುರಗಿ: ರಾಜ್ಯದಲ್ಲಿ ಜಾತಿ, ವರ್ಗ ಸಂಘರ್ಷ ತಪ್ಪಿದ್ದಲ್ಲ. ಆದರೆ, ಹಿಂದುಳಿದ ವರ್ಗಗಳು ಒಗ್ಗಟ್ಟಿನಿಂದ ನಡೆದಾಗ ಮಾತ್ರವೇ ನಾವು ವಂಚಿತ ಹಕ್ಕಿನ ಲಾಭ ಪಡೆಯಬಹುದು ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹೇಳಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆದ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತವಾಗಿ ಹಮ್ಮಿಕೊಂಡಿದ್ದ ಅಮೃತಮಹೋತ್ಸವ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಹಿತಚಿಂತಕ ಸಿದ್ದರಾಮಯ್ಯ. ಈ ಹಿಂದೆ ಅಹಿಂದ ಕಟ್ಟಿದ್ದು ಅವರೇ. ಅಂತಹ ವ್ಯಕ್ತಿಯ ಅಮೃತ ಮಹೋತ್ಸವದಲ್ಲಿ ನಾವೆಲ್ಲರೂ ಖಂಡಿತವಾಗಿ ಭಾಗಿಯಾಗಬೇಕು. ಅವರು ಅಧಿಕಾರದಲ್ಲಿದ್ದಾಗ ಹಿಂದುಳಿದ ಜಾತಿಗಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುವುದರ ಮೂಲಕ ಅವಿಸ್ಮರಣೀಯ ಕಾರ್ಯ ಮಾಡಿದ್ದಾರೆ. ದೊಡ್ಡಮಟ್ಟದಲ್ಲಿ ನಾವು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಒಕ್ಕೂಟದ ಜಿಲ್ಲಾ ಮುಖಂಡ ಲಚ್ಚಪ್ಪ ಜಮಾದಾರ ಮಾತನಾಡಿ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಅಸ್ಮಿತೆ. ಅವರು ತಮ್ಮ ಸರಕಾರದ ಅವಧಿಯಲ್ಲಿ ಅನ್ನಭಾಗ್ಯ, ಶಿಕ್ಷಣ ಭಾಗ್ಯ ಹಲವು ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯದ ಹಿಂದುಳಿದ ವರ್ಗವನ್ನು ಸಶಕ್ತ ಮಾಡಿದ್ದಾರೆ. ಆದರೆ, ಈಗ ಪರಿಸ್ಥಿತಿ ಭಿನ್ನವಾಗಿದೆ. ನಮ್ಮ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಹಕ್ಕು ಮೊಟಕುಗೊಳ್ಳುತ್ತಿದೆ. ಶಿಷ್ಯವೇತನ, ಬಸ್ ಪಾಸಿಗಾಗಿ ಪರದಾಡುವಂತಹ ಪರಿಸ್ಥಿತಿ ಇದೆ. ದಿ. ದೇವರಾಜು ಅರಸು ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಬಯಸಿದ್ದು ಸಿದ್ದರಾಮಯ್ಯ ಅವರು. ಅವರಿಲ್ಲದೆ ಹೋದರೆ ಹಿಂದುಳಿದ ವರ್ಗವನ್ನು ಊಹಿಸಿಕೊಳ್ಳುವುದು ಕೂಡ ಅಸಾಧ್ಯ ಎಂದರು.
ಮಹಾಂತೇಶ ಕೌಲಗಿ, ಬಸವರಾಜ್ ಬೂದಿಹಾಳ್, ವಾಣಿಶ್ರೀ ಸಗರಕರ್, ಬೈಲಪ್ಪ ನೆಲೋಗಿ ಮಾತನಾಡಿದರು. ಸಮಾರಂಭದಲ್ಲಿ ಗೋವಿಂದ ಯಾದವ್, ಡಾ| ವಿಠಲ್ ದೊಡ್ಡಮನಿ, ಹಣಮಂತರಾವ ಹೂಗಾರ, ಮಲ್ಲಿಕಾರ್ಜುನ ಪೂಜಾರಿ ಹಾಗೂ ವಿವಿಧ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ