ಮದ್ಯ ನಿಷೇಧಿಸಿ,ಮಹಿಳೆಯರಿಂದ ಹಣ ಕೊಡಿಸುವೆ: ಮೇಧಾ ಪಾಟ್ಕರ್‌ ​​​​​​​


Team Udayavani, Feb 12, 2017, 3:45 AM IST

11ald4.jpg

ಆಳಂದ: ಕರ್ನಾಟಕಕ್ಕೆ 16 ಸಾವಿರ ಕೋಟಿ ರೂ. ಆದಾಯ ತಂದು ಕೊಡುವ ಮದ್ಯವನ್ನು ನಿಷೇಧಿಸಲು ಸಾಧ್ಯವಾಗದೆಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಸರ್ಕಾರ ಮದ್ಯ ನಿಷೇಧಿಸಿದರೆ ಅಷ್ಟೂ ಮೊತ್ತವನ್ನು ಮಹಿಳೆಯರಿಂದ ಸಂಗ್ರಹಿಸಿಕೊಡುತ್ತೇವೆ ಎಂದು ಪರಿಸರವಾದಿ, ನಶಾಮುಕ್ತ ಭಾರತ ಆಂದೋಲನ ಅಧ್ಯಕ್ಷೆ ಮೇಧಾ ಪಾಟ್ಕರ್‌ ಆಗ್ರಹಿಸಿದರು.

ಪಟ್ಟಣದ ಬಾಲಕರ ಜೂನಿಯರ್‌ ಕಾಲೇಜು ಆವರಣದಲ್ಲಿ ಮಹಿಳಾ ಜನ ಜಾಗೃತಿ ಆಂದೋಲನ ಸಮಿತಿ ಆಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್‌ ಸ್ತ್ರೀ ಶಕ್ತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಮದ್ಯ ಮಾರಾಟದಿಂದ ಬರುವ ಆದಾಯದ ಕಡೆಗೆ ನೋಡುವ ಮುಖ್ಯಮಂತ್ರಿಗಳಿಗೆ ಮದ್ಯಪಾನದಿಂದ ಜನರು ಮನೆ, ಮಠ ಕಳೆದುಕೊಂಡು ಬೀದಿಪಾಲಾಗುತ್ತಿರುವುದು ಕಾಣುತ್ತಿಲ್ಲ. ಸರ್ಕಾರ ಮದ್ಯ ನಿಷೇಧಿಸಿದರೆ ಅದಕ್ಕೆ ಪರ್ಯಾಯವಾಗಿ 16 ಸಾವಿರ ಕೋಟಿ ರೂ.ಗಳನ್ನು ಮಹಿಳೆಯರಿಂದಲೇ ಸಂಗ್ರಹಿಸಿಕೊಡುತ್ತೇವೆಂದು ಸವಾಲು ಹಾಕಿದರು.

ಕೆಲ ರಾಜ್ಯಗಳಲ್ಲಿ ಮದ್ಯ ನಿಷೇಧವಿದ್ದರೂ ಎಸ್‌ಎಂಎಸ್‌ ಮೂಲಕ ಮನೆ ಬಾಗಿಲಿಗೆ ಮದ್ಯ ಬರುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಬಸವಣ್ಣ, ಅಕ್ಕಮಹಾದೇವಿ ಜನಿಸಿದ ನಾಡಿನಲ್ಲಿ ಮದ್ಯ ಮಾರಾಟ ಬೇಡ. ಮದ್ಯಮುಕ್ತ ಸಮಾಜಕ್ಕೆ ಕರ್ನಾಟಕದಿಂದಲೇ ಆಂದೋಲನ ಆರಂಭವಾಗಿ ದೇಶವ್ಯಾಪಿಗೊಳಿಸಿ ಪರಿವರ್ತನೆಗೆ ನಾಂದಿ ಹಾಡಲು ಮುಂದಾಗಬೇಕೆಂದು ಮಹಿಳಾ ಸಮುದಾಯಕ್ಕೆ ಕರೆ ನೀಡಿದರು.

ಈ ಭಾಗದಲ್ಲಿ ಶಾಸಕ ಬಿ.ಆರ್‌ ಪಾಟೀಲರು ಕೈಗೊಳ್ಳುತ್ತಿರುವ ಜನಪರ ಆಂದೋಲನಗಳಿಗೆ ಮಹಿಳೆಯರು ಸಾತ್‌ ನೀಡಬೇಕು. ಅದಕ್ಕೆ ಪ್ರತಿಯಾಗಿ ಶಾಸಕರು ಮಹಿಳೆಯರ ಪರ ಧ್ವನಿಯಾಗಿ ನಿಂತುಕೊಳ್ಳಲಿದ್ದಾರೆ ಎಂದು ಹೇಳಿದ ಮೇಧಾ, ನಿಂಬಾಳ ಗ್ರಾಮದಲ್ಲಿ ಮದ್ಯ ಮುಕ್ತ ಮಾಡಲು ಮುಂದಾಗಿದ್ದ ಮಹಿಳೆಯರನ್ನು ವೇದಿಕೆಗೆ ಆಹ್ವಾನಿಸಿ ಮೆಚ್ಚುಗೆ ವ್ಯಕ್ತಪಡಿಸಿ ಬೆಂಬಲಿಸಿದರು.

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.