ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ


Team Udayavani, Oct 19, 2021, 10:30 AM IST

4

ವಾಡಿ: ಪಟ್ಟಣದಲ್ಲಿ ಸೋಮವಾರ ಈದ್‌ ಮಿಲಾದ್‌ ಹಬ್ಬದ ಸಾಂಪ್ರದಾಯಿಕ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದಿರುವುದು ಮುಸ್ಲಿಂ ಯುವಕರ ಆಕ್ರೋಶಕ್ಕೆ ಕಾರಣವಾಯಿತು.

ಸ್ಥಳೀಯ ಜಾಮಿಯಾ ಮಸೀದಿಯಿಂದ ಹೊರಡಬೇಕಿದ್ದ ಇಸ್ಲಾಂ ಧಾರ್ಮಿಕ ಸ್ತಬ್ಧಚಿತ್ರಗಳ ಮೆರವಣಿಗೆಗೆ ಅಡ್ಡಲಾಗಿ ಬ್ಯಾರಿಕೇಡ್‌ ಅಳವಡಿಸಿ ರ್ಯಾಲಿ ಸಾಗದಂತೆ ನೋಡಿಕೊಂಡ ಪೊಲೀಸರ ನಡೆ ಪ್ರಶ್ನಿಸಿದ ಕೆಲವರು ವಾಗ್ವಾದ ನಡೆಸಿದರು.

ಪ್ರತಿವರ್ಷದಂತೆ ವಿವಿಧ ಬಡಾವಣೆಗಳಿಂದ ಜಾಮಿಯಾ ಮಸೀದಿ ವರೆಗೆ ತಳ್ಳುಗಾಡಿಯಲ್ಲಿ ಹಲವು ಸ್ತಬ್ಧಚಿತ್ರಗಳನ್ನು ತಂದಿದ್ದ ಮುಸ್ಲಿಂ ಯುವಕರ ಗುಂಪುಗಳು, ಅವುಗಳನ್ನು ಒಂದೆಡೆ ಸಾಲಾಗಿ ನಿಲ್ಲಿಸಿ ಮೆರವಣಿಗೆ ಹೊರಡಲು ಅಣಿಯಾಗಿದ್ದರು. ಮಧ್ಯೆ ಪ್ರವೇಶಿಸಿದ ಪಿಎಸ್‌ಐ ವಿಜಯಕುಮಾರ ಭಾವಗಿ, ಸರ್ಕಾರದ ಕೋವಿಡ್‌ ಮಾರ್ಗಸೂಚಿಗಳನ್ವಯ ಈದ್‌ ಮೆರವಣಿಗೆಗೆ ಅವಕಾಶ ನೀಡಲಾಗಿಲ್ಲ. ದಯವಿಟ್ಟು ಯಾರೂ ಮೆರವಣಿಗೆ ಹೊರಡುವ ಪ್ರಯತ್ನ ಮಾಡಬಾರದು. ವಾಪಸ್‌ ಹೋಗಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಯಾವುದೇ ಗದ್ದಲ, ಗಲಾಟೆ ಮಾಡದೆ ಶಾಂತಿಯುತ ಮೆರವಣಿಗೆ ಹೊರಡುತ್ತೇವೆ ಅವಕಾಶ ನೀಡಬೇಕು ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದರು. ಇದನ್ನು ನಿರಾಕರಿಸಿದ ಪಿಎಸ್‌ಐ ಭಾವಗಿ, ಸರ್ಕಾರ ಹೊರಡಿಸಿರುವ ಕಾನೂನು ಪಾಲಿಸುವುದು ನಮ್ಮ ಕರ್ತವ್ಯ. ಆದೇಶ ಉಲ್ಲಂಘಿ ಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಇತರ ಧಾರ್ಮಿಕ, ರಾಜಕೀಯ ಸಭೆ ಮೆರವಣಿಗೆಗೆ ಅವಕಾಶ ನೀಡುತ್ತೀರಿ. ನಮ್ಮ ಹಬ್ಬದ ಮೆರವಣಿಗೆಯನ್ನೇಕೆ ತಡೆಯುತ್ತೀರಿ? ಅವರಿಗೊಂದು ಕಾನೂನು ನಮಗೊಂದು ಕಾನೂನಾ ಎಂದು ಕೆಲ ಯುವಕರು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯರು ಕಿರಿಯರನ್ನು ಸಮಾಧಾನಪಡಿಸಿ ಮೆರವಣಿಗೆ ರದ್ದುಗೊಳಿಸಿದರು. ಮೆಕ್ಕಾ, ಮದೀನಾ ಸೇರಿದಂತೆ ಖುರಾನ್‌, ಚಾಂದ್‌, ಮಿನಾರ್‌ ಪ್ರತಿಕೃತಿಗಳನ್ನು ಮೆರವಣಿಗೆಗೆಂದು ಸಿದ್ಧಪಡಿಸಿ ತಂದವರು ವಾಪಸ್‌ ಬಡಾವಣೆಗೆ ಸಾಗಿಸಿದರು. ಜಾಮಿಯಾ ಮಸೀದಿ ಮುಂದೆ ಜಮಾಯಿಸಿದ್ದ ಯುವಕರು ಧರ್ಮದ ನೂರಾರು ಧ್ವಜಗಳನ್ನು ಪ್ರದರ್ಶಿಸಿದರು. ಇದೇ ವೇಳೆ ಅತಿಥಿಗಳಾಗಿ ಆಗಮಿಸಿದ್ದ ಅನ್ಯಕೋಮಿನ ಮುಖಂಡರನ್ನು ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.