ಬಸವಣ್ಣನ ವಿಚಾರ ಇಂದಿಗೂ ಪ್ರೇರಣೆ


Team Udayavani, Apr 20, 2018, 4:02 PM IST

gul-3.jpg

ಆಳಂದ: ಪಾಪ-ಪುಣ್ಯ, ಸ್ವರ್ಗ-ನರಕಗಳಂತಹ ಕರ್ಮ ಸಿದ್ಧಾಂತದ ವಿಚಾರಗಳನ್ನು ಬಲವಾಗಿ ಖಂಡಿಸಿದ ಬಸವಾದಿ ಶರಣರು ಮುಗ್ಧರ ಸ್ವಾತಂತ್ರ್ಯಕ್ಕೆ ಶ್ರಮಿಸಿದರು. ಬಸವಣ್ಣನವರು ಅಸ್ಪೃಶ್ಯತೆ ನಿವಾರಣೆಗಾಗಿ, ಪ್ರಜಾಪ್ರಭುತ್ವ ತತ್ವಕ್ಕಾಗಿ ಹೋರಾಡಿದ ವಿಚಾರಗಳು ಇಂದಿಗೂ ನಮಗೆ ಪ್ರೇರಣೆಯಾಗಿವೆ ಎಂದು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲೂಕಿನ ಕಡಗಂಚಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಸೌಧದಲ್ಲಿ ನಡೆದ ಮಹಾನ್‌ ಮಾನವತಾವಾದಿ ಬಸವಣ್ಣನವರ 885ನೇ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ನಿತ್ಯ ಸತ್ಯವಾದ ಮತ್ತು ವಿಶ್ವಮಾನ್ಯವಾದ ತತ್ವಗಳನ್ನು ಬಸವಣ್ಣನವರು ಜಗತ್ತಿಗೆ ನೀಡಿದ್ದಾರೆ ಎಂದು ಹೇಳಿದರು.
 
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಪ್ರಜಾಸತ್ತಾತ್ಮಕತೆ ಮೂರ್ತ ರೂಪದಂತಿತ್ತು. ಜಾತಿ, ಲಿಂಗ ಭೇದವಿಲ್ಲದೆ ಎಲ್ಲರ ಅಭಿವ್ಯಕ್ತಿಗೆ ಆಶ್ರಯ ಒದಗಿಸಿದ್ದ ತಾಣ ಅದಾಗಿತ್ತು ಎಂದು ಹೇಳಿದರು. ಗಾಂಧೀಜಿ 1924ರಲ್ಲಿ ಬೆಳಗಾವಿ ಅ ಧಿವೇಶನಕ್ಕೆ ಬಂದಾಗ ಬಸವಣ್ಣನವರ ಕುರಿತ ಪುಸ್ತಕ ಓದಿ ಬಸವಣ್ಣನವರು ಸಿದ್ಧ ಪುರುಷರು, ಅವರ ತತ್ವಗಳನ್ನು ನಾವು ಸರಿಯಾಗಿ ಪ್ರಸರಿಸಿದ್ದೇ ಆದಲ್ಲಿ, ಜಗತ್ತಿಗೆ ಮಾದರಿಯಾಗುತ್ತೇವೆ ಎಂದು ಅಭಿಪ್ರಾಯಪಟ್ಟಿದ್ದ ಪ್ರಸಂಗವನ್ನು ಅವರು ಸ್ಮರಿಸಿದರು.
 
ದೇಶದೆಲ್ಲೆಡೆಯಿಂದ ಕಲ್ಯಾಣಕ್ಕೆ ಬಂದ ಶರಣರು ಕನ್ನಡದಲ್ಲಿಯೇ ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದರು ಎಂದು ಅಭಿಪ್ರಾಯಪಟ್ಟರು.

ಅತಿಥಿಗಳಾಗಿದ್ದ ವಿಶ್ವವಿದ್ಯಾಲಯದ ಸಮಕುಲಪತಿ ಪ್ರೊ| ಜಿ.ಆರ್‌. ನಾಯಕ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ನೀಡಿದಂತಹ ಮಾನವೀಯ ತತ್ವಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದದ್ದು ವರ್ತಮಾನದ ಅಗತ್ಯವಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಎಚ್‌.ಎಂ. ಮಹೇಶ್ವರಯ್ಯ ಮಾತನಾಡಿ, ಶರಣರ ವಚನಗಳು ಜೀವ ಚೈತನ್ಯ ಕೊಡುವ ಆಕರಗಳಾಗಿವೆ. ಅಕ್ಕಮಹಾದೇವಿಯ ಜನ್ಮಸ್ಥಳವಾದ ಉಡುತಡಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ಅಧ್ಯಯನ ಕೇಂದ್ರ ಸ್ಥಾಪಿಸಬೇಕಾದ ಅವಶ್ಯಕತೆ ಇದೆ. ಅದಕ್ಕಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದೊಂದಿಗೆ ಕಾರ್ಯನಿರ್ವಹಿಸಲು ಸಿದ್ಧವಿದೆ ಎಂದು ಅವರು ಹೇಳಿದರು. ಡಾ| ಅಜೀಮ್‌ ಪಾಶಾ, ಪ್ರಾಧ್ಯಾಪಕ ಡಾ| ರಾಜೀವ ಜೋಶಿ, ಜಿಲ್ಲಾ ಬಸವ ಸಮಿತಿ ಅಧ್ಯಕ್ಷೆ ಡಾ| ವಿಲಾಸವತಿ ಖೂಬಾ, ಎಸ್‌.ಎಸ್‌. ಪಾಟೀಲ ಕಡಗಂಚಿ, ಗುಲಬರ್ಗಾ ವಿಶ್ವವಿದ್ಯಾಲಯದ ನಿವೃತ ಪ್ರಾಧ್ಯಾಪಕ ವೀರಣ್ಣ ದಂಡೆ ಆತಿಥಿಗಳಾಗಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.