ನಾಳೆ ಐತಿಹಾಸಿಕ ಕೊತ್ತಲ ಬಸವೇಶ್ವರ ರಥೋತ್ಸವ
Team Udayavani, Apr 30, 2019, 12:17 PM IST
ಸೇಡಂ: ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ಪ್ರಸಿದ್ಧ ಮತ್ತು ಐತಿಹಾಸಿಕ ಹಿನ್ನೆಲೆಯುಳ್ಳ ಕೊತ್ತಲ ಬಸವೇಶ್ವರ ಜಾತ್ರಾ ಮಹೋತ್ಸವ ಈಗಾಗಲೇ ಆರಂಭವಾಗಿದ್ದು, ಮೇ 1ರಂದು ರಥೋತ್ಸವ ಜರುಗಲಿದೆ.
ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಅಂದು ಬೆಳಗ್ಗೆ 8:05ಕ್ಕೆ ಅಗ್ನಿ ಪ್ರವೇಶ, ಸಂಜೆ 5:45ಕ್ಕೆ ರಥೋತ್ಸವ ಜರುಗಲಿದೆ. ಮೇ 1,2,3ರಂದು ರಾತ್ರಿ 10ಕ್ಕೆ ಮೂರು ದಿನಗಳ ಕಾಲ ಸಪ್ಪಣ್ಣಾರ್ಯರ ಜೀವನ ಚರಿತ್ರೆಯ ಸದ್ಭಾವನಾ ಮೂರ್ತಿ ಸಪ್ಪಣಾರ್ಯರು ನಾಟಕ ಪ್ರದರ್ಶನಗೊಳ್ಳಲಿದೆ. ಭಕ್ತರಿಗೆ ವಿಶೇಷವಾಗಿ ದಾಸೋಹ ವ್ಯವಸ್ಥೆ ಏರ್ಪಡಿಸಲಾಗಿದೆ.
ಏ.27ರಿಂದ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಮೇ 7ರ ವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಮಿಕ ವರ್ಗದಲ್ಲಿ ದುಡಿದು ಸಾಧನೆಗೈದ ಶಿವಶರಣಪ್ಪ ಕಲ್ಯಾಣಿ, ಶಿವಪುತ್ರಪ್ಪ ಪೂಜಾರಿ, ಸುಭಾಷ ಮಿಟ್ಟಿ, ದೇವಣ್ಣ ಮುನ್ನೂರ, ತಿಪ್ಪಣ್ಣ ಇದಲಾಯಿ, ಬಸವರಾಜ ಕೊಳ್ಳಿ, ಕಮಲಾಬಾಯಿ, ಕಾಶಮ್ಮ ಇಂಜಳ್ಳಿ, ನಾಗಮ್ಮ ಉಡಗಿ, ಶಿವರಾಯ ಮೈಲ್ವಾರ, ಪಾರ್ವತಮ್ಮ ಒಟ್ಟು 11 ಜನರಿಗೆ ಕಾರ್ಮಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಶಿವಶಂಕರ ಮಠದ ಪೂಜ್ಯ ಷ.ಬ್ರ ಶಿವಶಂಕರ ಶಿವಾಚಾರ್ಯರು, ಮಹಾಂತೇಶ್ವರ ಮಠದ ಡಾ| ತ್ರಿಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಬೆಳಗುಂಪಾ ಬ್ರಹ್ಮನ ಮಠದ ಅಭಿನವ ಚರಂತೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಹಾಲಪ್ಪಯ್ಯ ಮಠದ ಪಂಚಾಕ್ಷರಿ ಸ್ವಾಮಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ.
ಕೊತ್ತಲ ಬಸವೇಶ್ವರ ಸಂಸ್ಥಾನದ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭಾ ಮಾಜಿ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಮ್, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಒಳಗೊಂಡು ಅನೇಕರು ರಥೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ