ಅಂತರಂಗ-ಬಹಿರಂಗದಲ್ಲಿ ಸ್ವಚ್ಛವಾಗಿರಿ


Team Udayavani, Jan 30, 2019, 6:53 AM IST

gul-2.jpg

ಯಡ್ರಾಮಿ: ಮನುಷ್ಯ ಅಂತರಂಗದಲ್ಲಿ ಮತ್ತು ಬಹಿರಂಗದಲ್ಲಿಯೂ ಸ್ವಚ್ಛವಾಗಿ ನಡೆದರೆ ಕೂಡಲಸಂಗಮನ ಶರಣರ ಒಲುಮೆ ತಾನಾಗಿಯೇ ಆಗುತ್ತದೆ ಎಂದು ವಿಜಯಪುರ ಜ್ಞಾನ ಯೋಗಾಶ್ರಮದ ಪರಮಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ನುಡಿದರು.

ಪಟ್ಟಣದ ಮುರುಘೇಂದ್ರ ಶಿವಯೋಗಿ ವಿರಕ್ತಮಠದ ಆವರಣದಲ್ಲಿ ಸಿದ್ಧರಾಮ ಸ್ವಾಮೀಜಿಗಳ ಅಮೃತ ಮಹೋತ್ಸವ, ಸಿದ್ಧಲಿಂಗ ದೇವರ ಪಟ್ಟಾಧಿಕಾರ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಮನುಷ್ಯ ಸ್ವಚ್ಛವಾಗಿ ಬದುಕಬೇಕು. ಬದುಕಿನಲ್ಲಿ ಮನುಷ್ಯನಿಗೆ ತನ್ನ ಕೈ ಮತ್ತು ಕಣ್ಣುಗಳು ಹೊಲಸಾಗುವ ಪ್ರಸಂಗಗಳು ಬರುತ್ತವೆ. ಆದರೆ ಹೊಲಸು ಮಾಡಿಕೊಳ್ಳದೇ ಬದುಕುವುದೇ ನಿಜವಾದ ಜೀವನ. ವ್ಯಕ್ತಿ ತನ್ನ ಜೇಬಿನೊಳಗೆ ಕೈ ಹಾಕಿಕೊಂಡರೆ ಸ್ವಚ್ಛ, ಇದನ್ನು ಬಿಟ್ಟು ಬೇರೊಬ್ಬರ ಜೇಬಿನೊಳಗ ಕೈ ಹಾಕಿದರೆ ಹೊಲಸಾಗುತ್ತದೆ. ಒಳಗೆ ಮನಸ್ಸು ಸ್ವಚ್ಛವಾಗಿ, ಸಮೃದ್ಧಿಯಿಂದಿರಬೇಕು, ಹೊರಗೆ ಮಧುರ ಮಾತುಗಳ ಮೂಲಕ ಪ್ರಸನ್ನತೆಯಿಂದ ಇರುವರೋ ಅವರೆ ಶ್ರೇಷ್ಠರೆನಿಸಿಕೊಳ್ಳುತ್ತಾರೆ. ಈ ರೀತಿ ತಮ್ಮ 75 ವರ್ಷಗಳ ಜೀವನದಲ್ಲಿ ಸ್ವಚ್ಛ ಮತ್ತು ಸಮೃದ್ಧವಾಗಿ ಜೀವನ ನಡೆಸಿದವರೇ ಸಿದ್ಧರಾಮ ಮಹಾಸ್ವಾಮಿಗಳು ಎಂದು ಹೇಳಿದರು.

ಯಾವುದು ಸತ್ಯದಿಂದ, ಶಿವಮಯದಿಂದ ಮತ್ತು ಸುಂದರವಾಗಿ ಕೂಡಿರುವುದೋ ಅದೇ ಜಗತ್ತು. ಗುರುಗಳು ಧರ್ಮವನ್ನು ರಕ್ಷಿಸುವವರು, ಅನುಭವಿಸುವವರು ಮತ್ತು ಧರ್ಮಪ್ರಸಾರಕರು ಆಗಿರುತ್ತಾರೆ. ಸ್ವಚ್ಛವಾಗಿರುವುದೇ ಧರ್ಮ ಎನಿಸಿಕೊಳ್ಳುತ್ತದೆ. ಜಗತ್ತಿನ ಮನುಷ್ಯರನ್ನು ಸ್ವಚ್ಛವಾಗಿರುವಂತೆ ಮಾಡಿ ಇಡೀ ಜಗತ್ತು ಧರ್ಮಮಯ ಮಾಡುವುದಾಗಿದೆ.

ಹಿಂದೆ ಪ್ರತಿ ಊರುಗಳಲ್ಲಿ ಗುರುಗಳು ಮಠಗಳನ್ನು ಸ್ಥಾಪಿಸಿದರು. ಈ ದಿಶೆಯಲ್ಲಿ ಗುರುಗಳ ಅಮೃತ ಮಹೋತ್ಸವ ಮತ್ತು ನೂತನ ಗುರುಗಳ ಪಟ್ಟಾಧಿಕಾರ ಉತ್ಸವ ಮಾಡಿ, ಇಂಥ ಶ್ರೇಷ್ಠ ಗುರುಗಳ ಮಾರ್ಗದರ್ಶನದಲ್ಲಿ ತಾವೆಲ್ಲಾ ಬದುಕು ಸಾಗಿಸಿದರೆ ಮಠಗಳಿಂದ ಇನ್ನೂ ಹೆಚ್ಚಿನ ಸೇವೆ ಸಾಧ್ಯವಾಗುತ್ತದೆ ಎಂದರು.

ಸೊನ್ನ ದಾಸೋಹಮಠದ ಡಾ| ಶಿವಾನಂದ ಮಹಾಸ್ವಾಮೀಜಿ, ಸಿದ್ಧರಾಮ ಸ್ವಾಮೀಜಿ, ಕಡಕೋಳ ಮಡಿವಾಳೇಶ್ವರ ಮಠದ ಡಾ| ರುದ್ರಮುನಿ ಶಿವಾಚಾರ್ಯರು, ಶಹಾಪುರ ಫಕೀರೇಶ್ವರ ಮಠದ ಗುರುಪಾದ ಮಹಾಸ್ವಾಮೀಜಿ, ಮಸ್ಕಿ ಶ್ರೀಗಳು, ಹರ್ಷಾನಂದ ಸ್ವಾಮೀಜಿ, ಹಿರಿಯ ಸಾಹಿತಿ ಎಲ್‌.ಬಿ.ಕೆ ಆಲ್ದಾಳ, ಮಹಾಲಿಂಗಪ್ಪಗೌಡ್ರು, ಗುರುಸಿದ್ಧ ಸನ್ನಳ್ಳಿ, ರಾಜು ಸಾಹು ಡಗ್ಗಾ, ಬಸಲಿಂಗಪ್ಪ ಸಾಹು ಇದ್ದರು. ವಿಶ್ವನಾಥ ಪಾಟೀಲ ನಿರೂಪಿಸಿದರು, ಸಿದ್ಧಲಿಂಗ ದೇವರು ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.