ನಾಟಕಾಭಿನಯ ಶೈಕ್ಷಣಿಕ ಭಾಗವಾಗಲಿ


Team Udayavani, Dec 11, 2017, 10:28 AM IST

gul-1.jpg

ಕಲಬುರಗಿ: ಅಭಿನಯ ಕಲೆ ಜೀವನ ಕಲೆಗೆ ಬೇಕಾಗಿದೆ. ಅದು ಬದುಕಿನ ಸಮಸ್ಯೆಗಳನ್ನು ಎದುರಿಸುವ ಶಕ್ತಿ ನೀಡುತ್ತದೆ. ನಾಟಕಾಭಿನಯ ಶೈಕ್ಷಣಿಕ ಕ್ಷೇತ್ರದ ಭಾಗವಾಗಬೇಕು. ಪಠ್ಯಪುಸ್ತಕ ಹೊರತುಪಡಿಸಿ ಜ್ಞಾನ ಹೆಚ್ಚಿಸುವ ಪುಸ್ತಕ ಹಾಗೂ ಕಲೆ ಕಲಿಯಬೇಕು. ಅವಮಾನಗಳನ್ನು ಮೀರಿ ಗುರಿ ಮುಟ್ಟಲು ಯತ್ನಿಸಬೇಕು. ಗುರಿ ಮುಟ್ಟಿದಾಗ ಸನ್ಮಾನಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ಹಾಸ್ಯ ನಟ ರಂಗಭೂಮಿ ಕಲಾವಿದ ಮಂಡ್ಯ ರಮೇಶ ಹೇಳಿದರು.

ಎಕೆಆರ್‌ ದೇವಿ ವಿಜ್ಞಾನ ಪಿಯು ಕಾಲೇಜಿನಲ್ಲಿ ಸಮೃದ್ಧಿ ಫೌಂಡೇಷನ್‌ ವತಿಯಿಂದ ಹಮ್ಮಿಕೊಂಡಿದ್ದ ಆರೋಗ್ಯ ಸಮೃದ್ಧಿ ಶಿಬಿರ ಹಾಗೂ ಪ್ರತಿಭಾವಂತ ಮಕ್ಕಳಿಗೆ “ಕಲೆ ಸಮೃದ್ಧಿ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಎಲುಬು ಹಾಗೂ ಕೀಲು ತಜ್ಞ ಡಾ| ಆಲೋಕ ಸಿ. ಪಾಟೀಲ ರೇವೂರ ಮಾತನಾಡಿ, ಎಲ್ಲ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಶ್ರೇಷ್ಠ. ಯುವಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಆರೋಗ್ಯ ಸರಿಯಿದ್ದಾಗ ಮಾತ್ರ ಬದುಕಲ್ಲಿ ಯಶಸ್ಸು ಸಾಧ್ಯ. ವೈಯಕ್ತಿಕ ಆರೋಗ್ಯದೊಂದಿಗೆ ಸಾಮಾಜಿಕ ಆರೋಗ್ಯ ಕೂಡ ನಮ್ಮ ಜವಾಬ್ದಾರಿ ಎಂದರು.

ಆರೋಗ್ಯದ ಅರಿವು ಅಪಾರ ನೆರವು ವಿಷಯದ ಬಗ್ಗೆ ಎಂಆರ್‌ಎಂಸಿ ವೈದ್ಯಾಧಿಕಾರಿ ಡಾ| ಮನ್ನೇ ನಾಗರಾಜ ಮಾತನಾಡಿ, ಆರೋಗ್ಯ ಹಾಳಾದ ನಂತರ ಅರಿವಾಗುವುದಕ್ಕಿಂತ ಮೊದಲು ಎಚ್ಚರವಾಗಿರುವುದು ಒಳ್ಳೆಯದು ಎಂದು ತಿಳಿಸಿದರು.

ಫೌಂಡೇಷನ್‌ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಪ್ರತಿಭೆ ಹೊಂದಿದ ನಗರದ ಕೆಜಿಪಿ ಶಾಲೆಯ ಆಕಾಂಕ್ಷಾ ಪ್ರಮೋದ ಪುರಾಣಿ, ಉಪಳಾಂವನ ಶ್ರೀರಾಮ ಕನ್ನಡ
ಕಾನ್ವೆಂಟ್‌ ಶಾಲೆಯ ಸ್ನೇಹಾ ಅರುಣಕುಮಾರ ನಿಪ್ಪಾಣಿ, ಕಿರಣ ಮಹಾಂತೇಶ ಆಲಗೂಡರಿಗೆ “ಕಲೆ ಸಮೃದ್ಧಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನ್ಯಾಯವಾದಿ ಹಣಮಂತರಾಯ ಅಟ್ಟೂರ, ಡಾ| ಬಸವರಾಜ ಜಿ.ಟಿ., ಚಿಂತಕಿ ಪರವೀನ್‌ ಸುಲ್ತಾನಾ ಮಾತನಾಡಿದರು. ಕೆ.ಗಿರಿಮಲ್ಲ, ಪರಮೇಶ್ವರ ಶಟಕಾರ, ಸುಭಾಷ ಚಕ್ರವರ್ತಿ, ಶ್ರೀಕಾಂತ ಪಾಟೀಲ ತಿಳಗೂಳ, ಪಿಡಿಎ ಕಾಲೇಜಿನ ಪ್ರಾಧ್ಯಾಪಕ ಡಾ| ಬಾಬುರಾವ್‌ ಶೇರಿಕಾರ, ಬಸವರಾಜ ಮೊರಬದ, ಜಗನ್ನಾಥ ತರನಳ್ಳಿ, ನೀಲಾಂಬಿಕಾ ಚೌಕಿಮಠ, ಸಂದೀಪ ಭರಣಿ, ಶಿವಾನಂದ ಮಠಪತಿ, ನಾಗರಾಜ ಹೆಬ್ಟಾಳ, ಶ್ರೀದೇವಿ ಶಟಕಾರ, ಗೀತಾ ಚಕ್ರವರ್ತಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.