ಕಲಬುರಗಿ ಸ್ಮಾರ್ಟ್‌ ಸಿಟಿಯಾಗಿಸಿ: ಸಂಸದ ಡಾ| ಖರ್ಗೆ


Team Udayavani, Feb 10, 2019, 8:56 AM IST

gul-3.jpg

ಕಲಬುರಗಿ: ನಗರಗಳಲ್ಲಿ ಕುಡಿಯುವ ನೀರು, ವಿದ್ಯುತ್‌, ಒಳಚರಂಡಿ ಹಾಗೂ ಸ್ವಚ್ಛತೆ ವ್ಯವಸ್ಥೆ ಚೆನ್ನಾಗಿದ್ದು, ನಾಗರಿಕರೆಲ್ಲ ಸ್ವಚ್ಛತೆಗೆ ಮಹತ್ವ ನೀಡಿ ಮಹಾನಗರವನ್ನು ಸ್ಮಾರ್ಟ್‌ ಸಿಟಿಯನ್ನಾಗಿಸಿ ಎಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಪಾಲಿಕೆ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಯೋಗದಲ್ಲಿ ನಗರದ ಕಾಕಡೆ ವೃತ್ತದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಪುರಸ್ಕೃತ ಅಮೃತ ಯೋಜನೆ ಹೆಚ್ಚಿನ ಅನುದಾನದಲ್ಲಿನ ನೀರು ಸರಬರಾಜು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ನಗರಕ್ಕೆ ಮಂಜುರಾದ ಅಮೃತ ಯೋಜನೆ ಉಳಿತಾಯದಲ್ಲಿ ಕುಡಿಯುವ ನೀರು ಸರಬರಾಜಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಸಲಾಂಟೇಕಡಿಯಿಂದ ಹಳೆ ನೀರು ಶುದ್ಧೀಕರಣ ಘಟಕದ ವರೆಗೆ ಬೆಣ್ಣೆತೋರಾದಿಂದ ನೀರು ಪೂರೈಸುವ ಕುಡಿಯುವ ನೀರು ಕೊಳವೆ ಮಾರ್ಗ ಬದಲಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಹಕಾರ ನೀಡಿದ ಶಾಸಕಿ ಖನೀಜ್‌ ಫಾತಿಮಾ ಅವರಿಗೆ ಅಭಿನಂದನೆ. ಈ ಕಾಮಗಾರಿ ಅಧಿಕಾರಿಗಳು, ನಗರ ಪಾಲಿಕೆ ಸದಸ್ಯರ ನೆರವಿನೊಂದಿಗೆ ಪ್ರಾರಂಭಗೊಂಡಿದೆ ಎಂದರು.

ಶಾಸಕಿ ಖನೀಜ್‌ ಫಾತೀಮಾ ಮಾತನಾಡಿ, ಬೆಣ್ಣೆತೋರಾದಿಂದ ನಗರಕ್ಕೆ ಸರಬರಾಜಾಗುವ ಕೊಳವೆ ಮಾರ್ಗದಲ್ಲಿ ಸೋರಿಕೆ ಇರುವುದರಿಂದ ನಗರಕ್ಕೆ ಸಮರ್ಪಕ ನೀರು ಸರಬರಾಜಾಗುತ್ತಿರಲಿಲ್ಲ. ಈ ಕುರಿತು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸೋರಿಕೆ ಇರುವ ಕೊಳವೆಗಳನ್ನು ಬದಲಿಸಲಾಗುತ್ತಿದೆ. ನಗರಕ್ಕೆ ನೀರಿನ ತೊಂದರೆ ಆಗದಂತೆ ಭೀಮಾಗೆ ಕಾಳನೂರು ಬ್ಯಾರೇಜಿನಿಂದ, ಬೆಣ್ಣೆತೋರಾಕ್ಕೆ ಗಂಡೋರಿನಾಲಾದಿಂದ ನೀರು ಬಿಡಲಾಗುತ್ತಿದೆ ಎಂದರು.

ಶಾಸಕ ಡಾ| ಬಿ.ಜಿ. ಪಾಟೀಲ, ಮೇಯರ್‌ ಮಲ್ಲಮ್ಮ ವಳಕೇರಿ, ಮುಖಂಡರಾದ ಭಾಗಣ್ಣಗೌಡ ಸಂಕನೂರ, ಮಾರುತಿರಾವ್‌ ಡಿ. ಮಾಲೆ, ತಿಪ್ಪಣ್ಣ ಕಮಕನೂರು, ಉಪ ಮೇಯರ್‌ ಅಲಿಯಾ ಸಿರಿನ್‌, ಶರಣಕುಮಾರ ಮೋದಿ, ರಾಜು ಕಪನೂರ, ಸಲಿಂ ಬೇಗ, ಶರಣಮ್ಮ ಯಲ್ಲಪ್ಪ ನಾಯಿಕೋಡಿ, ಪುತಲಿ ಬೇಗಂ, ರಮೇಶ ಕಮಕನೂರ, ಜಿ.ಪಂ. ಸಿಇಒ ಡಾ| ರಾಜಾ ಪಿ., ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್‌, ಶಿವನಗೌಡ ಪಾಟೀಲ ಪಾಲ್ಗೊಂಡಿದ್ದರು.

ದೂರ ಉಳಿದ ವಾರ್ಡ್‌ ಸದಸ್ಯರು: ವಾರ್ಡ್‌ ನಂ.1 ಹಾಗೂ ನಂ.7ರ ಸದಸ್ಯರಾದ ಶಿವಾನಂದ ಪಾಟೀಲ ಅಷ್ಟಗಿ, ವಿಠ್ಠಲ ಜಾಧವ್‌ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ದೂರ ಉಳಿದರು.

ಅಮೃತ ಯೋಜನೆಯ ಉಳಿತಾಯದಲ್ಲಿನ ಸುಮಾರು 12.36 ಕೋಟಿ ರೂ.ಗಳಲ್ಲಿ 9.7 ಕಿ.ಮೀ. ಉದ್ದದ ಪೈಪುಗಳನ್ನು ಬದಲಿಸಲಾಗುತ್ತಿದೆ. ಬೆಣ್ಣೆತೋರಾದಿಂದ ಈ ಮಾರ್ಗವಾಗಿ ದಿನಾಲು ಸುಮಾರು 20.ಎಂ.ಎಲ್‌.ಡಿ. ನೀರು ಪೂರೈಕೆ ಆಗಬೇಕಿತ್ತು. ಆದರೆ ಸೋರಿಕೆಯಿಂದ ಕೇವಲ ಆರೇಳು ಎಂ.ಎಲ್‌.ಡಿ. ನೀರು ಮಾತ್ರ ದೊರೆಯುತ್ತಿತ್ತು. ಇದರಿಂದ ನಗರದ 21 ವಾರ್ಡುಗಳಲ್ಲಿ ಕುಡಿಯುವ ನೀರಿನ ತೊಂದರೆ ಇತ್ತು. ಕಾಮಗಾರಿಯು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ನಂತರದಲ್ಲಿ ನಗರದ ಎಲ್ಲ ವಾರ್ಡುಗಳಿಗೆ 2 ದಿನಕ್ಕೊಂದು ಬಾರಿ ನೀರು ಸರಬರಾಜು ಮಾಡಲಾಗುವುದು.
• ಆರ್‌. ವೆಂಕಟೇಶಕುಮಾರ,ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.