ಮೂರು ವರ್ಷ ಬಳಿಕ ಕೊಟ್ಟ ಶೂ ಕಳಪೆ!

„ ವಸತಿ ಶಾಲೆ ಮಕ್ಕಳಿಗೆ ಕಳಪೆ ಶೂ ಭಾಗ್ಯ„ ಬೇಸಿಗೆ ರಜೆ ತಿಂಗಳಿರುವಾಗಲೇ ಶೂ ವಿತರಣೆ

Team Udayavani, Feb 19, 2020, 10:45 AM IST

19-February-02

ಬೀದರ: ಇನ್ನೊಂದು ತಿಂಗಳು ಕಳೆದರೆ ಶಾಲಾ ಬೇಸಿಗೆ ರಜೆಯೇ ಶುರುವಾಗಲಿದೆ. ಆದರೆ, ಸರ್ಕಾರ ರಾಜ್ಯದ ವಸತಿಯುತ ಶಾಲೆಯ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇದೀಗ ಶೂ ಭಾಗ್ಯ ಕರುಣಿಸಿದೆ. ಕಳೆದ ಮೂರು ವರ್ಷದಿಂದ ಶೂ-ಸಾಕ್ಸ್‌ ಸೌಲಭ್ಯದಿಂದ ವಂಚಿತರಾಗಿದ್ದ ಮಕ್ಕಳಿಗೆ ಶೈಕ್ಷಣಿಕ ವರ್ಷದ ಕೊನೆಗೆ ತಲುಪಿಸಿದ್ದು, ಅವು ಕಳಪೆ ಮಟ್ಟದ್ದಾಗಿವೆ.

ಟೆಂಡರ್‌ ಪ್ರಕ್ರಿಯೆಯಲ್ಲಿ ಸರ್ಕಾರದ ವಿಳಂಬ ನೀತಿ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್ ) ನಿರಾಸಕ್ತಿ ಪರಿಣಾಮ ರಾಜ್ಯದ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕಳೆದ ಮೂರು ವರ್ಷಗಳಿಂದ ಶೂ-ಸಾಕ್ಸ್‌ ವಿತರಣೆ ಆಗಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷéದಿಂದಾಗಿ ವಿದ್ಯಾರ್ಥಿಗಳು ಪರದಾಡಿದ್ದು, ಬಡ ಮಕ್ಕಳು ನಿತ್ಯ ಚಪ್ಪಲಿ ಹಾಕಿಕೊಂಡು ಇಲ್ಲವೇ ಬರಗಾಲಲ್ಲಿಯೇ ಶಾಲೆಗೆ ಹಾಜರಾಗುವಂತಾಗಿತ್ತು. ಮೂರು ವರ್ಷ ಬಳಿಕ ಫೆ.17ಕ್ಕೆ ಸೌಲಭ್ಯ ಕಲ್ಪಿಸಲಾಗಿದ್ದರೂ ತಿಂಗಳಲ್ಲಿ ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿರುವ ಕಾರಣ ಮಕ್ಕಳಿಗೆ ಶೂ ಧರಿಸುವ ಯೋಗ ಇಲ್ಲದಂತಾಗಿದೆ.

ರಾಜ್ಯದಲ್ಲಿ ಕ್ರೈಸ್ ವ್ಯಾಪ್ತಿಯಲ್ಲಿ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ, ಅಟಲ್‌ ಬಿಹಾರಿ ವಾಜಪೇಯಿ ಸೇರಿದಂತೆ ಒಟ್ಟು 822 ವಸತಿಯುತ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ಶಾಲೆಗೆ 250 ಪ್ರವೇಶದಂತೆ ಅಂದಾಜು 2.06 ಲಕ್ಷಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮಕ್ಕಳಿಗೆ ಪ್ರತಿ ವರ್ಷ ಸಮವಸ್ತ್ರದ ಜತೆಗೆ ತಲಾ ಒಂದು ಜೋಡಿ ಕಪ್ಪು ಮತ್ತು ಬಿಳಿ ಶೂ ಹಾಗೂ ಸಾಕ್ಸ್‌ಗಳನ್ನು ಉಚಿತವಾಗಿ ವಿತರಿಸಬೇಕೆಂಬ ನಿಯಮವಿದೆ. ಆದರೆ, ಮೂರು ವರ್ಷದಿಂದ ಯೋಜನೆ ನನೆಗುದಿಗೆ ಬಿದ್ದಿತ್ತು.

ಟೆಂಡರ್‌ ಪ್ರತಿಕ್ರಿಯೆ ವಿಳಂಬ: ಈ ಹಿಂದೆ ಪ್ರತಿ ವರ್ಷ ಮಕ್ಕಳಿಗೆ ಶೂ-ಸಾಕ್ಸ್‌ ವಿತರಣೆಯಾಗುತ್ತಿತ್ತು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲೇ ಟೆಂಡರ್‌ ಆಗುತ್ತಿತ್ತು. ಆದರೆ, ಕೇಂದ್ರೀಕರಣಗೊಂಡ ಬಳಿಕ ರಾಜ್ಯಮಟ್ಟದಿಂದಲೇ ಟೆಂಡರ್‌ ನಡೆಸಬೇಕೆಂಬ ನಿಯಮ ರೂಪಿಸಿದ್ದರಿಂದ ಮಕ್ಕಳಿಗೆ ಶೂ ಮರೀಚಿಕೆಯಾಗಿದೆ. ಕ್ರೈಸ್ ಸಂಸ್ಥೆ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್‌) ಮೂಲಕ ವಸತಿಯುತ ಶಾಲೆಗಳಿಗೆ ಶೂಗಳನ್ನು ಸರಬರಾಜು ಮಾಡುವ ಜವಾಬ್ದಾರಿ ಹೊತ್ತಿದೆ. ಆದರೆ, ಕಳೆದ ಮೂರು ವರ್ಷದಿಂದ ಟೆಂಡರ್‌ ಪ್ರಕ್ರಿಯೆಯಲ್ಲಿ ವಿಳಂಬ ನೀತಿಯಿಂದಾಗಿ ವಿದ್ಯಾರ್ಥಿಗಳು ಸೌಲಭ್ಯದಿಂದ ವಂಚಿತರಾಗಿದ್ದರು.

ಲಿಡ್ಕರ್‌ ಸಂಸ್ಥೆ ಫೆ.17ರಂದು ರಾಜ್ಯದ ಎಲ್ಲ ವಸತಿಯುತ ಶಾಲೆಗಳಿಗೆ ಶೂ-ಸಾಕ್ಸ್‌ ಸರಬರಾಜು ಮಾಡಿದ್ದು, ಮಾರ್ಚ್‌ ತಿಂಗಳಲ್ಲಿ ಪರೀಕ್ಷೆಗಳು ನಡೆಯುವುದರಿಂದ ಮಕ್ಕಳಿಗೆ ಲಾಭ ಇಲ್ಲದಂತಾಗಿದೆ. ಇನ್ನೊಂದೆಡೆ ಶೂ ಮತ್ತು ಸಾಕ್ಸ್‌ಗಳು ಕಳಪೆ ಮಟ್ಟದಿಂದ ಕೂಡಿರುವ ಆರೋಪಗಳು ಕೇಳಿ ಬಂದಿವೆ. ಬೆಂಗಳೂರಿನ ರಿಜಿಡ್‌ ಮತ್ತು ಸೂರ್ಯ ಇಂಡಸ್ಟ್ರೀಜ್‌ ಕಂಪನಿಗಳಲ್ಲಿ ತಯಾರುಗೊಂಡಿರುವ ಶೂಗಳನ್ನು ಲಿಡ್ಕರ್‌ ಸರಬರಾಜು ಮಾಡಿದೆ. ಕಪ್ಪು ಶೂಗೆ 258 ರೂ., ಬಿಳಿ ಶೂಗೆ 252 ರೂ. ಹಾಗೂ ಸಾಕ್ಸ್‌ಗೆ 40 ರೂ. ದರ ನಿಗದಿ ಮಾಡಲಾಗಿದ್ದು, ಇದಕ್ಕಿಂತ ಕಡಿಮೆ ದರದಲ್ಲಿ ಪ್ರಚಲಿತ ಕಂಪನಿ-ಉತ್ತಮ ಗುಣಮಟ್ಟದ ಶೂ ಮಾರುಕಟ್ಟೆಯಲ್ಲಿ ಸಿಗಲಿವೆ ಎಂಬುದು ವಿದ್ಯಾರ್ಥಿಗಳ ಅಳಲು.

ರಾಜ್ಯದ ವಸತಿಯುತ ಶಾಲೆ ವಿದ್ಯಾರ್ಥಿಗಳಿಗೆ ಕಳೆದ ಮೂರು ವರ್ಷದಿಂದ ಶೂ-ಸಾಕ್ಸ್‌ ವಿತರಣೆ ಆಗಿರಲಿಲ್ಲ. ಇದಕ್ಕೆ ಟೆಂಡರ್‌ ಪ್ರಕ್ರಿಯೆಯಲ್ಲಿ ವಿಳಂಬ ಮುಖ್ಯ ಕಾರಣ. ಈಗ ಕಳೆದೆರಡು ದಿನದಲ್ಲಿ ಎಲ್ಲ ಶಾಲೆಗಳಿಗೆ ಸರಬರಾಜು ಆಗಿವೆ. ಬರುವ ಶೈಕ್ಷಣಿಕ ವರ್ಷದಿಂದ ಈ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಶೂ ಕಳಪೆ ಮಟ್ಟದ್ದಾಗಿದ್ದರೆ ತನಿಖೆ ನಡೆಸಿ ಅನುದಾನ ತಡೆಹಿಡಿಯಲಾಗುವುದು.
ಡಾ. ರಾಘವೇಂದ್ರ,
ಕಾರ್ಯನಿರ್ವಾಹಕ ನಿರ್ದೇಶಕ, ಕ್ರೈಸ್‌

‌ಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.