ಆಶಾವಾದಿಯಾಗಿ ಬಾಳಿ: ರಂಭಾಪುರಿ ಶ್ರೀ
Team Udayavani, Jan 10, 2019, 9:22 AM IST
ಕಲಬುರಗಿ: ಬದುಕಿಗೆ ನೆಲೆ ಬೆಲೆ ಬರಲು ಶ್ರಮಿಸುವುದರ ಜತೆಗೆ ನಿರಾಶಾವಾದಿಯಾಗದೇ ಆಶಾವಾದಿಯಾಗಿ ಬಾಳಿದರೆ ಜೀವನ ಸಾರ್ಥಕಗೊಳ್ಳುವುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆ ಆಲೇರು ಮಂಡಲ ವ್ಯಾಪ್ತಿಯ ಕೊಲನಪಾಕ ಚಂಡಿಕಾಂಬಾ ಸಮೇತ ಸ್ವಯಂಭು ಸೋಮೇಶ್ವರ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಇಷ್ಟಲಿಂಗ ಮಹಾಪೂಜಾ ಹಾಗೂ 63ನೇ ಜನ್ಮ ದಿನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಬದುಕೊಂದು ಪುಸ್ತಕ. ಪ್ರತಿ ಪುಟದಿಂದ ಏನನ್ನಾದರೂ ತಿಳಿಯಬಹುದು. ಸುಮ್ಮನೇ ಪುಟ ತಿರುವಿ ಹಾಕಬಹುದು. ಅರಿತು ಬಾಳುವುದೇ ನಿಜವಾದ ಜೀವನ. ಮರೆತು ಮಲಗುವುದೇ ಬಾಳಿನ ಅವನತಿಗೆ ಕಾರಣ. ಮನುಷ್ಯನಲ್ಲಿ ಒಳ್ಳೆಯ ಮತ್ತು ಕೆಟ್ಟ ಗುಣಗಳು ಕೂಡಿಯೇ ಇವೆ. ಇವುಗಳನ್ನು ಬೇರ್ಪಡಿಸುವುದು ಬಲು ಕಷ್ಟ. ಆದರೆ ಒಳ್ಳೆಯದರ ಕಡೆಗೆ ಹೆಜ್ಜೆ ಹಾಕಿದರೆ ಜೀವನ ಸಾರ್ಥಕಗೊಳ್ಳುವುದು ಎಂದು ಹೇಳಿದರು.
ಶ್ರೀ ಜಗದ್ಗುರು ರೇಣುಕಾಚಾರ್ಯರು ಜಗತ್ಕಲ್ಯಾಣಕ್ಕಾಗಿ ಅವತರಿಸಿದ ಕೊಲನಪಾಕ ಸ್ವಯಂಭು ಶ್ರೀ ಸೋಮೇಶ್ವರ ಕ್ಷೇತ್ರದಲ್ಲಿ 63ನೇ ಜನ್ಮ ದಿನೋತ್ಸವ ನಡೆದಿರುವುದು ತಮಗೆ ಅತ್ಯಂತ ಸಂತೋಷ ತಂದಿದೆ ಎಂದು ಹೇಳಿದರು.
ಬಿಚಗುಂದ ಸೋಮಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಶ್ರೀ ರಂಭಾಪುರಿ ಜಗದ್ಗುರುಗಳ ಜೀವನ ಸಾಧನೆ ಅದ್ಭುತ. ಪೂಜ್ಯರ 63ನೇ ಜನ್ಮ ದಿನೋತ್ಸವ ಮೂಲ ಸೋಮೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವುದು ಎಲ್ಲರಿಗೂ ಹರ್ಷ ತಂದಿದೆ ಎಂದು ಹೇಳಿದರು. ಮೇಹಕರ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು.
ಸಿದ್ಧರಬೆಟ್ಟ, ಶಖಾಪುರ, ಕೆಂಗೇರಿ, ಪಾಳಾ, ಹಳ್ಳಿಖೇಡ, ಸ್ಟೇಷನ್ ಬಬಲಾದ, ಸಿಂಧನೂರು ಮೊದಲ್ಗೊಂಡು 25 ಜನ ಮಠಾಧೀಶರು ಪಾಲ್ಗೊಂಡಿದ್ದರು. ಹಲವಾರು ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರು ರಕ್ಷೆ ನೀಡಿ ಶುಭ ಹಾರೈಸಿದರು.
ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು, ಅಖೀಲ ಭಾರತ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣು ಮುಕ್ತಿಮುನಿ ಶಿವಾಚಾರ್ಯರು ಮಾತನಾಡಿದರು.
ಅಖೀಲ ಭಾರತ ವೀರಶೈವ ಮಹಾಸಭಾ ತೆಲಂಗಾಣ-ಆಂಧ್ರದ ಅಧ್ಯಕ್ಷ ನೇತಿ ಮಹೇಶ್ವರ, ಹೈದರಾಬಾದನ ಎಂ. ವೀರಮಲ್ಲೇಶ, ನೇತಿ ಜ್ಞಾನೇಶ್ವರ, ವಿಶ್ವೇಶ್ವರಯ್ಯ, ಜಗದೇವ ಹಿರೇಮಠ ಪಾಲ್ಗೊಂಡಿದ್ದರು. ಬಾಬುರಾವ ಬಿರಾದಾರ ಸ್ವಾಗತಿಸಿದರು. ಬಸವಕಲ್ಯಾಣದ ರಮೇಶ ರಾಜೋಳೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ