ಬೆಂಗಳೂರು-ಕಲಬುರಗಿ ನಡುವೆ ವಿಮಾನ ಸೇವೆ ಪುನರಾರಂಭ: ಮೊದಲ ದಿನವೇ ಉತ್ತಮ ಸ್ಪಂದನೆ
Team Udayavani, May 25, 2020, 12:23 PM IST
ಕಲಬುರಗಿ: ಲಾಕ್ ಡೌನ್ ಸಡಿಲಿಕೆ ಮಾಡಿ ದೇಶೀಯ ವಿಮಾನ ಯಾನ ಆರಂಭಿಸಿದ ಮೊದಲ ದಿನವೇ ಸೋಮವಾರ ರಾಜಧಾನಿ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಮಾನ ಹಾರಾಟ ನಡೆಯಿತು.
ಎರಡು ತಿಂಗಳ ನಂತರ ಸೋಮವಾರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟ ಸ್ಟಾರ್ ಏರ್ ವಿಮಾನವು 9.45ಕ್ಕೆ ಇಲ್ಲಿನ ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. 50 ಸೀಟುಗಳ ಸಾಮರ್ಥ್ಯದ ವಿಮಾನದಲ್ಲಿ ಉದ್ಯಾನ ನಗರಿಯಿಂದ 25 ಜನ ಪ್ರಯಾಣಿಕರು ಸೂರ್ಯ ನಗರಿಗೆ ಬಂದಿಳಿದರು.
ಇದೇ ವಿಮಾನ ಮರಳಿ ರಾಜಧಾನಿಗೆ ಬೆಳಿಗ್ಗೆ 10:20ಕ್ಕೆ ಹಾರಾಟ ಆರಂಭಿಸಿತ್ತು. ಕಲಬುರಗಿಯಿಂದಲೂ ಪ್ರಯಾಣಿಕರ ಉತ್ತಮ ಸ್ಪಂದನೆ ದೊರೆಯಿತು. ಇಲ್ಲಿಂದ 20 ಜನರು ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಸ್ಟಾರ್ ಏರ್ ವಾರದ ಏಳೂ ದಿನವೂ ವಿಮಾನಯಾನ ಸೇವೆ ನೀಡಲಿದೆ. ಮೇ 28ರಿಂದ ಅಲಯನ್ಸ್ ಏರ್ ಸಂಸ್ಥೆ ಸಹ ಬೆಂಗಳೂರು-ಕಲಬುರಗಿ ನಡುವೆ ವಿಮಾನ ಹಾರಾಟ ಆರಂಭಿಸಲಿದೆ. ಈ ವಿಮಾನವು ವಾರದ ಮೂರು ದಿನಗಳು (ಗುರುವಾರ, ಶನಿವಾರ ಮತ್ತು ರವಿವಾರ) ಹಾರಾಟ ನಡೆಸಲಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್. ಜ್ಞಾನೇಶ್ವರ ‘ಉದಯವಾಣಿ’ಗೆ ತಿಳಿಸಿದರು.
ಆರೋಗ್ಯ ತಪಾಸಣೆ: ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಆರೋಗ್ಯ ಇಲಾಖೆಯ ಎರಡು ವೈದ್ಯಕೀಯ ತಂಡಗಳನ್ನು ಒದಗಿಸಿದ್ದು, ಆಗಮನ ಮತ್ತು ನಿರ್ಗಮನದ ದ್ವಾರದಲ್ಲಿ ತಂಡಗಳು ಕಾರ್ಯ ನಿರ್ವಹಿಸುತ್ತವೆ ಎಂದು ಜ್ಞಾನೇಶ್ವರ ಹೇಳಿದರು.
ಎಲ್ಲ ಪ್ರಯಾಣಿಕರ ಥರ್ಮಲ್ ಸ್ಕ್ಯಾನಿಂಗ್, ಸಾನಿಟೈಜರ್ ಮಾಡಲಾಗುತ್ತಿದೆ. ಹಾಗೆ ಪ್ರತಿ ವಿಮಾನಯಾನಿಯೂ ತಮ್ಮ ಆರೋಗ್ಯ ಘೋಷಣೆ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿದೆ. ಪ್ರಯಾಣಿಕರ ಬ್ಯಾಗ್ ಗಳನ್ನೂ ಸಾನಿಟೈಜರ್ ಮಾಡಲು ಕ್ರಮ ವಹಿಸಲಾಗಿದೆ ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?