ಸ್ವಾಮಿ ಸಮರ್ಥರ ದರ್ಶನ ಪಡೆದ ಭಕ್ತ ಸಾಗರ
Team Udayavani, Mar 20, 2018, 12:16 PM IST
ಸೊಲ್ಲಾಪುರ: ಶ್ರೀ ಸ್ವಾಮಿ ಸಮರ್ಥರ ಪ್ರಕಟ ದಿನ ನಿಮಿತ್ತ ಮಹರಾಷ್ಟ್ರ- ಕರ್ನಾಟಕ ಹಾಗೂ ಆಂಧ್ರ ಸೇರಿದಂತೆ ದೇಶದ
ಮೂಲೆ-ಮೂಲೆಯಿಂದ ಬಂದಿರುವ ಲಕ್ಷಾಂತರ ಭಕ್ತರು ಸೋಮವಾರ ಅಕ್ಕಲಕೋಟ ಸ್ವಾಮಿ ಸಮರ್ಥರ ದರ್ಶನ ಪಡೆದರು.
ಸೋಮವಾರ ಬೆಳಗ್ಗೆ 5:00ರಿಂದ ಮಂದಿರದ ಪೂಜಾರಿ ಮೋಹನ ಮಹಾರಾಜರು ಸಮರ್ಥರಿಗೆ ಕಾಕಡಾರತಿ ಮೂಲಕ ಮಹಾಪೂಜೆ ನೆರವೇರಿಸಿದರು. ನಂತರ ಸ್ವಾಮಿ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಯಿತು. ಬೆಳಗ್ಗೆ 5:00ರಿಂದ ಸರದಿಯಲ್ಲಿ ನಿಂತ ಭಕ್ತರು ಶ್ರೀ ಸ್ವಾಮಿ ಸಮರ್ಥ ಜಯ ಜಯ ಸ್ವಾಮಿ ಸಮರ್ಥ ಎಂದು ನಾಮಸ್ಮರಣೆ ಮಾಡುತ್ತ ದರ್ಶನ ಪಡೆದರು.
ಸುಮಾರು ಎರಡು-ಮೂರು ಕಿಮೀ ವರೆಗೆ ಭಕ್ತರ ಸಾಲು ಹರಡಿತ್ತು. ಬೆಳಗ್ಗೆ 10:00ರಿಂದ 12:00ರ ವರೆಗೆ ಮಂದಿರದ ಜ್ಯೋತಿಬಾ ಮಂಟಪದಲ್ಲಿ ದೇವಸ್ಥಾನ ವಿಶ್ವಸ್ಥೆ ಉಜ್ವಲಾತಾಯಿ ಸರದೇಶಮುಖ ನೇತೃತ್ವದಲ್ಲಿ ಸತ್ಸಂಗ ಕಾರ್ಯಕ್ರಮ ನಡೆಯಿತು. ಸಮರ್ಥರಿಗೆ ಪುಷ್ಪಹಾರ ಅರ್ಪಿಸಿದ ನಂತರ ತೊಟ್ಟಿಲ ಕಾರ್ಯಕ್ರಮ ನಡೆಯಿತು. ಭಜನೆ ಹಾಗೂ ಆರತಿಯೊಂದಿಗೆ ಸಮರ್ಥರ ಜನ್ಮೋತ್ಸವ ಭಕ್ತಿ-ಭಾವದಿಂದ ಅದ್ಧೂರಿಯಾಗಿ ಆಚರಿಸಲಾಯಿತು.
ಮೈಂದರ್ಗಿ ರಸ್ತೆಯಲ್ಲಿರುವ ಭಕ್ತ ನಿವಾಸದಲ್ಲಿ ಭಕ್ತರಿಗಾಗಿ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪುಣೆಯ ಮಿಲಿಂದ ಪೋತದಾರ ಹಾಗೂ ಸಂಗಡಿಗರಿಂದ ಭಾವ-ಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ಮಹೇಶ ಇಂಗಳೆ, ಕಾರ್ಯದರ್ಶಿ ಆತ್ಮಾರಾವ ಘಾಟಗೆ, ವಿಶ್ವಸ್ಥ ವಿಲಾಸರಾವ ಪುಟಾಣೆ, ಮಹೇಶ ಗೋಗಿ, ಶ್ರೀನಿವಾಸ ಇಂಗಳೆ, ಪ್ರದೀಪ ಹಿಂಡೋಳೆ, ಬಾಳಾಸಾಹೇಬ ಘಾಟಗೆ, ಅಕ್ಷಯ ಸರದೇಶಮುಖ, ಶ್ರೀಪಾದ ಸರದೇಶಮುಖ, ಶಿವಶರಣ ಅಚಲೇರ, ಸ್ವಾಮಿನಾಥ ಲೋಣಾರಿ, ಸಂಜಯ ಪವಾರ, ಅಮರ ಪಾಟೀಲ, ಮಹಾದೇವ ತೇಲಿ, ಸಂಜಯ ಪಾಠಕ, ದೀಪಕ ಜರಿಪಟಕೆ, ರಾಮಚಂದ್ರ ಸಮಾಣೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ