ಬಿಸಿಲಿಗೆ ಆವಿಯಾದ ಭೀಮೆ ಒಡಲು


Team Udayavani, Mar 18, 2019, 6:01 AM IST

gul-4.jpg

ಜೇವರ್ಗಿ: ಪ್ರಸಕ್ತ ವರ್ಷ ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ರೈತರು ಒಂದು ಕಡೆಯಾದರೆ, ಕೆಲಸವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯುತ್ತಿರುವ ಯುವ ಜನರ ಸಮೂಹ ಮತ್ತೂಂದು ಕಡೆ. ಮತ್ತೂಂದೆಡೆ ಗಾಯದ ಮೇಲೆ ಬರೆ ಎಳೆದಂತೆ ಕುಡಿಯುವ ನೀರಿಗಾಗಿ ಹಾಹಾಕಾರ ಮುಗಿಲು ಮುಟ್ಟಿದೆ. ಬಿಸಿಲ ಧಗೆಗೆ ಬತ್ತಿದ ಭೀಮೆಯ ಒಡಲಾಳದ ನೀರು ಆವಿಯಾಗಿದೆ. ಕಟ್ಟಿಸಂಗಾವಿ ಹತ್ತಿರದ ಭೀಮಾ ಬ್ರಿಡ್ಜ್ನಲ್ಲಿ ಮರಳು ಮತ್ತು ಕಲ್ಲುಗಳು ಮೇಲೆ ಬಂದಿದ್ದು, ಮಾನವನ ದೇಹದಲ್ಲಿನ ಅಸ್ತಿಪಂಜರದಂತೆ ಕಾಣಿಸುತ್ತಿವೆ. 

ಇದೇನು ಭೀಮಾ ನದಿಯೋ ಅಥವಾ ಮರಳು ಭೂಮಿಯೋ?  ಎನ್ನುವ ಅನುಮಾನ ಮೂಡಿಸುತ್ತಿದೆ. ಕೋನಾ ಹಿಪ್ಪರಗಾ ಬ್ಯಾರೇಜ್‌ ಕಂ ಬ್ರಿಡ್ಜ್ ಬಳಿ ನೀರು ಸಂಗ್ರಹಿಸಿ ದೂರದ ಕಲಬುರಗಿ ಪಟ್ಟಣಕ್ಕೆ ನೀರು ಪೂರೈಸಲಾಗುತ್ತಿದೆ. ಅಲ್ಲದೆ ಕೋಳಕೂರ ಮಾರ್ಗವಾಗಿ ಅಲ್ಲಲ್ಲಿ ಅಲ್ಪಸ್ವಲ್ಪ ನೀರಿನ ಸಂಗ್ರಹಣೆ ಇದ್ದು, ಅದೇ ಹರಿವು ಕಟ್ಟಿಸಂಗಾವಿ ಗ್ರಾಮದ ಹತ್ತಿರ ಅಲ್ಲಲ್ಲಿ ತೆಗ್ಗುಗಳಲ್ಲಿ ಸಂಗ್ರಹವಾಗಿದೆ. ಈ ನೀರು ಜಾನುವಾರುಗಳ ದಾಹ ನೀಗಿಸಲು ಸಾಕಾಗುತ್ತದೆ. ಬೆಳೆದ ಬೆಳೆಗಳು ಬಾಡಿ ಹೋಗಿವೆ.

ಬರಗಾಲ ಕಾಮಗಾರಿಗಳು ಹಳ್ಳ ಹಿಡಿದಿವೆ. ಸರಕಾರ ನೀಡುವ ಪರಿಹಾರ ಗಗನ ಕುಸುಮವಾಗಿದೆ. ಸಾಲಮನ್ನಾ, ಬೆಳೆವಿಮೆ ಕೇವಲ ಕಾಗದದಲ್ಲಿ ಘೋಷಣೆಯಾಗಿ ಜಾರಿಗೆ ಬರದೇ ಧೂಳು ತಿನ್ನುತ್ತಿವೆ. 

ರೈತರು ಬೆಳೆದ ಅಲ್ಪಸ್ವಲ್ಪ ಬೆಳೆಗಳಿಗೂ ಸಮರ್ಪಕ ಬೆಲೆ ಸಿಗದೆ ಕಂಗಾಲಾಗಿ ಸಾಲಬಾಧೆಯಿಂದ ಆತ್ಮಹತ್ಯೆ ದಾರಿ  ತುಳಿಯುತ್ತಿದ್ದಾರೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಾಕಷ್ಟು ಕೊಳವೆ ಬಾವಿಗಳನ್ನು ಕೊರೆದಿದ್ದರಿಂದ ಅಂತರ್ಜಲ ಮಟ್ಟ ಕುಸಿದು ಪಾತಾಳ ಸೇರಿದೆ. ಅಲ್ಲದೇ ಅಕ್ರಮ ಮರಳುಗಾರಿಕೆಯಿಂದ ನೀರಿನ ಸಂಗ್ರಹಣೆ, ಹರಿವಿನ ಮಾರ್ಗ ಹಾಳಾಗಿ ಪ್ರಕೃತಿ ಮಡಿಲಿಗೆ ಕೊಳ್ಳಿ ಇಡುತ್ತಿರುವುದು ನಾಗರಿಕ ಪ್ರಪಂಚದ ಜನರು ತಲೆತಗ್ಗಿಸುವಂತೆ ಮಾಡುತ್ತಿವೆ.

ಭೀಮಾನದಿ ನೀರು ಖಾಲಿಯಾಗಿದ್ದು ಜೇವರ್ಗಿ ಪಟ್ಟಣದ ಜನರು ತಮ್ಮ ಮನೆ ಎದುರಿನ ನಳಗಳಿಗೆ ಕೀಲಿಹಾಕಿ ನೀರಿನ
ಆಸೆಯನ್ನೇ ಬಿಟ್ಟಿದ್ದಾರೆ. ಬೋರವೆಲ್‌ ಮತ್ತು ಟ್ಯಾಂಕರ್‌ ನೀರಿಗೆ ಮೊರೆಹೋಗುತ್ತಿದ್ದು, ಮೋಟಾರು ಸೈಕಲ್‌ಗ‌ಳ ಮೇಲೆ ಕೊಡಗಳನ್ನು ಕಟ್ಟಿಕೊಂಡು ನೀರು ತರುತ್ತಿದ್ದಾರೆ.

ಅರಣ್ಯ ಇಲಾಖೆ ಗಿಡಮರ ಬೆಳೆಸುವಲ್ಲಿ ವಿಫಲವಾಗಿ ಸಂಪೂರ್ಣ ರಕ್ಷಿತ ಅರಣ್ಯ ಪ್ರದೇಶ ನಶಿಸಿಹೋಗಿದೆ. ನೀರಾವರಿ ಯೋಜನೆಗಳು ಜಾರಿಯಾಗಿಲ್ಲ. ಕಾಲುವೆಗಳು ಹಾಳಾಗಿವೆ. ನೀರಿನ ಸಂಗ್ರಹಣೆ ಮತ್ತು ಅಂತರ್ಜಲ ಸಂರಕ್ಷಣೆ ಬರಗಾಲ ಕಾಮಗಾರಿ, ಉದ್ಯೋಗ ಖಾತ್ರಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗದೆ ಅರ್ಧಮರ್ಧ ಕೆಲಸ ಗಳಿಂದಾಗಿ ನೀರಿನ ಮೂಲಗಳು ಬರಿದಾಗಿವೆ. ಇಷ್ಟಾದರೂ ಜನಪ್ರತಿನಿಧಿಗಳು ಮತ್ತು ಸರಕಾರಿ ಅಧಿಕಾರಿಗಳು ಸಮಸ್ಯೆ ಬಂದಾಗಲೇ ಪರಿಹರಿಸಲು ಸನ್ನದ್ಧರಾಗುತ್ತಿದ್ದಾರೆ. 

ಸಮಸ್ಯೆಗೆ ಬೆನ್ನು ತೋರುತ್ತಿರುವ ಪ್ರತಿನಿಧಿಗಳು ಪುರಸಭೆ ಸದ್ಯ ಆರರಿಂದ ಎಂಟು ದಿನಗಳಿಗೊಮ್ಮೆ ಕುಡಿಯುವ ನೀರು  ಪೂರೈಸುತ್ತಿದೆ. 23ವಾರ್ಡ್‌ ಜನರು ಜನಪ್ರತಿನಿಧಿ ಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಗಾಢ ನಿದ್ದೆಯಲ್ಲಿದೆ. ಮರಗಿಡಗಳು ಕಣ್ಮರೆಯಾಗಿವೆ. ಪುರಸಭೆಯಲ್ಲಿಯೂ ಜನಪ್ರತಿನಿಧಿ ಗಳ ಆಯ್ಕೆ ನಂತರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಗೊಂದಲ ನ್ಯಾಯಾಲಯದ ಮೆಟ್ಟಿಲು ಏರಿದ್ದು ಚುನಾಯಿತ ಪ್ರತಿನಿಧಿ ಸದಸ್ಯರು ಪಟ್ಟಣದ ಸಮಸ್ಯೆಗಳತ್ತ ಬೆನ್ನು ತೋರಿಸುತ್ತಿದ್ದಾರೆ

 ಮರೆಪ್ಪ ಬೇಗಾರ

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.