ಅಹಿಂದ ವರ್ಗಕ್ಕೆ ಬಿಜೆಪಿ ಕೊಡುಗೆ ಅಪಾರ: ಮುದಿರಾಜ್‌


Team Udayavani, Nov 30, 2017, 11:00 AM IST

gul-3.jpg

ಕಲಬುರಗಿ: ಕೇಂದ್ರ ಸರಕಾರದಲ್ಲಿ ನರೇಂದ್ರ ಮೋದಿ ಮತ್ತು ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ದಲಿತ ಮತ್ತು ಅಹಿಂದ್‌ ವರ್ಗಕ್ಕೆ ಅಪಾರ ಕೊಡುಗೆಗಳನ್ನು
ನೀಡಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಗೋಪಾಲರೆಡ್ಡಿ ಮುದಿರಾಜ್‌
ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪಕ್ಷದ ಪರಿಶಿಷ್ಟ ಪಂಗಡ ಮೋರ್ಚಾ ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರವು ಪರಿಶಿಷ್ಟ ಪಂಗಡಕ್ಕೆ ಶೇಕಡಾ 7.5ರಷ್ಟು
ಮೀಸಲಾತಿ ಜಾರಿ ಮಾಡಿದೆ. ಆದಾಗ್ಯೂ, ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿ ಮಾಡದೇ ಪರಿಶಿಷ್ಟ ಪಂಗಡದವರನ್ನು
ವಂಚಿಸಿದೆ. ಬಿಜೆಪಿ ಕಾರ್ಯಕರ್ತರೆಂದರೆ ದೇಶಕ್ಕಾಗಿ ಒಳ್ಳೆಯದು ಮಾಡುವುದು ಹಾಗೂ ದೇಶಕ್ಕಾಗಿ ಪ್ರಾಣ
ಬಿಡಲು ಸಿದ್ಧರಿದ್ದಾರೆ ಎಂದರು.

ಪ್ರತಿ ಮಂಡಲದಲ್ಲಿ ಕಲಬುರ್ಗಿ ನಗರ ಗ್ರಾಮಾಂತರ ಜಿಲ್ಲೆಯ ಏಳು ಮಂಡಲಗಳಲ್ಲಿ ಬಂದ ತಾಲೂಕು
ಅಧ್ಯಕ್ಷರುಗಳು ತಮ್ಮ ತಂಡಗಳನ್ನು ಕಟ್ಟಿಕೊಂಡ ಸಮಿತಿ ಸದಸ್ಯರನ್ನು ಮನೆ ಮನೆಗೆ ಹೋಗಿ ಕೇಂದ್ರ ಸರ್ಕಾರದ
ಸಾಧನೆ ಹಾಗೂ ಈ ಹಿಂದೆ ಇದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪರಿಶಿಷ್ಟ ಪಂಗಡಕ್ಕೆ ನೀಡಿದ್ದ ಸೌಲತ್ತುಗಳನ್ನು ಜನರ ಮನೆಗೆ ಹೋಗಿ ತಿಳಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕೆ ಬರುವಂತೆ ಶ್ರಮಿಸಬೇಕು ಎಂದರು.

ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೇಂದ್ರ ವಿಕರಾಬಾದ ಮಾತನಾಡಿ, ಕೇಂದ್ರ ಸರ್ಕಾರವು ಪರಿಶಿಷ್ಟ
ಪಂಗಡದ ಶೇಕಡಾವಾರು ಮೀಸಲಾತಿಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೆ ತರದೇ ನಿರ್ಲಕ್ಷ್ಯ ವಹಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾಯಕ ಜನಾಂಗದ ನಾಲ್ವರು ಸಚಿವರಾಗಿದ್ದರು. ಆದಾಗ್ಯೂ, ಕಾಂಗ್ರೆಸ್‌ ಅವ 
ಧಿಯಲ್ಲಿ ನಾಯಕ ಜನಾಂಗಕ್ಕೆ ಒಂದು ಸಚಿವ ಸ್ಥಾನ ನೀಡಿ, ಬಿಜೆಪಿ ಸರಕಾರದಲ್ಲಿ ವಾಲ್ಮೀಕಿ ನಿಗಮ ಸ್ಥಾಪಿಸಲಾಯಿತು.
ಇವತ್ತಿನ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಅನ್ಯಾಯ ಮಾಡಿದೆ ಎಂದು ದೂರಿದರು.

ನಗರ ಜಿಲ್ಲೆಯ ಅಧ್ಯಕ್ಷ ಚನ್ನಪ್ಪ ಸುರಪುರಕರ್‌ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ ಪರಿಶಿಷ್ಟ ಜನಾಂಗಕ್ಕೆ ಅಭಿವೃದ್ಧಿ ಮಾಡಿದ ಬಗ್ಗೆ ಹೇಳಬೇಕು ಎಂದರು.

ರಾಜ್ಯ ಸರ್ಕಾರ ಕೂಡಲೇ ಶೇಕಡಾ 7ರಷ್ಟು ಮಿಸಲಾತಿ ಕೊಡಬೇಕು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮೇಲೆ
ಒತ್ತಡ ಹೇರಲು ಜನೇವರಿಯಲ್ಲಿ ಬೃಹತ್‌ ಪ್ರತಿಭಟನೆ ಮೆರವಣಿಗೆ ನಡೆಸಲಾಗುವುದು. ಜನಜಾಗೃತಿ ಶಿಬಿರವನ್ನು
ಫೆಬ್ರವರಿಯಲ್ಲಿ ನಗರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.

ಧರ್ಮಣ್ಣ ಇಟಗಾ, ಶರಣಪ್ಪ ತಳವಾರ, ಅನಿಲಕುಮಾರ ಜಾಧವ್‌, ಸುರೇಶ ವೈದ್ಯರಾಜ್‌, ರಾಘವೇಂದ್ರ ಕುಲಕರ್ಣಿ,
ವಿಜಯಕುಮಾರ ಬಂಗಾರಿ, ರಾಘವೇಂದ್ರ ಭಂಟಿ, ನಾಗರಾಜ ಜನಕೇರಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.