ಇವಿಎಂ ಬಳಸಿ ಮತ ಕದಿಯುತ್ತಿದೆ ಬಿಜೆಪಿ: ಧನ್ನಿ


Team Udayavani, Jan 1, 2019, 6:43 AM IST

gul-2.jpg

ಆಳಂದ: ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರ ಕೈ ಬಲಪಡಿಸಿ, ಲೋಕಸಭೆ ಚುನಾವಣೆಯಲ್ಲಿ ಮತ್ತಷ್ಟು ಶಕ್ತಿ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸೇರಿದಂತೆ ರಾಷ್ಟ್ರವ್ಯಾಪಿ ಕಾರ್ಯಕರ್ತರೆಲ್ಲ ಒಗ್ಗೂಡಿ ಡಿ.12ರಿಂದ ಜ.12ರ ವರೆಗೆ ಮಾಯಾವತಿ ಅವರ 63ನೇ ಜನ್ಮದಿನದ ಅಂಗವಾಗಿ ಆರ್ಥಿಕ ಸಂಯೋಗ ದಿನದ ಅಭಿಯಾನ ಪ್ರಾರಂಭಿಸಿದಂತೆ ಸೋಮವಾರ ತಾಲೂಕಿನಲ್ಲೂ ಚಾಲನೆ ನೀಡಲಾಯಿತು.

ಜ.15ರಂದು 10 ಜಿಲ್ಲೆಗಳನ್ನು ಒಳಗೊಂಡು ಕಲಬುರಗಿಯಲ್ಲೇ ವಿಭಾಗ ಮಟ್ಟದಲ್ಲಿ ಕುಮಾರಿ ಮಾಯಾವತಿ ಅವರ 63ನೇ ಜನ್ಮದಿನ ಆಚರಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 63 ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಬಿಎಸ್‌ಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಹಾಗೂ
ಕಲಬುರಗಿ ವಿಭಾಗೀಯ ಉಸ್ತುವಾರಿ ಮಹಾದೇವ ಬಿ. ಧನ್ನಿ ಹೇಳಿದರು. 

ಚುನಾವಣೆ ಮುನ್ನವೇ ಮತದಾರರಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅವರಿಂದ ಆರ್ಥಿಕ ಸಹಾಯ ಪಡೆಯಲು ಗ್ರಾಮೀಣಮಟ್ಟ ಸೇರಿದಂತೆ ಪಟ್ಟಣದಲ್ಲಿ ಸಂಚರಿಸಲಾಗುವುದು. ಮತದಾರರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌, ಬಿಜೆಪಿ ದೇಶವನ್ನು 70 ವರ್ಷಗಳ ಕಾಲ ಆಳಿದರೂ ಸಂವಿಧಾನ ಆಶಯದಂತೆ ನಡೆದುಕೊಂಡಿಲ್ಲ. ವ್ಯವಸ್ಥೆ ಖಾಸಗೀಕರಣಗೊಳಿಸಿ ವಿದ್ಯಾವಂತರಿಗೆ ಅತಂತ್ರಗೊಳಿಸಿದ್ದು, ಇಂದಿಗೂ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿಲ್ಲ. ಸ್ವತ್ಛ ಭಾರತ ಕೇವಲ ಹೆಸರಿಗೆ ಮಾತ್ರ, ಸರ್ಕಾರಿ ಆಸ್ಪತ್ರೆಗಳು ದನದ ಕೊಟ್ಟಿಗೆಯಾಗಿವೆ. ವಸತಿ ನಿಲಯಗಳು ಹಂದಿಗಳ ಗೂಡಾಗಿವೆ. ಶಿಕ್ಷಣ ಖಾಸಗೀಕರಣದಿಂದ ಅತಿಯಾದ ಶುಲ್ಕ ಭರಿಸುವಂತಾಗಿದೆ. ಪ್ರಧಾನಿ ಮೋದಿ ಅವರು, ಸಬಕಾ ಸಾತ್‌, ಸಬಕಾ ವಿಕಾಸ್‌ ಎಂದು ಹೇಳಿದ್ದು ಸುಳ್ಳಿನಿಂದ ಕೂಡಿದೆ. ಜನರ ಖಾತೆಗೆ 15 ಲಕ್ಷ ರೂ. ನೀಡುವ ಭರವಸೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಎಂದು ಜನರಿಗೆ ಮೋಸಮಾಡಿದ್ದಾರೆ. 

ನೋಟು ಅಮಾನ್ಯಿಕರಣದಿಂದ ಜನರಿಗೆ ತೊಂದರೆ ಮಾಡಿ, ಜಂಗಲ್‌ ರಾಜ್ಯವಾಗಿಸಿದ್ದಾರೆ. ಬಿಜೆಪಿ ಸರ್ಕಾರ ಇರುವ ಕಡೆ ದಲಿತ ಮಹಿಳೆಯರು ಮೇಲೆ ದೌರ್ಜನ್ಯ, ಗೂಂಡಾಗಿರಿ, ದಲಿತರ ಹಲ್ಲೆ ನಡೆದರೂ ಕಣ್ಣುಮುಚ್ಚಿಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ಗಾಳಿಗೆ ತೂರಿ ಚುನಾವಣೆಯಲ್ಲಿ ಇವಿಎಂ ಬಳಸಿ ಮತಗಳನ್ನು ಕದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಮತಪತ್ರಗಳ ಮೂಲಕವೇ ಮತದಾನ ನಡೆಯಬೇಕು. ಆದರೆ ಯಂತ್ರಗಳ ಮೋಸದಿಂದ ದೇಶದ ಶೇ. 85ರಷ್ಟು ಜನರ ಹಿತ ಕಾಯುವ ಬದಲು ಬೆರಳೆಣಿಕೆಯಷ್ಟೇ ಜನರ ಹಿತಕಾಯುತ್ತಿದ್ದಾರೆ. ಮೋದಿ ಅವರಿಗೆ ಬಂಡವಾಳ ಶಾಹಿಗಳೇ ಆಸ್ತಿಯಾದರೆ, ಅಕ್ಕ ಮಾಯಾವತಿ ಅವರಿಗೆ ಒಂದು ವೋಟಿನ ಜೊತೆಗೆ ಒಂದು ನೋಟು ನೀಡಿ ಆರ್ಥಿಕ ಮತ್ತು ಅಧಿಕಾರದ ಶಕ್ತಿ ತುಂಬುವ ಜನರೇ ಆಸ್ತಿಯಾಗಲಿದ್ದಾರೆ ಎಂದು ಹೇಳಿದರು.

ಶ್ಯಾಮರಾವ್‌ ಕಾಂಬಳೆ ಹೆಬಳಿ, ಸೂರ್ಯಕಾಂತ ಜಿಡಗಾ, ಮಲ್ಲಿಕಾರ್ಜುನ ವೈಜಾಪುರ ಹಾಗೂ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.