ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
Team Udayavani, Apr 2, 2018, 10:46 AM IST
ಚಿಂಚೋಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತಾಲೂಕಿನ ಅಭಿವೃದ್ದಿಗೋಸ್ಕರ ಸಾಕಷ್ಟು ಅನುದಾನ ಮಂಜೂರಿಗೊಳಿಸಿ ಅಭಿವೃದ್ಧಿಪಡಿಸಿದ್ದು, ಬರುವ ಚುನಾವಣೆಯಲ್ಲಿ ನನ್ನ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಡಾ|ಉಮೇಶ ಜಾಧವ್ ಹೇಳಿದರು.
ಚಂದಾಪುರದ ತಮ್ಮ ನಿವಾಸದಲ್ಲಿ ಶನಿವಾರ ತಾಲೂಕು ಮರಾಠಾ ಸಮಾಜ ತಾಲೂಕು ಅಧ್ಯಕ್ಷ ಶಾಮಸುಂದರ ಪವಾರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ತಮ್ಮ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ತಾಲೂಕಿನಲ್ಲಿ ನೀರಾವರಿ, ರಸ್ತೆ ಡಾಂಬರೀಕರಣ, ಸಿಮೆಂಟ್ ರಸ್ತೆ, ವಸತಿ ರಹಿತರಿಗೆ ಮನೆ ಮಂಜೂರು, ಬಹುಗ್ರಾಮ ಯೋಜನೆ, ಶಾಲಾ-ಕಾಲೇಜು ಕಟ್ಟಡ ನಿರ್ಮಾಣ, ಮಿನಿ ವಿಧಾನಸೌಧ ಕಟ್ಟಡ ಮಂಜೂರು, ವಿದ್ಯುತ್ ಉಪಕೇಂದ್ರ, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ, ಸಣ್ಣ ಸೇತುವೆ ನಿರ್ಮಾಣ ಇನ್ನಿತರ ಅಭಿವೃದ್ಧಿಗೋಸ್ಕರ ಕಳೆದ ಐದು ವರ್ಷಗಳಲ್ಲಿ ಎರಡು ಸಾವಿರ ಕೋಟಿ ರೂ. ಗಳಿಗಿಂತ ಹೆಚ್ಚಿನ ಅನುದಾನ ಮಂಜೂರಿಗೊಳಿಸಿ ಐತಿಹಾಸಿಕ ಸಾಧನೆ ಮಾಡಿದ್ದೇನೆ ಎಂದರು.
ಮರಾಠ ಸಮಾಜದ ಅಧ್ಯಕ್ಷ ಶಾಮ ಸುಂದರ ಪವಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವುದರಿಂದ ನಮಗೆ ಹೆಚ್ಚಿನ ಶಕ್ತಿ ಬಂದಿದೆ ಎಂದರು.
ಜಿಪಂ ಸದಸ್ಯ ಗೌತಮ ಪಾಟೀಲ, ಶಾಮ ಸುಂದರ ಪವಾರ, ತಾಲೂಕು ಭೂನ್ಯಾಯ ಮಂಡಳಿ ಅಧ್ಯಕ್ಷ ಮಧುಸೂಧನರೆಡ್ಡಿ ಕಲ್ಲೂರ, ಅಬ್ದುಲ್ ರವೂಫ ಮಿರಿಯಾಣ, ಶಿವಶರಣಪ್ಪ ಪೊಲೀಸ್ ಪಾಟೀಲ, ಎಪಿಎಂಸಿ ನಿರ್ದೇಶಕ ವಿಠಲರೆಡ್ಡಿ ಬೆನಕೆಪಳ್ಳಿ, ಜಗದೀಶ ಪಾಟೀಲ ಕನಕಪುರ ಮಾತನಾಡಿದರು. ಪುರಸಭೆ ಸದಸ್ಯ ಅಬ್ದುಲ್ ಬಾಸೀತ ಸ್ವಾಗತಿಸಿದರು, ಶ್ರೀನಿವಾಸ ಚಿಂಚೋಳಿಕರ ನಿರೂಪಿಸಿದರು,
ಪ್ರಲ್ಹಾದ ರಾಠೊಡ ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ