ಮಹಾರಾಷ್ಟ್ರ ಸರ್ಕಾರ ಉರುಳಿಸಲು ಬಿಜೆಪಿ ಸಂಚು: ಜಿ.ಪರಮೇಶ್ವರ್


Team Udayavani, Jun 25, 2022, 2:28 PM IST

g parameshwara

ಕಲಬುರಗಿ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಳ್ಳೆಯದಲ್ಲ. ಭವಿಷ್ಯದಲ್ಲಿ ಇದು ಅಪಾಯಕಾರಿ ನಡೆಯಾಗಲಿದೆ. ಸರ್ಕಾರವನ್ನು ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿದರು.

ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಪಕ್ಷಕ್ಕೆ ಬಹುಮತ ಬರದೇ ಇದ್ದ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸುವುದು ಸಾಮಾನ್ಯ. ಇದಕ್ಕೆ ದೇಶದ ಸಂವಿಧಾನದಲ್ಲೂ ಕೂಡ ಅವಕಾಶ ಇದೆ. ಆದ್ದರಿಂದ ಎನ್ ಸಿಪಿ ಮತ್ತು ಶಿವಸೇನೆ ಹಾಗೂ ಕಾಂಗ್ರೆಸ್ ಸೇರಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿದ್ದವು. ಆದರೆ ಮೂರೂ ಪಕ್ಷಗಳ ಮಧ್ಯೆ ಆಂತರಿಕ ಬಿಕ್ಕಟ್ಟಿಗೆ ಪ್ರಚೋದನೆ ನೀಡಿದುದಲ್ಲದೆ ಸರ್ಕಾರವನ್ನು ಬೀಳಿಸಲು ಬಿಜೆಪಿ ವ್ಯವಸ್ಥಿತವಾದ ಸಂಚು ಮಾಡಿದೆ ಎಂದು ನೇರವಾಗಿ ಆರೋಪಿಸಿದರು.

ಈಗಾಗಲೇ ಕರ್ನಾಟಕದಲ್ಲಿ ಇದನ್ನೇ ಮಾಡಿದ್ದ ಬಿಜೆಪಿ, ಮಹಾರಾಷ್ಟ್ರದಲ್ಲೂ ಮತ್ತು ಇತರ ರಾಜ್ಯಗಳಲ್ಲೂ ವ್ಯವಸ್ಥಿತವಾಗಿ ಸಂಚಿನ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಇಂತಹ ಕುತಂತ್ರದ ಆಟಗಳು ಬಹಳ ದಿನ ನಡೆಯುವುದಿಲ್ಲ. ಅದೂ ಅಲ್ಲದೆ ಪ್ರಜಾಪ್ರಭುತ್ವಕ್ಕೆ ಇದು ಒಳ್ಳೆಯ ಬೆಳವಣಿಗೆಯಂತೂ ಖಂಡಿತಾ ಅಲ್ಲ ಎಂದ ಅವರು, ಇಂತಹ ತಂತ್ರ ಕುತಂತ್ರಗಳಿಂದ ಸರಕಾರಗಳನ್ನು ಬೀಳಿಸುವ ನಿಟ್ಟಿನಲ್ಲಿ ನಡೆಯುವ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಚುನಾವಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ. ಈ ಕುರಿತು ದೇಶದ ಎಲ್ಲೆಡೆ ವ್ಯಾಪಕ ಚರ್ಚೆಯಾಗಿ ದೊಡ್ಡ ಬದಲಾವಣೆ ತರಬೇಕಾಗಿದೆ ಎಂದರು.

ಇದನ್ನೂ ಓದಿ:ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ,ಪಡುಕೋಣೆಗೆ ಚೊಚ್ಚಲ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

ಮಹಾರಾಷ್ಟ್ರದಲ್ಲಿ ಕುತಂತ್ರದಿಂದ ಮೈತ್ರಿ ಸರ್ಕಾರವನ್ನು ಕೆಡವಲು, ಬಿಜೆಪಿ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಈ ಮಧ್ಯೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರ ರಾಜಕಾರಣದಲ್ಲಿರುವ ಯಾರೂ ಸನ್ಯಾಸಿಗಳಲ್ಲ ಎನ್ನುವ ಹೇಳಿಕೆ ಇದಕ್ಕೆ ಪುಷ್ಟಿ ನೀಡುವಂತಿದೆ ಎಂದು ಕಾಲೆಳೆದ ಅವರು, ಖಂಡಿತವಾಗಿ ನಿರಾಣಿಯವರು ಸನ್ಯಾಸಿಯಾಗಿದ್ದರೆ, ಮಠ ಮಾನ್ಯಗಳಲ್ಲಿ ಕಾವಿಬಟ್ಟೆ ತೊಟ್ಟು ಕುಳಿತುಕೊಳ್ಳಲಿ ಎಂದು ಛೇಡಿಸಿದರು .

ಟಾಪ್ ನ್ಯೂಸ್

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.