16ರಂದು ಸಿಎಂಗೆ ಕಪ್ಪುಬಾವುಟ ಪ್ರದರ್ಶನ
Team Udayavani, Dec 1, 2017, 10:50 AM IST
ಕಲಬುರಗಿ: ಸದಾಶಿವ ಆಯೋಗದ ವರದಿ ಜಾರಿಗೆ ತರದೆ ಹೋದಲ್ಲಿ ಡಿ. 16ರಂದು ಜೇವರ್ಗಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಪಂ ಮಾಜಿ ಸದಸ್ಯ ಹಾಗೂ ಆಲ್ ಇಂಡಿಯಾ ಎಂಐಎಂ ಪಕ್ಷದ ರಾಜ್ಯ ಕಾರ್ಯಕಾರಿ ಸದಸ್ಯ ಗುರುಶಾಂತ ಪಟ್ಟೇದಾರ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದಲೂ ಆಯೋಗದ ವರದಿ ಜಾರಿಯಾಗುತ್ತಿಲ್ಲ. ಯಾರದೋ ಒತ್ತಡಕ್ಕೆ ಮುಂದೂಡಲಾಗುತ್ತಿದೆ. ಕೂಡಲೇ ಬರುವ ಫೆಬ್ರವರಿ ಬಜೆಟ್ ಮಂಡನೆ ಅಧಿವೇಶನದಲ್ಲಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಸದಾಶಿವ ಆಯೋಗದ ವರದಿ ಜಾರಿಗೆ ತರದೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಖಚಿತ ಎಂದು ಹೇಳಿದರು.
ಮೂಢನಂಬಿಕೆ ವಿರೋಧಿ ಕಾನೂನು ಜಾರಿ ತಂದಿದ್ದಕ್ಕೆ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರನ್ನು ನೇಮಕ ಮಾಡಿದ್ದನ್ನು ಸ್ವಾಗತಿಸಿದ ಅವರು, ಪರಿಶಿಷ್ಟ ನೌಕರರ ಮುಂಬಡ್ತಿಗೆ ಸಂಬಂಧಿ ಸಿದಂತೆ ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಬೆಂಬಲಿಸಿದರು. ಸತೀಶ ಮಾಲೆ, ವಿಶಾಲ ಆಜಾದಪುರ, ಸಂತೋಷ ಅಂಕಲಗಿ, ಕೃಷ್ಣಾ ಮದನಕರ, ಪವನಕುಮಾರ ಖೇಣಗಿ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು
ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್ ಆಗ್ರಹ
76,000 ಅಂಕ ತಲುಪಿದ್ದ ಬಿಎಸ್ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ
Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ
Delhi; ಬಿಭವ್ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್