ಹಳೆ ಪಿಂಚಣಿಗಾಗಿಅ.3 ರಂದು ರಕ್ತದಾನ ಕ್ರಾಂತಿ
Team Udayavani, Oct 1, 2018, 11:16 AM IST
ಅಫಜಲಪುರ: ಎನ್ಪಿಎಸ್ ನೌಕರರಿಗೆ ಹಳೆಯ ಪಿಂಚಣಿ ರದ್ದುಗೊಳಿಸಿ ನೂತನ ಪಿಂಚಣಿ ಪದ್ಧತಿ ಜಾರಿಗೊಳಿಸಿದ್ದರಿಂದ
ಭಾರಿ ಅನ್ಯಾಯವಾಗುತ್ತಿದೆ. ಹೀಗಾಗಿ ಹಳೆಯ ಪಿಂಚಣಿ ಮುಂದುವರಿಸುವಂತೆ ಒತ್ತಾಯಿಸಿ ಅ. 3ರಂದು ರಕ್ತದಾನ
ಮಾಡಿ ಸಂಬಂಧ ಪಟ್ಟವರನ್ನು ಎಚ್ಚರಿಸುವ ಕೆಲಸ ಮಾಡಲಾಗುತ್ತದೆ ಎಂದು ಎನ್ಪಿಎಸ್ ನೌಕರರ ಸಂಘದ
ತಾಲೂಕು ಅದ್ಯಕ್ಷ ರವಿಕಾಂತ ಬಿರಾದಾರ ಹಾಗೂ ಕಾರ್ಯದರ್ಶಿ ಮಹೇಶ ಅಂಜುಟಗಿ ತಿಳಿಸಿದರು.
ಪಟ್ಟಣದ ಮಳೇಂದ್ರ ಮಠದಲ್ಲಿ ಅ.3ರಂದು ನಡೆಯುವ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲು ಆಹ್ವಾನ ನೀಡಿ ಮಾತನಾಡಿದ ಅವರು, ಹಳೆಯ ಪಿಂಚಣಿ ಯೋಜನೆ ನಮಗೆ ವರದಾನವಾಗಿತ್ತು. ನೂತನ ಪಿಂಚಣಿ ವ್ಯವಸ್ಥೆಯಿಂದ ನಮ್ಮ ಸಂಧ್ಯಾಕಾಲದ ಜೀವನಕ್ಕೆ ಮಾರಕವಾಗಿದೆ. ಹೀಗಾಗಿ ನೂತನ ಪಿಂಚಣಿ ವ್ಯವಸ್ಥೆ ಕೈಬಿಡಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸಂಬಂಧಪಟ್ಟವರು ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.
ರಕ್ತದಾನ ಶಿಬಿರ ಯಶಸ್ವಿಗೆ ಎಲ್ಲ ಎನ್ಪಿಎಸ್ ನೌಕರರು ಬಂದು ಸಹಕರಿಸಬೇಕು. ಇದು ಕೇವಲ ರಕ್ತದಾನ ಶಿಬಿರವಲ್ಲ,
ನೌಕರರ ಬದುಕಿನ ಹೋರಾಟವಾಗಿದೆ ಎಂದರು. ಹೈದರ್ ಚೌಧರಿ, ವಿಜಯ, ಮಹಾಂತೇಶ ನಡುವಿನಮನಿ,
ಶಿವಾನಂದ ಸ್ವಾಮಿ, ಹನುಮೇಶ ಇಳಗೇರ, ಜಗದೀಶ ಭಜಂತ್ರಿ, ಸಿದ್ದಾರಾಮ ಸಂಗೋಳಗಿ, ಜಯಕುಮಾರ ಕೋಣಿನ್, ಸೈಬಣ್ಣ ಅಲ್ದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ