ಸಂವಿಧಾನ-ವಚನ ಎರಡೂ ಒಂದೇ


Team Udayavani, Jan 22, 2018, 10:48 AM IST

gul-.jpg

ಸೇಡಂ: 12ನೇ ಶತಮಾನದ ಶರಣರು ನೀಡಿ ಹೋದ ವಚನಗಳು ಮತ್ತು ಡಾ| ಬಿ.ಆರ್‌.ಅಂಬೇಡ್ಕರ್‌ ರಿಂದ ರಚಿತವಾದ ಸಂವಿಧಾನ ಎರಡೂ ಒಂದೇ ಸಂದೇಶ ನೀಡುತ್ತವೆ ಎಂದು ಮೈಸೂರು ಉರಿಲಿಂಗ ಪೆದ್ದಿ ಸಂಸ್ಥಾನದ ಜ್ಞಾನಪ್ರಕಾಶ ಸ್ವಾಮೀಜಿ ಪ್ರತಿಪಾದಿಸಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶರಣರ ವಚನಗಳ ಪ್ರತಿಯೊಂದು ಸಾರ ಸಂವಿಧಾನದಲ್ಲೂ ಇದೆ. ಇಂದು ಸಮಾಜದಲ್ಲಿ ಬೇರೂರಿರುವ ಮೌಡ್ಯತೆ, ಭ್ರಷ್ಟಾಚಾರ, ಕಂದಾಚಾರ, ಅನ್ಯಾಯ ಸರಿಪಡಿಸಬೇಕಾದರೆ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳೇ ದಿವ್ಯೌಷಧ. ಅಂಬಿಗರ ಚೌಡಯ್ಯ ಭಾರತದ ದಾರ್ಶನಿಕ ಶರಣರು. ಭಾರತದಲ್ಲಿ ಕ್ರಾಂತಿಯ ಕಿಡಿ ಹಚ್ಚಿದವರು. ಆದರೆ ಇಂದಿನ ಜನ ಮಹಾತ್ಮರನ್ನು ಜಾತಿಯ ಜೈಲಿಗೆ ಸೇರಿಸುತ್ತಿದ್ದಾರೆ. ಜಾತಿಮುಕ್ತ ಸಮಾಜ ನಿರ್ಮಿಸುವ ಶರಣರ
ಕನಸನ್ನು ನುಚ್ಚು ನೂರು ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮಹದಾಸೆ ಹೊತ್ತು ಇಡೀ ದೇಶಕ್ಕೆ ಸಮಾಜವನ್ನು ಪರಿಚಯಿಸಿದ ಮಾಜಿ ಮುಖ್ಯ ಸಚೇತನ ದಿ. ವಿಠ್ಠಲ ಹೇರೂರ ಅವರ ಕನಸು ನನಸು ಮಾಡಬೇಕಾದರೆ ಒಗ್ಗಟ್ಟು ಪ್ರದರ್ಶಿಸಬೇಕು. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇದ್ದ ಪ್ರಜಾಪ್ರಭುತ್ವ ಈಗ ಕೆಲವರಿಂದ, ಕೆಲವರಿಗಾಗಿ, ಕೆಲವರಿಗೋಸ್ಕರ ಸೀಮಿತವಾಗುತ್ತಿರುವುದು ವಿಷಾದನೀಯ. ಈಗಿರುವ ಪ್ರಜಾಪ್ರಭುತ್ವ ನಕಲು ಪ್ರಜಾಪ್ರಭುತ್ವ ಎಂದು
ಆಕ್ರೋಶ ವ್ಯಕ್ತಪಡಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ ಮೆರವಣಿಗೆಗೆ ಚಾಲನೆ ನೀಡಿದರು. ಶಿವಕುಮಾರ ಜುಲ್ಪಿ ರಚಿತ ವಿಶ್ವಮಾನವ ಅಂಬಿಗರ ಚೌಡಯ್ಯ ಪುಸ್ತಕ ಬಿಡುಗಡೆ ಮಾಡಲಾಯಿತು.

ಹಾಪಕಾಮ್ಸ್‌ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರರಾವ್‌ ಮಾಲಿಪಾಟೀಲ, ಎಪಿಎಂಸಿ ಅಧ್ಯಕ್ಷ ಗುರುನಾಥರೆಡ್ಡಿ ಪಾಟೀಲ, ಜಿಪಂ ಸದಸ್ಯ ದಾಮೋದರರೆಡ್ಡಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ, ಕೋಲಿ ಸಮಾಜ ತಾಲೂಕು ಅಧ್ಯಕ್ಷ ಭೀಮರಾವ್‌ ಅಳ್ಳೊಳ್ಳಿ, ಮುಖಂಡರಾದ ಸಿದ್ದು ಬಾನಾರ್‌, ಮಲ್ಲಿಕಾರ್ಜುನ ಗುಡ್ಡದ, ಅರ್ಜುನ ಚನ್ನಕ್ಕಿ, ಸೋಮಶೇಖರ ಬಿಬ್ಬಳ್ಳಿ, ನಾಗಪ್ಪ ಕೊಳ್ಳಿ, ಸುದರ್ಶನರೆಡ್ಡಿ ಪಾಟೀಲ, ರುದ್ರು ಪಿಲ್ಲಿ, ಜಗನ್ನಾಥ ಪಾಟೀಲ ಇದ್ದರು.

ಕಾರ್ಯಾಧ್ಯಕ್ಷ ಶರಣಪ್ಪ ಎಳ್ಳಿ ವಚನ ಗಾಯನ ನಡೆಸಿಕೊಟ್ಟರು. ರವಿಕುಮಾರ ಕುದುರೇನ ನಿರೂಪಿಸಿದರು.
ಶೃತಿ ಭೀಮರಾಯ ಅಳ್ಳೊಳ್ಳಿ ಸ್ವಾಗತ ಗೀತೆ ಹಾಡಿದರು. ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಸ್ವಾಗತಿಸಿದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.