ಅಕ್ರಮ ಮರಳು ದಂಧೆ ವಿರುದ್ಧ ಬೊಬ್ಬೆ ಚಳವಳಿ
Team Udayavani, Feb 23, 2018, 11:07 AM IST
ಕಲಬುರಗಿ: ತಾಲೂಕಿನ ಫಿರೋಜಾಬಾದ್ ಗ್ರಾಮದ ಬಳಿ ಇರುವ ಭೀಮಾ ನದಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿ ಫಿರೋಜಾಬಾದ್ ಗ್ರಾಮಸ್ಥರು ನಗರದಲ್ಲಿ ಗುರುವಾರ ಬೊಬ್ಬೆ ಚಳವಳಿ ನಡೆಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಪ್ರತಿಭಟನೆಕಾರರು, ಅಕ್ರಮ ಮರಳು ಸಾಗಣೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಭೀಮಾ ನದಿಯಲ್ಲಿ ಮರಳು ಸಾಗಿಸಲು ಅಡ್ಡಲಾಗಿ ಅನಧಿಕೃವಾಗಿ ನಿರ್ಮಿಸಲಾಗಿರುವ ರಸ್ತೆ ತೆರವುಗೊಳಿಬೇಕು. ಭೂಮಿ ಕೊಚ್ಚಿಕೊಂಡು ಹೋಗದಿರಲು ಹಾಗೂ ಜೀವ ಜಲ ರಕ್ಷಿಸಲು ಅಕ್ರಮ ಮರಳು ಸಾಗಣೆ ತಡೆಯಬೇಕು ಎಂದು ಒತ್ತಾಯಿಸಿದರು.
ಅಕ್ರಮ ಮರಳು ಸಾಗಣೆಯಿಂದ ಈಗಾಗಲೇ ಗ್ರಾಮಸ್ಥರು ಹಲವಾರು ತೊಂದರೆಗಳನ್ನು ಎದಿರುಸುತ್ತಿದ್ದಾರೆ. ಜನ ಹಾಗೂ ಜಾನುವಾರುಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಮಳೆ ಬಂದಾಗ ಪ್ರವಾಹ ಉಂಟಾಗಿ ಭೂಮಿ ಕೊಚ್ಚಿಕೊಂಡು ಹೋಗಿ ಬೆಳೆ ನಾಶವಾಗಿದೆ. ಆದ್ದರಿಂದ ಕೂಡಲೇ ಅಕ್ರಮ ಮರಳು ಸಾಗಣೆ ಸಂಪೂರ್ಣವಾಗಿ ತಡೆಯುವಂತೆ ಅವರು ಆಗ್ರಹಿಸಿದರು. ಗ್ರಾಮದ ಗಣ್ಯ ಅಬ್ದುಲ್ ಲತೀಫ್ ಎಸ್.ಎಂ. ಜಾಗೀರದಾರ ಅವರ ನೇತೃತ್ವದಲ್ಲಿ ನಗರದ ತಹಶೀಲ್ದಾರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆದ ಬೊಬ್ಬೆ ಚಳವಳಿಯಲ್ಲಿ ಮಹಿಳೆಯರು ಹಾಗೂ ಮಕ್ಕಳೂ ಸಹ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ