ಲಂಚ ಸ್ವೀಕಾರ ಪ್ರಕರಣ: ಅಪರಾಧಿಗೆ 9 ವರ್ಷದ ನಂತರ ಶಿಕ್ಷೆ ಪ್ರಕಟ
Team Udayavani, Aug 28, 2020, 12:50 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ಆಶ್ರಯ ಯೋಜನೆಯ ಫಲಾನುಭವಿಗೆ ಎರಡನೇ ಕಂತಿನ ಚೆಕ್ ನೀಡಲು ಲಂಚ ಸ್ವೀಕರಿಸಿದ ಭ್ರಷ್ಟ ಪಂಪ್ ಆಪರೇಟರ್ ಗೆ ಬರೋಬ್ಬರಿ 9 ವರ್ಷ 2 ತಿಂಗಳ ನಂತರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಜಿಲ್ಲೆಯ ಆಳಂದ ತಾಲೂಕಿನ ಬೆಳಮಗಿ ಗ್ರಾಮ ಪಂಚಾಯಿತಿಯ ಪಂಪ್ ಆಪರೇಟರ್ ಅಂಬಾಜಿ ಮಾನೆ ಎಂಬಾತನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಭಾರತೀಯ ದಂಡ ಸಂಹಿತೆಯ ಕಲಂ 7ರ ಅಡಿಯಲ್ಲಿ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ಹಾಗೂ 13 (1) (ಡಿ), 13 (2) ಲಂಚ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ 4 ವರ್ಷ ಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ.
ಏನಿದು ಪ್ರಕರಣ? ಬೆಳಮಗಿ ಗ್ರಾಮದ ಜಗದೇವಿ ಕಸನಕರ ಎಂಬುವರು 2009ನೇ ಸಾಲಿನ ಆಶ್ರಯ ಯೋಜನೆ ಫಲಾನುಭವಿಯಾಗಿ ಆಯ್ಕೆಯಾಗಿರುತ್ತಾರೆ. ಇವರಿಗೆ 2ನೇ ಕಂತಿನ ಹಣದ ಚೆಕ್ ನೀಡಲು ಪಂಪ್ ಆಪರೇಟರ್ ಅಂಬಾಜಿ 2 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿರುತ್ತಾನೆ.
ಅಂತೆಯೇ 2011ರ ಜೂ.30ರಂದು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಫಲಾನುಭವಿ ಜಗದೇವಿ ಅವರಿಂದ ಅಂಬಾಜಿ ಲಂಚ ಸ್ವೀಕರಿಸುವ ಖಚಿತ ಮಾಹಿತಿ ಮೇರೆಗೆ ಅಂದಿನ ಲೋಕಾಯುಕ್ತ ಇನ್ಸ್ ಪೆಕ್ಟರ್ ವಿನಾಯಕ ಬಡಿಗೇರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ಆರೋಪಿಯನ್ನು ಬಲೆಗೆ ಕಡೆವಿರುತ್ತಾರೆ.
ತದ ನಂತರ ಈ ಪ್ರಕರಣದ ತನಿಖೆಯನ್ನು ಇನ್ಸ್ ಪೆಕ್ಟರ್ ಜೇಮ್ಸ್ ಮಿನೇಜಸ್ ನೇತೃತ್ವದ ತಂಡ ಪೂರ್ಣಗೊಳಿಸಿ 2014ರ ಜ.6ರಂದು ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿರುತ್ತಾರೆ. ಇದೇ 26ರಂದು ಜಿಲ್ಲಾ ಪ್ರಧಾನ ಹಾಗು ವಿಶೇಷ ಸತ್ರ ನ್ಯಾಯಾಧೀಶ ಆರ್.ಜೆ.ಸತೀಶ ಸಿಂಗ್ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದಾರೆ.
ಮುಖ್ಯ ಪೇದೆಗಳಾದ ಸಾತಲಿಂಗಪ್ಪ, ಅಬ್ದುಲ್ ನಬಿ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದಲ್ಲಿ ಒದಗಿಸಿ ಉತ್ತಮ ಕಾರ್ಯ ನಿರ್ವಹಿಸಿರುತ್ತಾರೆ. ಲೋಕಾಯುಕ್ತದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ವಿರುಪಣ್ಣ ವಾದವನ್ನು ಮಂಡಿಸಿರುತ್ತಾರೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು