ಅನಂತ ಅಲ್ಲ, ಬಿಎಸ್ವೈನೇ ಸಿಎಂ: ಪುರಂದೇಶ್ವರಿ
Team Udayavani, Mar 16, 2018, 12:09 PM IST
ಆಳಂದ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ.
ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣೆ ಸಹ ಉಸ್ತುವಾರಿ ಪುರಂದೇಶ್ವರಿ ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಅವರ ಬದಲು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆಯಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಪಕ್ಷದ ನಾಯಕರು. ಅವರ ಅಧಿಕಾರದಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಹಿಂದುಳಿದ ಹೈ.ಕ. ಪ್ರದೇಶಕ್ಕೆ ಹೆಚ್ಚಿನ ಒತ್ತುಕೊಟ್ಟು ನೀರಾವರಿ, ರಸ್ತೆ ಹೀಗೆ ಪ್ರಮುಖ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ಮುಂದೆಯೂ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಪಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಉತ್ತರ ಪ್ರದೇಶದಲ್ಲಿ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವಾದ ಬಗ್ಗೆ ಸಮೀಕ್ಷೆ ನಡೆಸಲಾಗುವುದು. ಕರ್ನಾಟಕದಲ್ಲಿ ಧರ್ಮದ ಹೆಸರಿನಲ್ಲಿ ಜಗಳ ಹಚ್ಚಿ ಒಡಕು ಮಾಡುತ್ತಿರುವುದರಿಂದ ಜನರು ಬೇಸತ್ತು ಬಿಜೆಪಿಗೆ ಸಕಾರಾತ್ಮಕವಾಗಿ ಸ್ಪಂದಿಸಲು ಮುಂದಾಗಿದ್ದಾರೆ. ಹಾಗಾಗಿ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಸುಭಾಷ ಗುತ್ತೇದಾರ, ಜಿಪಂ ಅಧ್ಯಕ್ಷೆ ಸುವರ್ಣ ಮಲಾಜಿ, ಸದಸ್ಯ ಹರ್ಷಾನಂದ ಗುತ್ತೇದಾರ, ತಾಪಂ ಅಧ್ಯಕ್ಷೆ ನಾಗಮ್ಮ ಗುತ್ತೇದಾರ, ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್