ಫಲಪುಷ್ಪ ಪ್ರದರ್ಶನದಲ್ಲಿ ಬುದ್ಧ ಮಂದಿರ ಮಾದರಿ


Team Udayavani, Jan 28, 2018, 3:55 PM IST

gul-4.jpg

ಕಲಬುರಗಿ: ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ನೋಟ ಮತ್ತು ಕೆಲಸದ ವೈಖರಿ ಬದಲಾಗುತ್ತಿದೆ. ನಿಧಾನಕ್ಕೆ ರೈತ ಸ್ನೇಹಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಅಲ್ಲದೆ, ರೈತರನ್ನು ವಾಣಿಜ್ಯ ಕೃಷಿಯ ಕಡೆಗೆ ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ಜ. 29ರಿಂದ ನಗರದ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಆರಂಭವಾಗುವ ಫಲಪುಷ್ಪ ಪ್ರದರ್ಶನ ಗಮನ ಸೆಳೆಯುವಂತೆ ಮಾಡಲಾಗುತ್ತಿದೆ.

ಜಿಲ್ಲೆಯ ತೋಟಗಾರಿಕೆ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನ ಗಾಜಿನ ಮನೆಯಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಂತೆಯೇ ಕಲಬುರಗಿಯಲ್ಲಿ ಈ ಬಾರಿ ವಿಶೇಷವಾಗಿ ಏರ್ಪಾಡು ಮಾಡಲಾಗುತ್ತಿದೆ. ಅದಕ್ಕಾಗಿ ಈ ಭಾಗದಲ್ಲಿ ಪ್ರಸಿದ್ದಗೊಂಡಿರುವ ಮತ್ತು ದೇಶವನ್ನು ಸೆಳೆದಿರುವ ಬುದ್ಧ ಮಂದಿರದ ಮಾದರಿಯನ್ನು ಪ್ರದರ್ಶನದಲ್ಲಿ ಇಡಲಾಗುತ್ತಿದೆ. ಜೊತೆಯಲ್ಲಿ ವಿಮಾನದ ಮಾದರಿ ಹಾಗೂ ಅಣಬೆ ಕುರಿತು ವಿಶೇಷ ಭೂಮಿಕೆಯನ್ನು ಸಜ್ಜು ಮಾಡಲಾಗಿದೆ.

ಈ ಬಾರಿ ನಾಲ್ಕು ಸಾವಿರಕ್ಕೂ ಹೆಚ್ಚು ರೈತರು ಬೇಟಿ ನೀಡಿ ಪ್ರದರ್ಶನವನ್ನು ವೀಕ್ಷಿಸುವ ಸಾಧ್ಯತೆ ಇದೆ. ಇದರೊಂದಿಗೆ ಒಟ್ಟು 30 ವಿವಿಧ ಪ್ರಕಾರದ ತರಕಾರಿಗಳು, 300ರಿಂದ 400 ಜನರ ರೈತರು ತಮ್ಮ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಡುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಾರಿಯ ವಿಶೇಷ ಎಂದರೆ ನೆರಳು ಪರದೆ ಮತ್ತು ಗ್ರೀನ್‌ಹೌಸ್‌ (ಪಾಲಿಹೌಸ್‌, ಸೆಡ್‌ನೆಟ್‌) ಮಾದರಿಗಳನ್ನು ಇಡಲಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ರೈತರನ್ನು ಅವುಗಳಕಡೆಗೆ ಸೆಳೆಯುವುದು ಆಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ತರಕಾರಿಗಳ ಜೊತೆಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ವಿವಿಧ ಪ್ರಕಾರದ ಹೂವುಗಳ ಪ್ರದರ್ಶನ ಹೆಚ್ಚು ಕಾಣಲಿದೆ. ಬುದ್ಧ ಮಂದಿರದ ಮಾದರಿಯನ್ನು ಹೂವುಗಳಿಂದ ಅಲಂಕರಿಸಲಾಗುತ್ತಿದೆ. ಬಣ್ಣ ಬಣ್ಣದ ಹೂವುಗಳು ಈ ಬಾರಿ ಹೆಚ್ಚು ಆಕರ್ಷಣೀಯವಾಗಿದ್ದು, ಸೇಡಂ ಮತ್ತು ಕಲಬುರಗಿ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಜರ್ಬೆರಾ, ಗುಲಾಬಿ, ಆರ್ಸೆನಿಕ್‌ ಮಾದರಿಯ ಹೂವುಗಳು ಈ ಬಾರಿಯ ಆಕರ್ಪಣೆಯಾಗಿರಲಿವೆ. ಅಲ್ಲದೆ ತರಕಾರಿಗಳಲ್ಲಿ ವಿವಿಧ ಬಣ್ಣದ ಡೊಣ್ಣ ಮೆಣಸಿನಕಾಯಿ, ಟಮೆಟೋ, ಸೇರಿದಂತೆ ದ್ರಾಕ್ಷಿ, ದಾಳಿಂಬೆ, ಕಬ್ಬು, ಕಲ್ಲಂಗಡಿ, ಬದನೆ, ಈರುಳ್ಳಿ, ಮೆಣಸಿನಕಾಯಿ, ಬಾಳೆ, ಮೋಸಂಬಿಗಳು ಇರಲಿವೆ. 

ಆಕರ್ಷಣೆಗಳು: ತರಕಾರಿಯಲ್ಲಿ ವಿವಿಧ ಗಣ್ಯರ, ಕವಿಗಳ ಹಾಗೂ ಪ್ರಾಣಿಗಳ ಕೆತ್ತನೆ, ಇಕೆಬಾನಾ, ಹೂವಿನಲ್ಲಿ ನಿರ್ಮಾಣಗೊಂಡ ಕಲಾಕೃತಿಗಳು, ಡ್ರೈಪ್ಲಾವರ್‌ಗಳ ಜೋಡಣೆಯ ಜೊತೆಯಲ್ಲಿ ಹೂವುಗಳ ಮಧ್ಯೆ ಆಕರ್ಷಕ ಸ್ತಬ್ಧ ಚಿತ್ರಗಳನ್ನು ಇಡಲಾಗುವುದು. ಕಲಬುರಗಿಯಲ್ಲೂ ಬೆಂಗಳೂರಿನ ಆಕರ್ಷಣೆ ಮೂಡಿಸುವುದು ಮತ್ತು ಹೈಕ ಭಾಗದಲ್ಲಿ ತೋಟಗಾರಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಪ್ರದರ್ಶನವನ್ನು ತುಂಬಾ ವ್ಯವಸ್ಥಿತವಾಗಿ ಆಯೋಜನೆ ಮಾಡಲಾಗುತ್ತಿದೆ. ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಪ್ರತಿ ದಿನವೂ ಬೆಳಗ್ಗೆ 9ರಿಂದ ಸಂಜೆ 8 ಗಂಟೆ ವರೆಗೆ ವೀಕ್ಷಿಸಬಹುದು. 29ರಂದು ಸಂಜೆ 4:30ಕ್ಕೆ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಉದ್ಘಾಟಿಸುವರು.’

ಹೊಸ ತಲೆಮಾರಿಗೆ ಹೆಜ್ಜೆ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನದ ಮೂಲ ಆಶಯವನ್ನು ಬದಲಾಯಿಸಲಾಗುತ್ತಿದೆ. ರೈತರಿಗೆ ಮತ್ತು ಯುವಕರಿಗೆ ಉತ್ತೇಜನ ಮತ್ತು ತೋಟಗಾರಿಕೆಯ ಹರಡುವಿಕೆಗಾಗಿ
ಕೆಲವು ವಿಶೇಷತೆ ಹೊಂದಲಾಗಿದೆ. ಬುದ್ಧ ಮಂದಿರದ ಮಾದರಿಯನ್ನು ಹೂವುಗಳ ಮಧ್ಯೆ ಇರಿಸಲಾಗುತ್ತಿದೆ. ಆದ್ದರಿಂದ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಮ್ಮ ಪ್ರದರ್ಶನ ನೋಡಬೇಕು.
 ಮೊಹಮ್ಮದ್‌ ಅಲಿ, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ 

ಸೂರ್ಯಕಾಂತ ಎಂ.ಜಮಾದಾರ

ಟಾಪ್ ನ್ಯೂಸ್

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.