ಕಾಂಗ್ರೆಸ್‌ ನಾಯಕರಿಗೆ ಬುದ್ದಿ ಭ್ರಮಣೆ: ಖೂಬಾ


Team Udayavani, Mar 27, 2022, 10:29 AM IST

Udayavani Kannada Newspaper

ಕಾಳಗಿ: ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್‌ ವಿವಾದದಲ್ಲಿ ಸಂಬಂಧವೇ ಇಲ್ಲದ ಸ್ವಾಮೀಜಿಗಳನ್ನು ಎಳೆಯುತ್ತಿರುವುದು ನೋಡಿದರೆ ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು

ಪಟ್ಟಣದ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ನಾಗರಿಕ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಿದ್ದು, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಜಾತಿಮತಗಳ ವಿಷ ಬೀಜ ಬಿತ್ತಿ ಕೋಮು ಕಲಭೆಗಳನ್ನು ಸೃಷ್ಟಿಸುತ್ತಾ ತಪ್ಪು ಮಾಡುವವರಿಗೆ ಬೆಂಬಲ ನೀಡುತ್ತಿದ್ದಾರೆ. ಶಾಲೆಯ ಮಕ್ಕಳಲ್ಲಿ ಎಲ್ಲರೂ ಸಮಾನರು ಎಂಬ ದೃಷ್ಟಿಯಿಂದ ಶಾಲೆಯಲ್ಲಿ ಹಿಜಾಬ್‌ ಬಳಸದಂತೆ ಕೋರ್ಟ್‌ ತೀರ್ಪು ನೀಡಿದರೂ ಕಾನೂನಿಗೆ ಗೌರವ ಕೊಡದೇ ಕಾಂಗ್ರೆಸ್‌ ನವರು ಅಲ್ಪಸಂಖ್ಯಾತರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ ಸಂಸದ ಡಾ| ಉಮೇಶ ಜಾಧವ ಮಾತನಾಡಿ, ತಾಲೂಕಿನ ಜನರಿಗೆ ನ್ಯಾಯ ಕೊಡಿಸುವಲ್ಲಿ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ ಕೊಡುಗೆ ಅಪಾರವಾಗಿದೆ. ಇವರೊಬ್ಬ ಮಾದರಿ ರಾಜಕಾರಣಿಯಾಗಿದ್ದಾರೆ ಎಂದರಲ್ಲದೇ, ಮುಂದಿನ ಪೀಳಿಗೆಗೆ ಕಾಳಗಿ ತಾಲೂಕು ಕೇಂದ್ರ ಸಾಕಷ್ಟು ಅನುಕೂಲವಾಗುವಂತೆ ಮಾಡಲಾಗುವುದು ಎಂದರು.

ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ನಿಗಮ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ಮಾತನಾಡಿ, 60 ವರ್ಷ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದರೂ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡಿಲ್ಲ. ಮನಸ್ಸು ಮಾಡಿದ್ದರೆ ಡಾ| ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸಚಿವರಾಗಿದ್ದಾಗಲೇ ಈ ಕೆಲಸ ಮಾಡಬಹುದಿತ್ತು. ಆದರೆ ನಮ್ಮನ್ನು ರಾಜಕೀಯವಾಗಿ ಬಳಸಿಕೊಂಡು ದ್ರೋಹ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವ ಭಾರತ ನಿರ್ಮಾಣದ ಕನಸು ಕಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡೇ ತೀರುತ್ತೇನೆ ಎಂದು ಹೇಳಿದರು.

ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಕಾಂಗ್ರೆಸ್‌ ಅವನತಿಯತ್ತ ಸಾಗುತ್ತಿದ್ದು ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಜೀವನಪೂರ್ತಿ ಕಾಂಗ್ರೆಸ್‌ನಲ್ಲಿದ್ದ ನಾನು ಮತ್ತು ಚಿಂಚನಸೂರ ಕೊನೆಗಾಲದಲ್ಲಾದರೂ ದೇಶ, ಧರ್ಮ ರಕ್ಷಣೆಗೆ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷದಲ್ಲಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದರು.

ಕಾಳಗಿ ತಾಲೂಕು ನಾಗರಿಕ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ ಮಾತನಾಡಿ, ಅಭಿನಂದನಾ ಸಮಾರಂಭ ಯಾವುದೇ ರಾಜಕೀಯ ದುರದ್ದೇಶದಿಂದ ಮಾಡಿಲ್ಲ. ತಾಲೂಕಿನ ಇನ್ನುಳಿದ ಅಭಿವೃದ್ಧಿಗಾಗಿ ಮಾತ್ರ ಈ ಕಾರ್ಯಕ್ರಮ ಮಾಡಿದ್ದೇವೆ ಎಂದು ಹೇಳಿದರು.

ಚಿಂಚೋಳಿ-ಕಾಳಗಿ ಶಾಸಕ ಡಾ| ಅವಿನಾಶ ಜಾಧವ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಬಿ.ಜಿ ಪಾಟೀಲ, ನಿವೃತ್ತ ನ್ಯಾಯಾಧಿಧೀಶ ಚನ್ನಮಲ್ಲಪ್ಪ ಬೆನಕನಳ್ಳಿ, ಭೂದಾನಿಗಳಾದ ಶಿವಶರಣಪ್ಪ ಕಮಲಾಪುರ, ನಿಂಗಯ್ಯ ಗುತ್ತೇದಾರ, ತುಳಸಿರಾಮ ಚವ್ಹಾಣ, ಅಸ್ಲಂಬೇಗ್‌ ಬಿಜಾಪುರ ಅವರನ್ನು ನಾಗರಿಕ ಸಮಿತಿಯಿಂದ ಸನ್ಮಾನಿಸಲಾಯಿತು. ಮುಖಂಡರಾದ ಮಲ್ಲಿನಾಥ ಪಾಟೀಲ ಕಾಳಗಿ, ರೇವಣಸಿದ್ಧಪ್ಪ ಮಾಸ್ಟರ್‌ ಚಿಂಚೋಳಿ, ರಮೇಶ ಚಿಂಚನಸೂರ, ಶೇಖರ ಪಾಟೀಲ, ರಾಮಲಿಂಗರೆಡ್ಡಿ ದೇಶಮುಖ, ಶರಣಗೌಡ ಪೊಲೀಸ್‌ ಪಾಟೀಲ, ಶಿವರಾಜ ಪಾಟೀಲ ಗೊಣಗಿ, ಬಸವರಾಜ ಶಿವಗೋಳ, ಜಗದಿಧೀಶ ಪಾಟೀಲ, ಚಂದ್ರಶೇಖರ ಹರಸೂರ, ರಾಜಕುಮಾರ ರಾಜಾಪುರ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.