ಬಸವನ ಹುಳು ಭೂಮಿಯಲ್ಲಿ ಹೂತು ಹಾಕಿ


Team Udayavani, Jul 11, 2022, 12:57 PM IST

8farmers

ಚಿಂಚೋಳಿ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಮಾಡಿದ ಸೋಯಾಬಿನ್‌(ಅವರೇ)ಹೆಸರು, ಉದ್ದು ಬೆಳೆಗಳಿಗೆ ಬಸವನ ಹುಳುಗಳ ಕಾಟ ಕಂಡು ಬಂದಿದ್ದು, ರೈತರು ತಮ್ಮ ಹೊಲಗಳಿಗೆ ಹೋಗಿ ಬಸವನ ಹುಳುಗಳನ್ನು ಆಯ್ದು ಅವುಗಳನ್ನು ಭೂಮಿಯಲ್ಲಿ ಹೂತು ಹಾಕಬೇಕು ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೊಡ ತಿಳಿಸಿದರು.

ಕೃಷಿ ಇಲಾಖೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಹಲಚೇರಾ, ತೇಗಲತಿಪ್ಪಿ, ಸುಂಠಾಣ, ಗಡಿಕೇಶ್ವಾರ, ಕನಕಪುರ ಗ್ರಾಮಗಳ ಹೊಲಗಳಲ್ಲಿ ಭಾರಿ ಪ್ರಮಾಣದಲ್ಲಿ ಬಸವನ ಹುಳುಗಳು ಕಂಡು ಬಂದಿದ್ದು, ಸೋಯಾಬಿನ್‌, ಹೆಸರು, ಉದ್ದು ಬೆಳೆಗಳ ಎಲೆ, ಕಾಂಡಗಳನ್ನು ತಿಂದು ಹಾಕಿವೆ ಎಂದು ಹೇಳಿದರು. ಬಸವನ ಹುಳುಗಳು ರಾತ್ರಿ ವೇಳೆ ಬೆಳೆಗಳ ಎಲೆಗಳನ್ನು ಸಂಪೂರ್ಣ ತಿಂದು ನಸುಕಿನಲ್ಲಿ ಮತ್ತೆ ಮಣ್ಣಿನಲ್ಲಿ ಹೂತುಕೊಳ್ಳುತ್ತವೆ. ಬದುಗಳಲ್ಲಿಯೂ ಹೆಚ್ಚು ಕಂಡು ಬರುತ್ತವೆ. ಬೆಳೆಗಳ ಹತ್ತಿರದಲ್ಲಿ ಮಣ್ಣಿನಲ್ಲಿ ತೂತು ಕಂಡು ಬಂದರೆ ಅವುಗಳಲ್ಲಿ ಬಸವನ ಹುಳುಗಳು ಹುದುಗಿಕೊಳ್ಳುತ್ತಿವೆ. ಆದ್ದರಿಂದ ರೈತರು ಹುಳುಗಳನ್ನು ಆಯ್ದು ಮಣ್ಣಿನಲ್ಲಿ ಹೂತು ಹಾಕಬೇಕು. ಇಲ್ಲವೇ ಉಪ್ಪು ಸುರಿದರೆ ಸಾಯುತ್ತವೆ ಎಂದು ತಿಳಿಸಿದರು.

ನಕಲಿ ಬೀಜ ಅಲ್ಲ; ತಾಲೂಕಿನ ಕೆಲವು ರೈತರು ಸೋಯಾಬಿನ್‌ ಬೀಜಗಳು ನಕಲಿ ಎಂದು ತಿಳಿಸಿದ್ದಾರೆ. ಆದರೆ ಕೃಷಿ ಇಲಾಖೆಯಿಂದ ನೀಡಿದ ಎಲ್ಲ ಬಿತ್ತನೆ ಬೀಜಗಳನ್ನು ಬೀಜೋಪಚಾರ ಮಾಡಿ ರೈತರಿಗೆ ನೀಡಲಾಗಿದೆ. ಕೆಲವು ದಿನಗಳಿಂದ ಬಸವನ ಹುಳಗಳ ಕಾಟ ನೆರೆಯ ಬೀದರ ಮತ್ತು ಕಲಬುರಗಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಂಡು ಬಂದಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಒಟ್ಟು 97,937ಹೆಕ್ಕೇರ್‌ ಬಿತ್ತನೆ ಗುರಿಯಿದೆ. ಈಗಾಗಲೇ 80,718 ಹೆಕ್ಟೇರ್‌ ಬಿತ್ತನೆಯಾಗಿದೆ. ತೊಗರಿ 56052 ಹೆಕ್ಟೇರ್‌, ಉದ್ದು 5895 ಹೆಕ್ಟೇರ್‌, ಹೆಸರು 11632 ಹೆಕ್ಟೇರ್‌, ಸೋಯಾ 5900 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಜುಲೈ 8ರ ವರೆಗೆ ಒಟ್ಟು 159 ಎಂಎಂ ಮಳೆ ಆಗಿದ್ದು, ಶೇ. 80 ಬಿತ್ತನೆ ಆಗಿದೆ. ಬಸವನ ಹುಳಗಳ ಹತೋಟಿಗಾಗಿ ಕೃಷಿ ಇಲಾಖೆಯಿಂದ ಮೆಟಾಲಟಿ ಹೈಡ್‌ ಪೌಡರ ಸಿಂಪರಣೆ ಮಾಡಬೇಕು. ಇದರ ಬಗ್ಗೆ ಪ್ರತಿಯೊಂದು ಗ್ರಾಮಗಳಲ್ಲಿ ಡಂಗೂರ ಸಾರಿ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸದ್ಯ ನಮ್ಮ ಇಲಾಖೆಯಲ್ಲಿ ಮೆಟಾಲಿಟಿ ಹೈಡ ಪೌಡರ್‌ ಕಲಬುರಗಿ, ಬೀದರ ಜಿಲ್ಲೆಯಲ್ಲಿ ಸಿಗುತ್ತಿದೆ. ರೈತರು ಖರೀದಿಸಿ ಸಿಂಪರಣೆ ಮಾಡಿ ಬೆಳೆ ಉಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕೃಷಿ ಅಧಿಕಾರಿಗಳಾದ ಅಭಿಲಾಷ ಸುಬೇದಾರ ಚಿಮ್ಮನಚೋಡ, ಗುರುಪಾದಪ್ಪ ಸುಲೇಪೇಟ, ರಘುವೀರ ಚಿಂಚೋಳಿ, ಸೈಫನ ಮುಲ್ಲಾ ಕೋಡ್ಲಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.