ಬೆಂಕಿ ಬಿಸಿಲಲ್ಲಿ ಬಸ್‌ಗೆ ಕಾಯ್ತಾರೆ ಬಾಲೆಯರು


Team Udayavani, Mar 15, 2022, 12:46 PM IST

9bus

ವಾಡಿ: ಉಸ್ಸೆಂದು ಉಸಿರು ಬಿಡುವ ರಣಬಿಸಿಲಿನಲ್ಲಿ ನಿಂತು ಬಸ್ಸಿಗಾಗಿ ಕಾಯುವ ಸಂಕಟದ ಪರಿಸ್ಥಿತಿ ಚಿತ್ತಾಪುರ ತಾಲೂಕಿನ ವಾಡಿ ನಗರದಲ್ಲಿದ್ದು, ಕಳೆದ 75 ವರ್ಷಗಳಿಂದ ಬಸ್‌ ನಿಲ್ದಾಣ ಸೌಲಭ್ಯದಿಂದ ವಂಚಿತರಾಗಿರುವ ಇಲ್ಲಿನ ಜನತೆ ಯಾರಿಗೆ ಬಂತು ಸ್ವಾತಂತ್ರ್ಯ ಎಂದು ಕೇಳುತ್ತಿದ್ದಾರೆ.

ರಸ್ತೆ ಅತಿಕೃಮಿತ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದ ನಂತರ ಸ್ಥಳೀಯರು ಗುಣಮಟ್ಟದ ಸಿಸಿ ರಸ್ತೆ ಕಾಣುವಂತಾಗಿದೆ. ಸಾರಿಗೆ ಸೌಲಭ್ಯವಿಲ್ಲದ ಕಾರಣ ದಶಕದ ಹಿಂದೆ ಲಾರಿ, ಜೀಪು, ಕ್ರೂಸರ್‌, ಟ್ರ್ಯಾಕ್ಟರ್‌ ಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದ ಜನರಿಗೆ ಈಗ ಬಸ್‌ ಸೌಕರ್ಯ ಒದಗಿದ್ದರೂ ನೆರಳಿಗಾಗಿ ಬಸ್‌ ನಿಲ್ದಾಣ ನಿರ್ಮಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ತೋರಿದ್ದಾರೆ.

ರಸ್ತೆ, ಬೀದಿಯಲ್ಲಿ ನಿಂತು ಖಡಕ್‌ ಬಿಸಿಲು ಲೆಕ್ಕಿಸದೇ ಬಸ್ಸಿಗಾಗಿ ಕಾಯುವ ದುಸ್ಥಿತಿ ಪ್ರಯಾಣಿಕರಿಗೆ ಎದುರಾಗಿದೆ. ಪ್ರೌಢ ಶಿಕ್ಷಣಕ್ಕೆಂದು ನಿತ್ಯ ನಗರಕ್ಕೆ ಆಗಮಿಸುವ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ತಾಸುಗಟ್ಟಲೇ ರಸ್ತೆಯಲ್ಲಿ ನಿಂತು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲು ಜಾಗವಿಲ್ಲ, ಕುಡಿಯಲು ನೀರಿಲ್ಲ, ನೆರಳಿನ ಆಸರೆಯಂತೂ ಇಲ್ಲವೇ ಇಲ್ಲ. ಬಸ್‌ ಸೌಕರ್ಯ ಒದಗಿಸಿದ ಆಡಳಿತಕ್ಕೆ ಬಸ್‌ ನಿಲ್ದಾಣ ಒದಗಿಸುವ ಕರ್ತವ್ಯ ಪ್ರಜ್ಞೆ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಚಿತ್ತಾಪುರ ಮತಕ್ಷೇತ್ರದಲ್ಲಿ ಪ್ರಾಣ ತಿನ್ನುವ ಹದಗೆಟ್ಟ ರಸ್ತೆಗಳಿಂದ ಮುಕ್ತಿ ದೊರಕಿಸಿಕೊಟ್ಟಿರುವ ಶಾಸಕ ಪ್ರಿಯಾಂಕ್‌ ಖರ್ಗೆ, ಸಂಸದರಾಗಿದ್ದ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಕಪೆಯಿಂದ ರಾಷ್ಟ್ರೀಯ ಹೆದ್ದಾರಿ-150ನ್ನು ಚಿತ್ತಾಪುರ ಮಾರ್ಗವಾಗಿ ಸಾಗಿಸುವಲ್ಲಿ ಯಶಸ್ಸು ಕಂಡಿದ್ದಾರೆ.

ವಾಡಿ ನಗರ ಮೂಲಕ ಕಲಬುರಗಿ-ಯಾದಗಿರಿ ಜಿಲ್ಲೆಗಳ ಸಂಪರ್ಕಕ್ಕೆ 40ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುವಂತೆ ಮಾಡಿ ಜನತೆಗೆ ಅನುಕೂಲತೆ ಒದಗಿಸಿದ್ದಾರೆ. ಆದರೆ ಸ್ವಾತಂತ್ರ್ಯ ಲಭಿಸಿದ ನಂತರದಿಂದಲೂ ವಾಡಿ ಜನತೆ ಬಸ್‌ ನಿಲ್ದಾಣ ಭಾಗ್ಯ ಕಂಡಿಲ್ಲ.

ನರಕದಂತಿದ್ದ ವಾಡಿ ನಗರಕ್ಕೆ ಕುಡಿಯುವ ನೀರು ಒದಗಿಸಿದ್ದಾರೆ. ಗುಣಮಟ್ಟದ ಸಿಸಿ ರಸ್ತೆಗಳನ್ನು ನಿರ್ಮಿಸಿದ್ದಾರೆ. ದಿನನಿತ್ಯ ತಾಸಿಗೊಂದು ಬಸ್‌ ಸಂಚರಿಸುವ ಅನಿರೀಕ್ಷಿತ ಸೌಕರ್ಯ ಒದಗಿಸಲಾಗಿದೆ. ಆದರೆ ಬಸ್‌ ನಿಲ್ದಾಣ ಸೌಲಭ್ಯ ಮಾತ್ರ ಒದಗಿಸಿಲ್ಲ. ಮಳೆ, ಗಾಳಿ, ಚಳಿ, ಬಿಸಿಲು ಲೆಕ್ಕಿಸದೇ ನಾವು ಪ್ರತಿದಿನ ಬೀದಿಯಲ್ಲೇ ನಿಂತು ಬಸ್ಸಿಗಾಗಿ ಕಾಯುತ್ತೇವೆ. ಹೋಟೆಲ್‌ ಮತ್ತು ಅಂಗಡಿಗಳ ಎದುರು ನಿಲ್ಲಲು ವ್ಯಾಪಾರಿಗಳು ಅವಕಾಶ ನೀಡುವುದಿಲ್ಲ. ಬಸ್‌ ಬರುವವರೆಗೂ ಬಿಸಿಲಲ್ಲಿ ನಿಲ್ಲುವುದು ಅನಿವಾರ್ಯವಾಗಿದೆ. ಯಾವ ತಪ್ಪಿಗಾಗಿ ನಮಗೀ ಶಿಕ್ಷೆ? -ರೂಪಾ ಬಿ.ಕೆ., ಪ್ರೌಢಶಾಲೆ ವಿದ್ಯಾರ್ಥಿನಿ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.